Advertisement
ಸುದ್ದಿಗಳು

ಚುನಾವಣೆ ಸಮಯದಲ್ಲಿ ಕೃಷಿಕರಿಗೆ ಕೋವಿ ಡಿಪಾಸಿಟ್ ವಿನಾಯತಿಗೆ ಒತ್ತಾಯ | ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಮಹಾಸಭೆಯಲ್ಲಿ ನಿರ್ಣಯ |

Share

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಮಹಾಸಭೆ ಶನಿವಾರ ಪುತ್ತೂರಿನ ತೆಂಕಿಲದ ಚುಂಚಶ್ರೀ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಅಶೋಕ ಕಿನಿಲ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭ ಚುನಾವಣೆಯ ಹೊತ್ತಿನಲ್ಲಿ ಕೃಷಿಕರ ಕೋವಿ ಡಿಪಾಸಿಟ್ ಇಡುವುದನ್ನು ವಿನಾಯತಿ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲು ನಿರ್ಧರಿಸಲಾಯಿತು.

Advertisement
Advertisement
Advertisement
Advertisement

ಚುನಾವಣೆಯ ಸಂದರ್ಭ ಕೃಷಿಕರ ಕೋವಿಯನ್ನು ಡಿಪಾಸಿಟ್ ಇಡಲು ಇಲಾಖೆಗಳಿಂದ ಸೂಚನೆ ಬರುತ್ತಿದೆ. ಕೃಷಿ ರಕ್ಷಣೆಗೆ ನೀಡುವ ಕೋವಿಯನ್ನು ಚುನಾವಣೆಯ ಹೊತ್ತಿನಲ್ಲಿ ಡಿಪಾಸಿಟ್ ಇಡುವುದು ಸೂಕ್ತವಲ್ಲ. ಅದೂ ಅಲ್ಲದೆ ಇಲಾಖೆಗಳಿಗೂ ಇದೊಂದು ಹೊರೆಯಾಗಿದೆ. ಕೃಷಿ ರಕ್ಷಣೆಯ ಉದ್ದೇಶದಿಂದ ಬಳಕೆಯಾಗುವ ಕೋವಿಯ ಮೂಲಕ ಚುನಾವಣೆಯ ಸಮಯದಲ್ಲಿ ಯಾವುದೇ ಗೊಂದಲಗಳು ಆಗಿಲ್ಲ. ಒಂದು ವೇಳೆ ಯಾವುದಾದರೂ ಅನಾಹುತಗಳು ನಡೆದರೆ ಅಂತಹ ವ್ಯಕ್ತಿಗಳ ಕೋವಿ ಲೈಸನ್ಸ್ ರದ್ದು ಮಾಡಲು ಅವಕಾಶ ಇದೆ. ಈಗ ಚುನಾವಣೆಯ ಸಮಯದಲ್ಲಿ ಕೋವಿ ಡಿಪಾಸಿಟ್ ಕೃಷಿಕರಿಗೂ ಸಮಸ್ಯೆಯಾಗುತ್ತಿದೆ. ಈ ಕಾರಣದಿಂದ ಕೋವಿ ಡಿಪಾಸಿಟಿಗೆ ವಿನಾಯಿತಿ ನೀಡಬೇಕಲು ಎಂದು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಲು ನಿರ್ಧರಿಸಲಾಯಿತು.

Advertisement

ಪುತ್ತೂರಿನಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಯ ಹಿನ್ನಲೆಯಲ್ಲಿ ನಡೆಯುತ್ತಿರುವ  ಅಭಿಯಾನಕ್ಕೆ ಅಡಿಕೆ ಬೆಳೆಗಾರರ ಸಂಘದಿಂದಲೂ ಬೆಂಬಲ ವ್ಯಕ್ತಪಡಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಹಿರಿಯ ಸದಸ್ಯರಾದ ದಯಾನಂದ ಕೋಟೆ ಹಾಗೂ ಬಿ ಟಿ ನಾರಾಯಣ ಭಟ್ ಅವರನ್ನು ಗೌರವಿಸಲಾಯಿತು. ಅಡಿಕೆ ಬೆಳೆಗಾರರ ಸಂಘದ ಪರವಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಅಣ್ಣಾ ವಿನಯಚಂದ್ರ ಹಾಗೂ ಕೃಷಿಕ ಎ ಪಿ ಸದಾಶಿವ ಗೌರವಿಸಿದರು.

Advertisement

ಸಂಘದ ವರದಿ ಹಾಗೂ ಲೆಕ್ಕಪತ್ರವನ್ನು ಸಂಘದ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ಮಂಡಿಸಿದರು.ಸಂಘದ ಉಪಾಧ್ಯಕ್ಷ ಎಂ ಜಿ ಸತ್ಯನಾರಾಯಣ ಅಡಿಕೆ ಬೆಳೆಗಾರರ ಸಂಘದ ಬೈಲಾ ತಿದ್ದುಪಡಿ ಬಗ್ಗೆ ಮಾತನಾಡಿದರು. ಮಹೇಶ್ ಪುಚ್ಚಪ್ಪಾಡಿ ಸ್ವಾಗತಿಸಿ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

1 day ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

2 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

2 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

3 days ago

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…

3 days ago