MIRROR FOCUS

ಕ್ವಿಂಟಾಲ್ ರಾಗಿಗೆ 5 ಸಾವಿರ ಬೆಲೆ ನಿಗದಿಗೆ ಆಗ್ರಹ | ಇಲ್ಲವಾದಲ್ಲಿ ರಾಗಿ ಬೆಳೆಯೋದು ಕಷ್ಟವಾದೀತು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರೈತರು(Farmer) ಬೆಳೆಯುವ ಪ್ರತಿ ಕ್ವಿಂಟಾಲ್ ರಾಗಿಗೆ(Ragi) ಸರಕಾರ(Govt) 5000 ರೂಪಾಯಿ ಬೆಂಬಲ ಬೆಲೆ ನಿಗದಿಪಡಿಸಬೇಕು(Support Price Fixation) ಎಂದು ಕರ್ನಾಟಕ ರಾಜ್ಯ ಕೆಂಪೇಗೌಡ ರೈತಸಂಘದ ರಾಜ್ಯ ಉಪಾಧ್ಯಕ್ಷ  ಜುಟ್ನಹಳ್ಳಿ ಆರ್.ದಿನೇಶ್ ಒತ್ತಾಯಿಸಿದರು. ಕಳೆದ ಬಾರಿ ಪ್ರತಿ ಕ್ವಿಂಟಾಲ್ ರಾಗಿಗೆ 3846 ರೂ ಬೆಂಬಲ ಬೆಲೆ ನೀಡಿ ಖರೀದಿಸಿತು ಈ ಬಾರಿ 4290 ರೂ ಸರಕಾರ ಬೆಲೆ ನಿಗದಿಪಡಿಸಿದೆ, ಸರಕಾರ ನಿಗದಿಪಡಿಸಿರುವ ಈ ಹಣದಿಂದ ಉಳುಮೆ ಮಾಡಲು ಸಾಧ್ಯವಾಗುವುದಿಲ್ಲ, ರಸಗೊಬ್ಬರ(Fertilizer), ಉಳುಮೆ ಹಾಗೂ ಬಿತ್ತನೆ ಬೀಜ(Seeding) ದುಬಾರಿಯಾಗಿದೆ ಒಂದು ಕ್ವಿಂಟಾಲ್ ರಾಗಿ ಬೆಳೆಯಲು 6 ರಿಂದ 7 ಸಾವಿರ ಖರ್ಚಾಗುತ್ತದೆ. ಹೀಗಿರುವಾಗ ರೈತ ರಾಗಿ  ಬೆಳೆಯುವುದಾದರೂ ಹೇಗೆ ಅನ್ನೋದು ದಿನೇಶ ಅವರ ವಾದ.

Advertisement
Advertisement

ಕೂಡಲೇ ಸರಕಾರ ಪ್ರತಿ ಕ್ವಿಂಟಾಲ್ ರಾಗಿಗೆ 5 ಸಾವಿರ ನಿಗದಿಪಡಿಸಿ ಆದೇಶಿಸಬೇಕು ಇಲ್ಲದಿದ್ದರೆ ರಾಜ್ಯ ವ್ಯಾಪಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ವಿಧಾನಸೌಧ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದರು. ಮಾಗಡಿ ತಾಲೂಕು ರಾಗಿ ಕಣಜವಾಗಿದ್ದು  ರಾಗಿ ಬೆಳೆಯುವುದರಲ್ಲಿ ಪ್ರಸಿದ್ದಿಹೊಂದಿದೆ ತಾಲೂಕಿನಲ್ಲಿ ಬೆಳೆಯುವಷ್ಟು ರಾಗಿ ಹಾಗೂ ರಾಗಿ ಬೆಳೆಯ ಇಳುವರಿ ರಾಜ್ಯದ ಯಾವುದೇ ಭಾಗದಲ್ಲೂ ಇಲ್ಲ ಹೀಗಿರುವಾಗ ರಾಗಿ ಬೆಳೆಗೆ ಪ್ರೋತ್ಸಾಹ, ಬೆಂಬಲ ನೀಡುವುದು ಸರಕಾರದ ಕರ್ತವ್ಯವಾಗಿದೆ. ಕಳೆದ ಬಾರಿ ಮಳೆ ಇಲ್ಲದೆ ರಾಗಿ ಬೆಳೆ ಇಲ್ಲದಂತಾಗಿ ರೈತ ಸಂಕಷ್ಟದಲ್ಲಿದ್ದಾನೆ. ರೈತರಿಗೆ ವೈಜ್ಞಾನಿಕ ಪರಿಹಾರವೂ ನೀಡಿಲ್ಲ ಕಳೆದ ಬಾರಿ ಬೆಂಬಲ ಬೆಲೆಗೆ ನೀಡಿದ ಹಣ ಮತ್ತಷ್ಟು ರೈತರಿಗೆ ಸರಕಾರ ನೀಡಿಲ್ಲ ಶೀಘ್ರವೇ ಈ ಹಣವನ್ನು  ರೈತರ ಖಾತೆಗೆ ಜಮಾ ಮಾಡಬೇಕು ಎಂದು ಒತ್ತಾಯಿಸಿದರು.

ಮಳೆ ಕೊರತೆಯಿಂದ ರಾಗಿ, ಭತ್ತ, ಅಡಿಕೆ, ಮಾವು, ತೊಗರಿ ಸೇರಿದಂತೆ ತೋಟಗಾರಿಕೆ ಬೆಳೆಗಳು ನಷ್ಟವಾದ ಸಂದರ್ಭದಲ್ಲಿ ಸ್ವಾತಂತ್ರ್ಯ ಬಂದು ಇಷ್ಟು ವರ್ಷ ಕಳೆದರೂ ಸರಕಾರ ಇಲ್ಲಿಯವರೆಗೂ ವೈಜ್ಞಾನಿಕ ಪರಿಹಾರ ನೀಡಿಲ್ಲ ಈ ಸಂಬಂಧ ರೈತರ ಪ್ರತಿ ಬೆಳೆಗಳಿಗೂ ಸರಕಾರವೇ ವಿಮೆ ಮಾಡಿಸಬೇಕು ಎಂದು ಮನವಿ ಮಾಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?

23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

13 hours ago

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!

ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…

14 hours ago

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…

15 hours ago

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

16 hours ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

17 hours ago

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು

ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

18 hours ago