Advertisement
MIRROR FOCUS

ಶಿಕ್ಷಣ ಸಚಿವರ ಜೊತೆ ಸಭೆ ನಡೆಸಿದರೂ ಮಾತುಕತೆ ವಿಫಲ : ಬೇಡಿಕೆ ಈಡೇರದ ಹಿನ್ನೆಲೆ ಸರಕಾರಿ ಶಿಕ್ಷಕರಿಂದ ಪ್ರತಿಭಟನೆ : ಶಿಕ್ಷಕರ ಗೈರು-ತರಗತಿ ವ್ಯತ್ಯಯ

Share

ರಾಜ್ಯದ ಸರ್ಕಾರಿ ಶಾಲೆ ಶಿಕ್ಷಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರವನ್ನು ಮನವಿ ಮಾಡಿದ್ದರು. ಆದರೆ ಸರ್ಕಾರದ ಕಡೆಯಿಂದ ಯಾವುದೇ ಸರಿಯಾದ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಇಂದಿನಿಂದ ಬೆಂಗಳೂರಿನ  ಫ್ರೀಡಂ ಪಾರ್ಕ್‌ನಲ್ಲಿ (Freedom park) ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (Karnataka State Primary School Teachers’ Association) ಪ್ರತಿಭಟನೆ ನಡೆಸಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಅವರ ಜೊತೆ ಸಭೆ ನಡೆಸಿದರೂ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಇಂದು ಸಂಘಟನೆ ರಾಜ್ಯಾದ್ಯಂತ ಪ್ರತಿಭಟನೆಗೆ (Protest) ಕರೆ ನೀಡಿದೆ. ಈ ಪ್ರತಿಭಟನೆಯಿಂದ ಸರ್ಕಾರಿ ಶಾಲೆಯಲ್ಲಿ ತರಗತಿಗಳು ವ್ಯತ್ಯಯವಾಗುವ ಸಾಧ್ಯತೆಯಿದೆ. ಬೃಹತ್ ಪ್ರತಿಭನೆ ಅಂಗವಾಗಿ ಆ.1 ರಿಂದಲೇ ವಿವಿಧ ಸ್ವರೂಪದ ಹೋರಾಟಗಳನ್ನು ರಾಜ್ಯಾದ್ಯಂತ ನಡೆಸಲಾಗುತ್ತಿದೆ.

ಬೇಡಿಕೆ ಏನು?
ಸರ್ಕಾರ 2017 ರ ವೃಂದ ಮತ್ತು ನೇಮಕಾತಿ ನಿಯಮಗಳು 2016ಕ್ಕಿಂತ ಮೊದಲು ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ಕಾರ್ಯಾದೇಶ ಹೊರಡಿಸಿ, ಮೂಲತಃ 1 ರಿಂದ 7, 8ಕ್ಕೆ ನೇಮಕ ಹೊಂದಿದ ಶಿಕ್ಷಕರನ್ನು ಪಿಎಸ್‌ಟಿ ಎಂದು ಪದನಾಮ ಮಾಡಿ 1 ರಿಂದ 5ಕ್ಕೆ ಹಿಂಬಡ್ತಿ ನೀಡಿದೆ. ಇದರಿಂದ ಸುಮಾರು 1.20 ಲಕ್ಷ ಶಿಕ್ಷಕರಿಗೆ ಅನ್ಯಾಯವಾಗಲಿದೆ. ಹಾಗಾಗಿ ಕೂಡಲೇ ಈ ಆದೇಶವನ್ನು ಹಿಂದಕ್ಕೆ ಪಡೆಯಬೇಕು. 2016ಕ್ಕಿಂತ ಮೊದಲು ನೇಮಕ ಹೊಂದಿದ ಶಿಕ್ಷಕರನ್ನು ಎನ್‌ಸಿಟಿ ಈ ನಿಯಮಾವಳಿ ಪ್ರಕಾರ ಪದವಿ ವಿದ್ಯಾರ್ಹತೆ ಹೊಂದಿದ ಎಲ್ಲ ಸೇವಾನಿರತ ಶಿಕ್ಷಕರನ್ನು ಜಿಪಿಟಿ ಶಿಕ್ಷಕರೆಂದು ಸೇವಾ ಜೇಷ್ಠತೆಯೊಂದಿಗೆ ಪುನರ್ ಪದನಾಮಕರಣ ಮಾಡಬೇಕು

ಈ ಮೊದಲಿನ ಪ್ರೌಢಶಾಲಾ ಬಡ್ತಿ ನಿಯಮಾವಳಿಯಂತೆ 2016ರ ಮೊದಲು ನೇಮಕಾತಿ ಹೊಂದಿದ ಹಾಗೂ ಬಿ ಇಡಿ ಪದವಿ ಪಡೆದ ಪ್ರಾಥಮಿಕ ಶಾಲಾ ಶಿಕ್ಷಕರು ಖಾಲಿಯಾಗುವವರೆಗೂ ಪ್ರೌಢಶಾಲೆಗೆ ಬಡ್ತಿ ನೀಡಬೇಕು. ನಂತರದಲ್ಲಿ ಹೊಸದಾಗಿ ನೇಮಕಗೊಂಡ ಜಿಪಿಟಿ ಶಿಕ್ಷಕರನ್ನು ಪರಿಗಣಿಸಬೇಕು. ಈ  ಮೊದಲಿನ ನಿಯಮಾವಳಿಯಂತೆ ಮುಖ್ಯ ಶಿಕ್ಷಕರ ಹುದ್ದೆಗೆ ವಿದ್ಯಾರ್ಹತೆಯನ್ನು ಪರಿಗಣಿಸದೇ ಅಖಂಡ ಸೇವಾಹಿರಿತನದ ಆಧಾರದ ಮೇಲೆ ಬಡ್ತಿ ನೀಡಬೇಕು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

18 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

1 day ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

4 days ago