ಚುನಾವಣೆ ಸಮಯದಲ್ಲಿ ಕೃಷಿಕರಿಗೆ ಕೋವಿ ಡಿಪಾಸಿಟ್ ವಿನಾಯತಿಗೆ ಒತ್ತಾಯ | ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಮಹಾಸಭೆಯಲ್ಲಿ ನಿರ್ಣಯ |

March 18, 2023
8:16 PM

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಮಹಾಸಭೆ ಶನಿವಾರ ಪುತ್ತೂರಿನ ತೆಂಕಿಲದ ಚುಂಚಶ್ರೀ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಅಶೋಕ ಕಿನಿಲ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭ ಚುನಾವಣೆಯ ಹೊತ್ತಿನಲ್ಲಿ ಕೃಷಿಕರ ಕೋವಿ ಡಿಪಾಸಿಟ್ ಇಡುವುದನ್ನು ವಿನಾಯತಿ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲು ನಿರ್ಧರಿಸಲಾಯಿತು.

ಚುನಾವಣೆಯ ಸಂದರ್ಭ ಕೃಷಿಕರ ಕೋವಿಯನ್ನು ಡಿಪಾಸಿಟ್ ಇಡಲು ಇಲಾಖೆಗಳಿಂದ ಸೂಚನೆ ಬರುತ್ತಿದೆ. ಕೃಷಿ ರಕ್ಷಣೆಗೆ ನೀಡುವ ಕೋವಿಯನ್ನು ಚುನಾವಣೆಯ ಹೊತ್ತಿನಲ್ಲಿ ಡಿಪಾಸಿಟ್ ಇಡುವುದು ಸೂಕ್ತವಲ್ಲ. ಅದೂ ಅಲ್ಲದೆ ಇಲಾಖೆಗಳಿಗೂ ಇದೊಂದು ಹೊರೆಯಾಗಿದೆ. ಕೃಷಿ ರಕ್ಷಣೆಯ ಉದ್ದೇಶದಿಂದ ಬಳಕೆಯಾಗುವ ಕೋವಿಯ ಮೂಲಕ ಚುನಾವಣೆಯ ಸಮಯದಲ್ಲಿ ಯಾವುದೇ ಗೊಂದಲಗಳು ಆಗಿಲ್ಲ. ಒಂದು ವೇಳೆ ಯಾವುದಾದರೂ ಅನಾಹುತಗಳು ನಡೆದರೆ ಅಂತಹ ವ್ಯಕ್ತಿಗಳ ಕೋವಿ ಲೈಸನ್ಸ್ ರದ್ದು ಮಾಡಲು ಅವಕಾಶ ಇದೆ. ಈಗ ಚುನಾವಣೆಯ ಸಮಯದಲ್ಲಿ ಕೋವಿ ಡಿಪಾಸಿಟ್ ಕೃಷಿಕರಿಗೂ ಸಮಸ್ಯೆಯಾಗುತ್ತಿದೆ. ಈ ಕಾರಣದಿಂದ ಕೋವಿ ಡಿಪಾಸಿಟಿಗೆ ವಿನಾಯಿತಿ ನೀಡಬೇಕಲು ಎಂದು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಲು ನಿರ್ಧರಿಸಲಾಯಿತು.

ಪುತ್ತೂರಿನಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಯ ಹಿನ್ನಲೆಯಲ್ಲಿ ನಡೆಯುತ್ತಿರುವ  ಅಭಿಯಾನಕ್ಕೆ ಅಡಿಕೆ ಬೆಳೆಗಾರರ ಸಂಘದಿಂದಲೂ ಬೆಂಬಲ ವ್ಯಕ್ತಪಡಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಹಿರಿಯ ಸದಸ್ಯರಾದ ದಯಾನಂದ ಕೋಟೆ ಹಾಗೂ ಬಿ ಟಿ ನಾರಾಯಣ ಭಟ್ ಅವರನ್ನು ಗೌರವಿಸಲಾಯಿತು. ಅಡಿಕೆ ಬೆಳೆಗಾರರ ಸಂಘದ ಪರವಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಅಣ್ಣಾ ವಿನಯಚಂದ್ರ ಹಾಗೂ ಕೃಷಿಕ ಎ ಪಿ ಸದಾಶಿವ ಗೌರವಿಸಿದರು.

ಸಂಘದ ವರದಿ ಹಾಗೂ ಲೆಕ್ಕಪತ್ರವನ್ನು ಸಂಘದ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ಮಂಡಿಸಿದರು.ಸಂಘದ ಉಪಾಧ್ಯಕ್ಷ ಎಂ ಜಿ ಸತ್ಯನಾರಾಯಣ ಅಡಿಕೆ ಬೆಳೆಗಾರರ ಸಂಘದ ಬೈಲಾ ತಿದ್ದುಪಡಿ ಬಗ್ಗೆ ಮಾತನಾಡಿದರು. ಮಹೇಶ್ ಪುಚ್ಚಪ್ಪಾಡಿ ಸ್ವಾಗತಿಸಿ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?
September 6, 2026
12:28 PM
by: ದ ರೂರಲ್ ಮಿರರ್.ಕಾಂ
ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!
September 6, 2026
11:11 AM
by: ದ ರೂರಲ್ ಮಿರರ್.ಕಾಂ
ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!
September 6, 2026
10:01 AM
by: ದ ರೂರಲ್ ಮಿರರ್.ಕಾಂ
ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror