ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಮಹಾಸಭೆ ಶನಿವಾರ ಪುತ್ತೂರಿನ ತೆಂಕಿಲದ ಚುಂಚಶ್ರೀ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಅಶೋಕ ಕಿನಿಲ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭ ಚುನಾವಣೆಯ ಹೊತ್ತಿನಲ್ಲಿ ಕೃಷಿಕರ ಕೋವಿ ಡಿಪಾಸಿಟ್ ಇಡುವುದನ್ನು ವಿನಾಯತಿ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲು ನಿರ್ಧರಿಸಲಾಯಿತು.
ಚುನಾವಣೆಯ ಸಂದರ್ಭ ಕೃಷಿಕರ ಕೋವಿಯನ್ನು ಡಿಪಾಸಿಟ್ ಇಡಲು ಇಲಾಖೆಗಳಿಂದ ಸೂಚನೆ ಬರುತ್ತಿದೆ. ಕೃಷಿ ರಕ್ಷಣೆಗೆ ನೀಡುವ ಕೋವಿಯನ್ನು ಚುನಾವಣೆಯ ಹೊತ್ತಿನಲ್ಲಿ ಡಿಪಾಸಿಟ್ ಇಡುವುದು ಸೂಕ್ತವಲ್ಲ. ಅದೂ ಅಲ್ಲದೆ ಇಲಾಖೆಗಳಿಗೂ ಇದೊಂದು ಹೊರೆಯಾಗಿದೆ. ಕೃಷಿ ರಕ್ಷಣೆಯ ಉದ್ದೇಶದಿಂದ ಬಳಕೆಯಾಗುವ ಕೋವಿಯ ಮೂಲಕ ಚುನಾವಣೆಯ ಸಮಯದಲ್ಲಿ ಯಾವುದೇ ಗೊಂದಲಗಳು ಆಗಿಲ್ಲ. ಒಂದು ವೇಳೆ ಯಾವುದಾದರೂ ಅನಾಹುತಗಳು ನಡೆದರೆ ಅಂತಹ ವ್ಯಕ್ತಿಗಳ ಕೋವಿ ಲೈಸನ್ಸ್ ರದ್ದು ಮಾಡಲು ಅವಕಾಶ ಇದೆ. ಈಗ ಚುನಾವಣೆಯ ಸಮಯದಲ್ಲಿ ಕೋವಿ ಡಿಪಾಸಿಟ್ ಕೃಷಿಕರಿಗೂ ಸಮಸ್ಯೆಯಾಗುತ್ತಿದೆ. ಈ ಕಾರಣದಿಂದ ಕೋವಿ ಡಿಪಾಸಿಟಿಗೆ ವಿನಾಯಿತಿ ನೀಡಬೇಕಲು ಎಂದು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಲು ನಿರ್ಧರಿಸಲಾಯಿತು.
ಪುತ್ತೂರಿನಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಯ ಹಿನ್ನಲೆಯಲ್ಲಿ ನಡೆಯುತ್ತಿರುವ ಅಭಿಯಾನಕ್ಕೆ ಅಡಿಕೆ ಬೆಳೆಗಾರರ ಸಂಘದಿಂದಲೂ ಬೆಂಬಲ ವ್ಯಕ್ತಪಡಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಹಿರಿಯ ಸದಸ್ಯರಾದ ದಯಾನಂದ ಕೋಟೆ ಹಾಗೂ ಬಿ ಟಿ ನಾರಾಯಣ ಭಟ್ ಅವರನ್ನು ಗೌರವಿಸಲಾಯಿತು. ಅಡಿಕೆ ಬೆಳೆಗಾರರ ಸಂಘದ ಪರವಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಅಣ್ಣಾ ವಿನಯಚಂದ್ರ ಹಾಗೂ ಕೃಷಿಕ ಎ ಪಿ ಸದಾಶಿವ ಗೌರವಿಸಿದರು.
ಸಂಘದ ವರದಿ ಹಾಗೂ ಲೆಕ್ಕಪತ್ರವನ್ನು ಸಂಘದ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ಮಂಡಿಸಿದರು.ಸಂಘದ ಉಪಾಧ್ಯಕ್ಷ ಎಂ ಜಿ ಸತ್ಯನಾರಾಯಣ ಅಡಿಕೆ ಬೆಳೆಗಾರರ ಸಂಘದ ಬೈಲಾ ತಿದ್ದುಪಡಿ ಬಗ್ಗೆ ಮಾತನಾಡಿದರು. ಮಹೇಶ್ ಪುಚ್ಚಪ್ಪಾಡಿ ಸ್ವಾಗತಿಸಿ ವಂದಿಸಿದರು.
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…