ರೈತರು(Farmer) ಬೆಳೆಯುವ ಪ್ರತಿ ಕ್ವಿಂಟಾಲ್ ರಾಗಿಗೆ(Ragi) ಸರಕಾರ(Govt) 5000 ರೂಪಾಯಿ ಬೆಂಬಲ ಬೆಲೆ ನಿಗದಿಪಡಿಸಬೇಕು(Support Price Fixation) ಎಂದು ಕರ್ನಾಟಕ ರಾಜ್ಯ ಕೆಂಪೇಗೌಡ ರೈತಸಂಘದ ರಾಜ್ಯ ಉಪಾಧ್ಯಕ್ಷ ಜುಟ್ನಹಳ್ಳಿ ಆರ್.ದಿನೇಶ್ ಒತ್ತಾಯಿಸಿದರು. ಕಳೆದ ಬಾರಿ ಪ್ರತಿ ಕ್ವಿಂಟಾಲ್ ರಾಗಿಗೆ 3846 ರೂ ಬೆಂಬಲ ಬೆಲೆ ನೀಡಿ ಖರೀದಿಸಿತು ಈ ಬಾರಿ 4290 ರೂ ಸರಕಾರ ಬೆಲೆ ನಿಗದಿಪಡಿಸಿದೆ, ಸರಕಾರ ನಿಗದಿಪಡಿಸಿರುವ ಈ ಹಣದಿಂದ ಉಳುಮೆ ಮಾಡಲು ಸಾಧ್ಯವಾಗುವುದಿಲ್ಲ, ರಸಗೊಬ್ಬರ(Fertilizer), ಉಳುಮೆ ಹಾಗೂ ಬಿತ್ತನೆ ಬೀಜ(Seeding) ದುಬಾರಿಯಾಗಿದೆ ಒಂದು ಕ್ವಿಂಟಾಲ್ ರಾಗಿ ಬೆಳೆಯಲು 6 ರಿಂದ 7 ಸಾವಿರ ಖರ್ಚಾಗುತ್ತದೆ. ಹೀಗಿರುವಾಗ ರೈತ ರಾಗಿ ಬೆಳೆಯುವುದಾದರೂ ಹೇಗೆ ಅನ್ನೋದು ದಿನೇಶ ಅವರ ವಾದ.
ಕೂಡಲೇ ಸರಕಾರ ಪ್ರತಿ ಕ್ವಿಂಟಾಲ್ ರಾಗಿಗೆ 5 ಸಾವಿರ ನಿಗದಿಪಡಿಸಿ ಆದೇಶಿಸಬೇಕು ಇಲ್ಲದಿದ್ದರೆ ರಾಜ್ಯ ವ್ಯಾಪಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ವಿಧಾನಸೌಧ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದರು. ಮಾಗಡಿ ತಾಲೂಕು ರಾಗಿ ಕಣಜವಾಗಿದ್ದು ರಾಗಿ ಬೆಳೆಯುವುದರಲ್ಲಿ ಪ್ರಸಿದ್ದಿಹೊಂದಿದೆ ತಾಲೂಕಿನಲ್ಲಿ ಬೆಳೆಯುವಷ್ಟು ರಾಗಿ ಹಾಗೂ ರಾಗಿ ಬೆಳೆಯ ಇಳುವರಿ ರಾಜ್ಯದ ಯಾವುದೇ ಭಾಗದಲ್ಲೂ ಇಲ್ಲ ಹೀಗಿರುವಾಗ ರಾಗಿ ಬೆಳೆಗೆ ಪ್ರೋತ್ಸಾಹ, ಬೆಂಬಲ ನೀಡುವುದು ಸರಕಾರದ ಕರ್ತವ್ಯವಾಗಿದೆ. ಕಳೆದ ಬಾರಿ ಮಳೆ ಇಲ್ಲದೆ ರಾಗಿ ಬೆಳೆ ಇಲ್ಲದಂತಾಗಿ ರೈತ ಸಂಕಷ್ಟದಲ್ಲಿದ್ದಾನೆ. ರೈತರಿಗೆ ವೈಜ್ಞಾನಿಕ ಪರಿಹಾರವೂ ನೀಡಿಲ್ಲ ಕಳೆದ ಬಾರಿ ಬೆಂಬಲ ಬೆಲೆಗೆ ನೀಡಿದ ಹಣ ಮತ್ತಷ್ಟು ರೈತರಿಗೆ ಸರಕಾರ ನೀಡಿಲ್ಲ ಶೀಘ್ರವೇ ಈ ಹಣವನ್ನು ರೈತರ ಖಾತೆಗೆ ಜಮಾ ಮಾಡಬೇಕು ಎಂದು ಒತ್ತಾಯಿಸಿದರು.
ಮಳೆ ಕೊರತೆಯಿಂದ ರಾಗಿ, ಭತ್ತ, ಅಡಿಕೆ, ಮಾವು, ತೊಗರಿ ಸೇರಿದಂತೆ ತೋಟಗಾರಿಕೆ ಬೆಳೆಗಳು ನಷ್ಟವಾದ ಸಂದರ್ಭದಲ್ಲಿ ಸ್ವಾತಂತ್ರ್ಯ ಬಂದು ಇಷ್ಟು ವರ್ಷ ಕಳೆದರೂ ಸರಕಾರ ಇಲ್ಲಿಯವರೆಗೂ ವೈಜ್ಞಾನಿಕ ಪರಿಹಾರ ನೀಡಿಲ್ಲ ಈ ಸಂಬಂಧ ರೈತರ ಪ್ರತಿ ಬೆಳೆಗಳಿಗೂ ಸರಕಾರವೇ ವಿಮೆ ಮಾಡಿಸಬೇಕು ಎಂದು ಮನವಿ ಮಾಡಿದರು.
ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…
ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…
ಇಥೆನಾಲ್ ಮಿಶ್ರಣ ಯೋಜನೆಯಿಂದ ಕಳೆದ ಹತ್ತು ವರ್ಷಗಳಲ್ಲಿ ರೈತರಿಗೆ ₹1.6 ಲಕ್ಷ ಕೋಟಿಗೂ…
ಅಮೆರಿಕ-ಇರಾನ್ ನಡುವಿನ ಕದನ ವಿರಾಮ ಮತ್ತೆ ಮುರಿಯುವ ಹಂತಕ್ಕೆ ತಲುಪಿದ್ದು, ಹೊಸ ಅಮೆರಿಕನ್…
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…