ರಾಜ್ಯದ ರೈತರಿಗೆ ಬಾಕಿ ಇರುವ 3.36 ಲಕ್ಷ ಮೆಟ್ರಿಕ್ ಟನ್ ಯೂರಿಯಾವನ್ನು ತ್ವರಿತವಾಗಿ ಬಿಡುಗಡೆ ಮಾಡುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು ಬಾಕಿ ಇರುವ ಯೂರಿಯಾ ರಸಗೊಬ್ಬರವನ್ನು ತಕ್ಷಣವೇ ಪೂರೈಸುವಂತೆ ಒತ್ತಾಯಿಸಿದ್ದಾರೆ. 2025-26 ನೇ ಸಾಲಿಗೆ ರಾಜ್ಯವು 114.40 ಲಕ್ಷ ಹೆಕ್ಟೇರ್ಗಿಂತ ಹೆಚ್ಚು ಬಿತ್ತನೆ ಗುರಿ ಹೊಂದಿದೆ. ಜೊತೆಗೆ 160.68 ಲಕ್ಷ ಟನ್ ಆಹಾರ ಧಾನ್ಯಗಳು ಮತ್ತು ಎಣ್ಣೆಕಾಳುಗಳನ್ನು ಉತ್ಪಾದಿಸುವ ಗುರಿಯನ್ನು ಹೊಂದಲಾಗಿದೆ. ಹಿಂಗಾರು ಋತುವಿನಲ್ಲಿ ಗೊಬ್ಬರಗಳಿಗೆ ಅಂದಾಜು ಬೇಡಿಕೆ 26.77 ಲಕ್ಷ ಮೆಟ್ರಿಕ್ ಟನ್ಗಳಷ್ಟಿದ್ದು,3.36 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಕೊರತೆಯಿದೆ ಎಂದು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…