Advertisement
MIRROR FOCUS

ಕ್ವಿಂಟಾಲ್ ರಾಗಿಗೆ 5 ಸಾವಿರ ಬೆಲೆ ನಿಗದಿಗೆ ಆಗ್ರಹ | ಇಲ್ಲವಾದಲ್ಲಿ ರಾಗಿ ಬೆಳೆಯೋದು ಕಷ್ಟವಾದೀತು |

Share

ರೈತರು(Farmer) ಬೆಳೆಯುವ ಪ್ರತಿ ಕ್ವಿಂಟಾಲ್ ರಾಗಿಗೆ(Ragi) ಸರಕಾರ(Govt) 5000 ರೂಪಾಯಿ ಬೆಂಬಲ ಬೆಲೆ ನಿಗದಿಪಡಿಸಬೇಕು(Support Price Fixation) ಎಂದು ಕರ್ನಾಟಕ ರಾಜ್ಯ ಕೆಂಪೇಗೌಡ ರೈತಸಂಘದ ರಾಜ್ಯ ಉಪಾಧ್ಯಕ್ಷ  ಜುಟ್ನಹಳ್ಳಿ ಆರ್.ದಿನೇಶ್ ಒತ್ತಾಯಿಸಿದರು. ಕಳೆದ ಬಾರಿ ಪ್ರತಿ ಕ್ವಿಂಟಾಲ್ ರಾಗಿಗೆ 3846 ರೂ ಬೆಂಬಲ ಬೆಲೆ ನೀಡಿ ಖರೀದಿಸಿತು ಈ ಬಾರಿ 4290 ರೂ ಸರಕಾರ ಬೆಲೆ ನಿಗದಿಪಡಿಸಿದೆ, ಸರಕಾರ ನಿಗದಿಪಡಿಸಿರುವ ಈ ಹಣದಿಂದ ಉಳುಮೆ ಮಾಡಲು ಸಾಧ್ಯವಾಗುವುದಿಲ್ಲ, ರಸಗೊಬ್ಬರ(Fertilizer), ಉಳುಮೆ ಹಾಗೂ ಬಿತ್ತನೆ ಬೀಜ(Seeding) ದುಬಾರಿಯಾಗಿದೆ ಒಂದು ಕ್ವಿಂಟಾಲ್ ರಾಗಿ ಬೆಳೆಯಲು 6 ರಿಂದ 7 ಸಾವಿರ ಖರ್ಚಾಗುತ್ತದೆ. ಹೀಗಿರುವಾಗ ರೈತ ರಾಗಿ  ಬೆಳೆಯುವುದಾದರೂ ಹೇಗೆ ಅನ್ನೋದು ದಿನೇಶ ಅವರ ವಾದ.

Advertisement
Advertisement

ಕೂಡಲೇ ಸರಕಾರ ಪ್ರತಿ ಕ್ವಿಂಟಾಲ್ ರಾಗಿಗೆ 5 ಸಾವಿರ ನಿಗದಿಪಡಿಸಿ ಆದೇಶಿಸಬೇಕು ಇಲ್ಲದಿದ್ದರೆ ರಾಜ್ಯ ವ್ಯಾಪಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ವಿಧಾನಸೌಧ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದರು. ಮಾಗಡಿ ತಾಲೂಕು ರಾಗಿ ಕಣಜವಾಗಿದ್ದು  ರಾಗಿ ಬೆಳೆಯುವುದರಲ್ಲಿ ಪ್ರಸಿದ್ದಿಹೊಂದಿದೆ ತಾಲೂಕಿನಲ್ಲಿ ಬೆಳೆಯುವಷ್ಟು ರಾಗಿ ಹಾಗೂ ರಾಗಿ ಬೆಳೆಯ ಇಳುವರಿ ರಾಜ್ಯದ ಯಾವುದೇ ಭಾಗದಲ್ಲೂ ಇಲ್ಲ ಹೀಗಿರುವಾಗ ರಾಗಿ ಬೆಳೆಗೆ ಪ್ರೋತ್ಸಾಹ, ಬೆಂಬಲ ನೀಡುವುದು ಸರಕಾರದ ಕರ್ತವ್ಯವಾಗಿದೆ. ಕಳೆದ ಬಾರಿ ಮಳೆ ಇಲ್ಲದೆ ರಾಗಿ ಬೆಳೆ ಇಲ್ಲದಂತಾಗಿ ರೈತ ಸಂಕಷ್ಟದಲ್ಲಿದ್ದಾನೆ. ರೈತರಿಗೆ ವೈಜ್ಞಾನಿಕ ಪರಿಹಾರವೂ ನೀಡಿಲ್ಲ ಕಳೆದ ಬಾರಿ ಬೆಂಬಲ ಬೆಲೆಗೆ ನೀಡಿದ ಹಣ ಮತ್ತಷ್ಟು ರೈತರಿಗೆ ಸರಕಾರ ನೀಡಿಲ್ಲ ಶೀಘ್ರವೇ ಈ ಹಣವನ್ನು  ರೈತರ ಖಾತೆಗೆ ಜಮಾ ಮಾಡಬೇಕು ಎಂದು ಒತ್ತಾಯಿಸಿದರು.

ಮಳೆ ಕೊರತೆಯಿಂದ ರಾಗಿ, ಭತ್ತ, ಅಡಿಕೆ, ಮಾವು, ತೊಗರಿ ಸೇರಿದಂತೆ ತೋಟಗಾರಿಕೆ ಬೆಳೆಗಳು ನಷ್ಟವಾದ ಸಂದರ್ಭದಲ್ಲಿ ಸ್ವಾತಂತ್ರ್ಯ ಬಂದು ಇಷ್ಟು ವರ್ಷ ಕಳೆದರೂ ಸರಕಾರ ಇಲ್ಲಿಯವರೆಗೂ ವೈಜ್ಞಾನಿಕ ಪರಿಹಾರ ನೀಡಿಲ್ಲ ಈ ಸಂಬಂಧ ರೈತರ ಪ್ರತಿ ಬೆಳೆಗಳಿಗೂ ಸರಕಾರವೇ ವಿಮೆ ಮಾಡಿಸಬೇಕು ಎಂದು ಮನವಿ ಮಾಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

6 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago