MIRROR FOCUS

ಶಿಕ್ಷಣ ಸಚಿವರ ಜೊತೆ ಸಭೆ ನಡೆಸಿದರೂ ಮಾತುಕತೆ ವಿಫಲ : ಬೇಡಿಕೆ ಈಡೇರದ ಹಿನ್ನೆಲೆ ಸರಕಾರಿ ಶಿಕ್ಷಕರಿಂದ ಪ್ರತಿಭಟನೆ : ಶಿಕ್ಷಕರ ಗೈರು-ತರಗತಿ ವ್ಯತ್ಯಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯದ ಸರ್ಕಾರಿ ಶಾಲೆ ಶಿಕ್ಷಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರವನ್ನು ಮನವಿ ಮಾಡಿದ್ದರು. ಆದರೆ ಸರ್ಕಾರದ ಕಡೆಯಿಂದ ಯಾವುದೇ ಸರಿಯಾದ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಇಂದಿನಿಂದ ಬೆಂಗಳೂರಿನ  ಫ್ರೀಡಂ ಪಾರ್ಕ್‌ನಲ್ಲಿ (Freedom park) ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (Karnataka State Primary School Teachers’ Association) ಪ್ರತಿಭಟನೆ ನಡೆಸಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಅವರ ಜೊತೆ ಸಭೆ ನಡೆಸಿದರೂ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಇಂದು ಸಂಘಟನೆ ರಾಜ್ಯಾದ್ಯಂತ ಪ್ರತಿಭಟನೆಗೆ (Protest) ಕರೆ ನೀಡಿದೆ. ಈ ಪ್ರತಿಭಟನೆಯಿಂದ ಸರ್ಕಾರಿ ಶಾಲೆಯಲ್ಲಿ ತರಗತಿಗಳು ವ್ಯತ್ಯಯವಾಗುವ ಸಾಧ್ಯತೆಯಿದೆ. ಬೃಹತ್ ಪ್ರತಿಭನೆ ಅಂಗವಾಗಿ ಆ.1 ರಿಂದಲೇ ವಿವಿಧ ಸ್ವರೂಪದ ಹೋರಾಟಗಳನ್ನು ರಾಜ್ಯಾದ್ಯಂತ ನಡೆಸಲಾಗುತ್ತಿದೆ.

ಬೇಡಿಕೆ ಏನು?
ಸರ್ಕಾರ 2017 ರ ವೃಂದ ಮತ್ತು ನೇಮಕಾತಿ ನಿಯಮಗಳು 2016ಕ್ಕಿಂತ ಮೊದಲು ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ಕಾರ್ಯಾದೇಶ ಹೊರಡಿಸಿ, ಮೂಲತಃ 1 ರಿಂದ 7, 8ಕ್ಕೆ ನೇಮಕ ಹೊಂದಿದ ಶಿಕ್ಷಕರನ್ನು ಪಿಎಸ್‌ಟಿ ಎಂದು ಪದನಾಮ ಮಾಡಿ 1 ರಿಂದ 5ಕ್ಕೆ ಹಿಂಬಡ್ತಿ ನೀಡಿದೆ. ಇದರಿಂದ ಸುಮಾರು 1.20 ಲಕ್ಷ ಶಿಕ್ಷಕರಿಗೆ ಅನ್ಯಾಯವಾಗಲಿದೆ. ಹಾಗಾಗಿ ಕೂಡಲೇ ಈ ಆದೇಶವನ್ನು ಹಿಂದಕ್ಕೆ ಪಡೆಯಬೇಕು. 2016ಕ್ಕಿಂತ ಮೊದಲು ನೇಮಕ ಹೊಂದಿದ ಶಿಕ್ಷಕರನ್ನು ಎನ್‌ಸಿಟಿ ಈ ನಿಯಮಾವಳಿ ಪ್ರಕಾರ ಪದವಿ ವಿದ್ಯಾರ್ಹತೆ ಹೊಂದಿದ ಎಲ್ಲ ಸೇವಾನಿರತ ಶಿಕ್ಷಕರನ್ನು ಜಿಪಿಟಿ ಶಿಕ್ಷಕರೆಂದು ಸೇವಾ ಜೇಷ್ಠತೆಯೊಂದಿಗೆ ಪುನರ್ ಪದನಾಮಕರಣ ಮಾಡಬೇಕು

Advertisement

ಈ ಮೊದಲಿನ ಪ್ರೌಢಶಾಲಾ ಬಡ್ತಿ ನಿಯಮಾವಳಿಯಂತೆ 2016ರ ಮೊದಲು ನೇಮಕಾತಿ ಹೊಂದಿದ ಹಾಗೂ ಬಿ ಇಡಿ ಪದವಿ ಪಡೆದ ಪ್ರಾಥಮಿಕ ಶಾಲಾ ಶಿಕ್ಷಕರು ಖಾಲಿಯಾಗುವವರೆಗೂ ಪ್ರೌಢಶಾಲೆಗೆ ಬಡ್ತಿ ನೀಡಬೇಕು. ನಂತರದಲ್ಲಿ ಹೊಸದಾಗಿ ನೇಮಕಗೊಂಡ ಜಿಪಿಟಿ ಶಿಕ್ಷಕರನ್ನು ಪರಿಗಣಿಸಬೇಕು. ಈ  ಮೊದಲಿನ ನಿಯಮಾವಳಿಯಂತೆ ಮುಖ್ಯ ಶಿಕ್ಷಕರ ಹುದ್ದೆಗೆ ವಿದ್ಯಾರ್ಹತೆಯನ್ನು ಪರಿಗಣಿಸದೇ ಅಖಂಡ ಸೇವಾಹಿರಿತನದ ಆಧಾರದ ಮೇಲೆ ಬಡ್ತಿ ನೀಡಬೇಕು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೆಲವು ವಿಶೇಷ ಯೋಗಗಳು ಮತ್ತು ಗ್ರಹಗಳ ಸಂಯೋಜನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

5 hours ago

ಮೀಸಲಾತಿಗಾಗಿ ಜಾತಿಯಾಗುವ ಮತಧರ್ಮ

ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು…

13 hours ago

ಸರಕಾರಿ ಶಾಲೆಯಲ್ಲಿ ಬೆಳೆಸಿದ ತರಕಾರಿ ಜಿಲ್ಲಾಧಿಕಾರಿಗೆ ಕೊಡುಗೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು…

14 hours ago

ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!

ಅನ್ನದ ಪರಿಮಳ ಎಷ್ಟು ಸೊಗಸು. ಅಡುಗೆ ಮನೆಯ ಭಾಷೆಯೇ ಅಂತಹದ್ದು.

23 hours ago

ಹೆಚ್ಚಿನ ಮೌಲ್ಯದ ಹಣ್ಣಿನ ಬೆಳೆಗಳ ಕುರಿತು ಚರ್ಚೆ | ಹಲಸು , ಡ್ರಾಗನ್‌ಫ್ರುಟ್‌ ಕೃಷಿಯ ಕಡೆಗೆ ಆದ್ಯತೆ |

ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್‌ ಫ್ರುಟ್(ಕಮಲಂ) ಹಾಗೂ…

24 hours ago

ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |

ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…

1 day ago