MIRROR FOCUS

ಸುಳ್ಯದಲ್ಲಿ ಮತ್ತೆ ರಸ್ತೆ ಹೋರಾಟದ ಬಿಸಿ…! | ಅಡ್ತಲೆಯಿಂದಲೂ ಮನವಿ… ಜಟ್ಟಿಪಳ್ಳದಲ್ಲೂ ಭರವಸೆ…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

 ಕಳೆದ ವಿಧಾನಸಭಾ ಚುನಾವಣೆಯ ಕಾವು ಕಳೆದ ನಂತರ ಈಗ ಲೋಕಸಭಾ ಚುನಾವಣೆಯ ಕಾವು ಪಡೆಯುತ್ತಿದ್ದಂತೆಯೇ ರಸ್ತೆ ಹೋರಾಟಗಳೂ ಸುಳ್ಯದಲ್ಲಿ ಚುರುಕಾಗಿದೆ.

Advertisement

ಕಳೆದ ಬಾರಿ ಸುಳ್ಯ ವಿಧಾನಸಭಾ ಕ್ಷೇತ್ರವು ರಾಜ್ಯದಾದ್ಯಂತ ಸುದ್ದಿಯಾಗಿತ್ತು. ಕ್ಷೇತ್ರದಾದ್ಯಂತ ರಸ್ತೆ, ಸೇತುವೆ ಸೇರಿದಂತೆ ಮೂಲಭೂತ ಸಮಸ್ಯೆಗಳ ಬಗ್ಗೆ ಜನರು ಬೇಡಿಕೆಯ ಮೇಲೆ ಬೇಡಿಕೆ ಸಲ್ಲಿಸುತ್ತಿದ್ದರೂ ಯಾವುದೇ ಪ್ರಗತಿ ಕಂಡಿರಲಿಲ್ಲ. ಚುನಾವಣೆಯ ಸಮಯದಲ್ಲಿ ಭರವಸೆಗಳ ಮೇಲೆ ಭರವಸೆಗಳು ನೀಡಿದ ಬಳಿಕ ಎಲ್ಲೆಡೆಯೂ ಹೋರಾಟಗಳು, ಪ್ರತಿಭಟನೆಗಳು ತಣ್ಣಗಾದವು.

ಇದೀಗ ಮತ್ತೆ ಹೋರಾಟ, ಪ್ರತಿಭಟನೆಯ ಧ್ವನಿಗಳು ಕೇಳಿಬಂದಿದೆ. ಸುಳ್ಯದ ಜಟ್ಟಿಪಳ್ಳದಲ್ಲಿ ಪತ್ರಕರ್ತ ಶರೀಫ್‌ ಧರಣಿ ಕುಳಿತರು.  ಅನೇಕ ಬಾರಿ ಈ ರಸ್ತೆಯ ಬಗ್ಗೆ ಪತ್ರಿಕೆಗಳಲ್ಲಿ‌ ವರದಿಯಾಗಿತ್ತು, ಜನಪ್ರತಿನಿಧಿಗಳು ಭರವಸೆ ನೀಡಿದ್ದರೂ ರಸ್ತೆ ದುರಸ್ತಿ ಆಗಿರಲಿಲ್ಲ. ಈ ರಸ್ತೆಯು  ಸುಳ್ಯದಿಂದ ದುಗಲಡ್ಕದವರೆಗೆ ಹೋಗುವ ರಸ್ತೆಯಾಗಿದೆ. ಕಳೆದ ವರ್ಷ ಈ ರಸ್ತೆಗಾಗಿ ಹೋರಾಟವೂ ನಡೆದಿತ್ತು. ಈಗ ಜಟ್ಟಿಪಳ್ಳಕ್ರಾಸ್ ನಿಂದ ಕೊಡಿಯಾಲಬೈಲ್ ಕಡೆಗೆ ಹೋಗುವ ರಸ್ತೆಯಲ್ಲಿ ಹೊಂಡಗುಂಡಿ ಏರ್ಪಟ್ಟು ಸಂಚಾರ ದುಸ್ತರವಾಗಿದೆ.  ಈ ರಸ್ತೆಯ ಪ್ಯಾಚ್ ವರ್ಕ್ ಕೆಲಸ ಮಾಡುವುದಕ್ಕಾಗಿ ಭಿಕ್ಷೆ ಬೇಡುವ  ಕಾರ್ಯಕ್ರಮ ನಡೆಯಿತು. ಬಳಿಕ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಜ.9 ರೊಳಗೆ ತೇಪೆ ಕಾರ್ಯ ಮಾಡುವುದಾಗಿ ಭರವಸೆ ನೀಡಿದ ಬಳಿಕ ಧರಣಿ ಹಿಂತೆಗೆದುಕೊಂಡರು. ಆದರೆ ಇಡೀ ರಸ್ತೆಗೆ ಡಾಮರೀಕಣ ಇನ್ನೂ ಕನಸಾಗಿದೆ…!.

ಈ ನಡುವೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚುನಾವಣಾ ಬಹಿಷ್ಕಾರ ಮೂಲಕ  ಸಂಚಲನ ಮೂಡಿಸಿದ ಅರಂತೋಡು ರಸ್ತೆ ಹೋರಾಟ ಸಮಿತಿ ಮತ್ತೆ ಮನವಿ ನೀಡಿ ಎಚ್ಚರಿಸಿದೆ. ವಿಧಾನ ಸಭಾ ಚುನಾವಣೆಯ ಸಂದರ್ಭ, ಅರಂತೋಡಿನಿಂದ ಕನಿಷ್ಠ ಅಡ್ತಲೆ ತನಕ ರಸ್ತೆ ಅಭಿವೃದ್ಧಿ ಮಾಡದೇ ಇದ್ದಲ್ಲಿ ಚುನಾವಣೆ ಬಹಿಷ್ಕಾರ ಮಾಡುವುದಾಗಿ ಹೇಳಿತ್ತು. ಆ ಸಂದರ್ಭ ರಸ್ತೆ ದುರಸ್ತಿ ನಡೆದು ಬಳಿಕ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಹೋರಾಟ ಸಮಿತಿ ಸಕ್ರಿಯವಾಗಿದೆ. ಲೋಕಸಭಾ ಚುನಾವಣೆಗೆ ಮೊದಲು ರಸ್ತೆ ಅಗಲೀಕರಣ ಕಾರ್ಯ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ. ನಾಗರಿಕರ ಪರವಾಗಿ, ಅಡ್ತಲೆ ನಾಗರಿಕ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಹರಿಪ್ರಸಾದ್ ಅಡ್ತಲೆ ಹಾಗೂ ಕಾರ್ಯದರ್ಶಿ ರಂಜಿತ್ ಅಡ್ತಲೆ ಮನವಿ ಮಾಡಿದ್ದಾರೆ.

Advertisement

ಮನವಿಗೆ ಸ್ಪಂದಿಸಿದ  ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಅವರು ಲೋಕೋಪಯೋಗಿ ಇಲಾಖೆ ಇಂಜಿನಿಯರ್ ರನ್ನು ಸ್ಥಳಕ್ಕೆ ಕರೆಯಿಸಿ, ಜ. 15 ರೊಳಗೆ ಎರಡನೇ ಕೋಟ್ ಡಾಮಾರಿಕರಣ ಪ್ರಾರಂಭ ಮಾಡಲು ಹಾಗೂ ರಸ್ತೆ ಬದಿಯಲ್ಲಿರುವ ಅಪಾಯಕಾರಿ ವಿದ್ಯುತ್ ಕಂಬಗಳನ್ನು ತೆರವು ಮಾಡಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.ಈ ಸಂದರ್ಭ ಬಿಜೆಪಿ ಪ್ರಮುಖರಾದ ಸಂತೋಷ್ ಕುತ್ತಮೊಟ್ಟೆ ಅವರು ಉಪಸ್ಥಿತರಿದ್ದರು.

ಇದರ ಜೊತೆಗೆ ಸುಳ್ಯ ಕೆಲವು ಕಡೆ ಸೇತುವೆ ಕಾಮಗಾರಿಗಳು ಅರ್ಧಕ್ಕೆ ನಿಂತಿದೆ. ವಿಧಾನಸಭಾ ಚುನಾವಣೆಯ ವೇಳೆ ಭರವಸೆ ನೀಡಿದ್ದ ಸೇತುವೆಗಳು ಕಾಮಗಾರಿ ಆರಂಭವಾಗಿ ಬಳಿಕ ಸ್ಥಗಿತಗೊಂಡಿದೆ. ಕೆಲವು ಕಡೆ ರಸ್ತೆಗಳೂ ಪರಿಸ್ಥಿತಿಯೂ ಹಾಗೆಯೇ ಇದೆ. ದುಗಲಡ್ಕ-ಜಟ್ಟಿಪಳ್ಳ ರಸ್ತೆ ಇನ್ನೂದುರಸ್ತಿ ಆಗಿಲ್ಲ. ಈ ಬಾರಿಯೂ ಲೋಕಸಭಾ ಚುನಾವಣೆಯ ವೇಳೆ ಮತ್ತೆ ಭರವಸೆಯನ್ನು ಹೊತ್ತು ತರಲಿದ್ದಾರೆ ಹೊಸ ನಾಯಕರು…!.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಇಳಿಮುಖ

ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಅಬ್ಬರಿಸಿದ್ದ ಮಳೆ ಇಂದು ಇಳಿಮುಖವಾಗಿದೆ. ಕರಾವಳಿ…

1 hour ago

ವಿದ್ಯಾರ್ಥಿಗಳ ಓದಿನ ವಿಷಯದ ಆಯ್ಕೆ ಹೇಗಿರಬೇಕು..?

ಹಲವಾರು ವಿದ್ಯಾರ್ಥಿಗಳಿಗೆ, ಪೋಷಕರಿಗೆ ತಮ್ಮ ಮಕ್ಕಳು ಎಸ್‌ಎಸ್‌ ಎಲ್‌ಸಿ , ಪಿಯುಸಿ ಆದ…

1 hour ago

ರೈತರು ಗಮನಿಸಿ | ಭತ್ತದ ಬೆಳೆಗೆ ಫಸಲ್‌ ಭಿಮಾ ಯೋಜನೆ ವಿಮಾ ಪ್ರೀಮಿಯಂ ಪಾವತಿ ಪ್ರಾರಂಭ

ಭತ್ತದ ಬೆಳೆ ಬೆಳೆಯುವ ರೈತರಿಗೆ ಪ್ರಧಾನಮಂತ್ರಿ ಫಸಲ್‌ ಭಿಮಾ ಯೋಜನೆಯ ವಿಮಾ ಪ್ರೀಮಿಯಂ…

2 hours ago

ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ  ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ…

2 hours ago

ಪ್ಲೈಓವರ್‌ ನಿರ್ಮಾಣದ ಬಳಿಕ ಹೇಗಿದೆ ಕಲ್ಲಡ್ಕ..?

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಪ್ಲೈಓವರ್‌ ಮೂಲಕ ವಾಹನ ಓಡಾಟ ಆರಂಭವಾಗಿದೆ. ಹೀಗಾಗಿ…

2 hours ago

ಗೇರು ವಾಣಿಜ್ಯ ಬೆಳೆ ಗ್ರಾಮೀಣ ಭಾಗದ ರೈತರ ಮೂಲಸಂಪತ್ತು

‌ ಗೇರು ಒಂದು ವಾಣಿಜ್ಯ ಬೆಳೆಯಾಗಿದ್ದು ಇದು ಗ್ರಾಮೀಣ ಭಾಗದ ರೈತರ ಮೂಲಸಂಪತ್ತು.…

3 hours ago