ಚುನಾವಣೆ ಸಮಯದಲ್ಲಿ ಕೃಷಿಕರಿಗೆ ಕೋವಿ ಡಿಪಾಸಿಟ್ ವಿನಾಯತಿಗೆ ಒತ್ತಾಯ | ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಮಹಾಸಭೆಯಲ್ಲಿ ನಿರ್ಣಯ |

March 18, 2023
8:16 PM

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಮಹಾಸಭೆ ಶನಿವಾರ ಪುತ್ತೂರಿನ ತೆಂಕಿಲದ ಚುಂಚಶ್ರೀ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಅಶೋಕ ಕಿನಿಲ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭ ಚುನಾವಣೆಯ ಹೊತ್ತಿನಲ್ಲಿ ಕೃಷಿಕರ ಕೋವಿ ಡಿಪಾಸಿಟ್ ಇಡುವುದನ್ನು ವಿನಾಯತಿ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲು ನಿರ್ಧರಿಸಲಾಯಿತು.

ಚುನಾವಣೆಯ ಸಂದರ್ಭ ಕೃಷಿಕರ ಕೋವಿಯನ್ನು ಡಿಪಾಸಿಟ್ ಇಡಲು ಇಲಾಖೆಗಳಿಂದ ಸೂಚನೆ ಬರುತ್ತಿದೆ. ಕೃಷಿ ರಕ್ಷಣೆಗೆ ನೀಡುವ ಕೋವಿಯನ್ನು ಚುನಾವಣೆಯ ಹೊತ್ತಿನಲ್ಲಿ ಡಿಪಾಸಿಟ್ ಇಡುವುದು ಸೂಕ್ತವಲ್ಲ. ಅದೂ ಅಲ್ಲದೆ ಇಲಾಖೆಗಳಿಗೂ ಇದೊಂದು ಹೊರೆಯಾಗಿದೆ. ಕೃಷಿ ರಕ್ಷಣೆಯ ಉದ್ದೇಶದಿಂದ ಬಳಕೆಯಾಗುವ ಕೋವಿಯ ಮೂಲಕ ಚುನಾವಣೆಯ ಸಮಯದಲ್ಲಿ ಯಾವುದೇ ಗೊಂದಲಗಳು ಆಗಿಲ್ಲ. ಒಂದು ವೇಳೆ ಯಾವುದಾದರೂ ಅನಾಹುತಗಳು ನಡೆದರೆ ಅಂತಹ ವ್ಯಕ್ತಿಗಳ ಕೋವಿ ಲೈಸನ್ಸ್ ರದ್ದು ಮಾಡಲು ಅವಕಾಶ ಇದೆ. ಈಗ ಚುನಾವಣೆಯ ಸಮಯದಲ್ಲಿ ಕೋವಿ ಡಿಪಾಸಿಟ್ ಕೃಷಿಕರಿಗೂ ಸಮಸ್ಯೆಯಾಗುತ್ತಿದೆ. ಈ ಕಾರಣದಿಂದ ಕೋವಿ ಡಿಪಾಸಿಟಿಗೆ ವಿನಾಯಿತಿ ನೀಡಬೇಕಲು ಎಂದು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಲು ನಿರ್ಧರಿಸಲಾಯಿತು.

ಪುತ್ತೂರಿನಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಯ ಹಿನ್ನಲೆಯಲ್ಲಿ ನಡೆಯುತ್ತಿರುವ  ಅಭಿಯಾನಕ್ಕೆ ಅಡಿಕೆ ಬೆಳೆಗಾರರ ಸಂಘದಿಂದಲೂ ಬೆಂಬಲ ವ್ಯಕ್ತಪಡಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಹಿರಿಯ ಸದಸ್ಯರಾದ ದಯಾನಂದ ಕೋಟೆ ಹಾಗೂ ಬಿ ಟಿ ನಾರಾಯಣ ಭಟ್ ಅವರನ್ನು ಗೌರವಿಸಲಾಯಿತು. ಅಡಿಕೆ ಬೆಳೆಗಾರರ ಸಂಘದ ಪರವಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಅಣ್ಣಾ ವಿನಯಚಂದ್ರ ಹಾಗೂ ಕೃಷಿಕ ಎ ಪಿ ಸದಾಶಿವ ಗೌರವಿಸಿದರು.

ಸಂಘದ ವರದಿ ಹಾಗೂ ಲೆಕ್ಕಪತ್ರವನ್ನು ಸಂಘದ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ಮಂಡಿಸಿದರು.ಸಂಘದ ಉಪಾಧ್ಯಕ್ಷ ಎಂ ಜಿ ಸತ್ಯನಾರಾಯಣ ಅಡಿಕೆ ಬೆಳೆಗಾರರ ಸಂಘದ ಬೈಲಾ ತಿದ್ದುಪಡಿ ಬಗ್ಗೆ ಮಾತನಾಡಿದರು. ಮಹೇಶ್ ಪುಚ್ಚಪ್ಪಾಡಿ ಸ್ವಾಗತಿಸಿ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ
ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror