Advertisement
MIRROR FOCUS

ಶಿಕ್ಷಣ ಸಚಿವರ ಜೊತೆ ಸಭೆ ನಡೆಸಿದರೂ ಮಾತುಕತೆ ವಿಫಲ : ಬೇಡಿಕೆ ಈಡೇರದ ಹಿನ್ನೆಲೆ ಸರಕಾರಿ ಶಿಕ್ಷಕರಿಂದ ಪ್ರತಿಭಟನೆ : ಶಿಕ್ಷಕರ ಗೈರು-ತರಗತಿ ವ್ಯತ್ಯಯ

Share

ರಾಜ್ಯದ ಸರ್ಕಾರಿ ಶಾಲೆ ಶಿಕ್ಷಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರವನ್ನು ಮನವಿ ಮಾಡಿದ್ದರು. ಆದರೆ ಸರ್ಕಾರದ ಕಡೆಯಿಂದ ಯಾವುದೇ ಸರಿಯಾದ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಇಂದಿನಿಂದ ಬೆಂಗಳೂರಿನ  ಫ್ರೀಡಂ ಪಾರ್ಕ್‌ನಲ್ಲಿ (Freedom park) ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (Karnataka State Primary School Teachers’ Association) ಪ್ರತಿಭಟನೆ ನಡೆಸಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಅವರ ಜೊತೆ ಸಭೆ ನಡೆಸಿದರೂ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಇಂದು ಸಂಘಟನೆ ರಾಜ್ಯಾದ್ಯಂತ ಪ್ರತಿಭಟನೆಗೆ (Protest) ಕರೆ ನೀಡಿದೆ. ಈ ಪ್ರತಿಭಟನೆಯಿಂದ ಸರ್ಕಾರಿ ಶಾಲೆಯಲ್ಲಿ ತರಗತಿಗಳು ವ್ಯತ್ಯಯವಾಗುವ ಸಾಧ್ಯತೆಯಿದೆ. ಬೃಹತ್ ಪ್ರತಿಭನೆ ಅಂಗವಾಗಿ ಆ.1 ರಿಂದಲೇ ವಿವಿಧ ಸ್ವರೂಪದ ಹೋರಾಟಗಳನ್ನು ರಾಜ್ಯಾದ್ಯಂತ ನಡೆಸಲಾಗುತ್ತಿದೆ.

ಬೇಡಿಕೆ ಏನು?
ಸರ್ಕಾರ 2017 ರ ವೃಂದ ಮತ್ತು ನೇಮಕಾತಿ ನಿಯಮಗಳು 2016ಕ್ಕಿಂತ ಮೊದಲು ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ಕಾರ್ಯಾದೇಶ ಹೊರಡಿಸಿ, ಮೂಲತಃ 1 ರಿಂದ 7, 8ಕ್ಕೆ ನೇಮಕ ಹೊಂದಿದ ಶಿಕ್ಷಕರನ್ನು ಪಿಎಸ್‌ಟಿ ಎಂದು ಪದನಾಮ ಮಾಡಿ 1 ರಿಂದ 5ಕ್ಕೆ ಹಿಂಬಡ್ತಿ ನೀಡಿದೆ. ಇದರಿಂದ ಸುಮಾರು 1.20 ಲಕ್ಷ ಶಿಕ್ಷಕರಿಗೆ ಅನ್ಯಾಯವಾಗಲಿದೆ. ಹಾಗಾಗಿ ಕೂಡಲೇ ಈ ಆದೇಶವನ್ನು ಹಿಂದಕ್ಕೆ ಪಡೆಯಬೇಕು. 2016ಕ್ಕಿಂತ ಮೊದಲು ನೇಮಕ ಹೊಂದಿದ ಶಿಕ್ಷಕರನ್ನು ಎನ್‌ಸಿಟಿ ಈ ನಿಯಮಾವಳಿ ಪ್ರಕಾರ ಪದವಿ ವಿದ್ಯಾರ್ಹತೆ ಹೊಂದಿದ ಎಲ್ಲ ಸೇವಾನಿರತ ಶಿಕ್ಷಕರನ್ನು ಜಿಪಿಟಿ ಶಿಕ್ಷಕರೆಂದು ಸೇವಾ ಜೇಷ್ಠತೆಯೊಂದಿಗೆ ಪುನರ್ ಪದನಾಮಕರಣ ಮಾಡಬೇಕು

ಈ ಮೊದಲಿನ ಪ್ರೌಢಶಾಲಾ ಬಡ್ತಿ ನಿಯಮಾವಳಿಯಂತೆ 2016ರ ಮೊದಲು ನೇಮಕಾತಿ ಹೊಂದಿದ ಹಾಗೂ ಬಿ ಇಡಿ ಪದವಿ ಪಡೆದ ಪ್ರಾಥಮಿಕ ಶಾಲಾ ಶಿಕ್ಷಕರು ಖಾಲಿಯಾಗುವವರೆಗೂ ಪ್ರೌಢಶಾಲೆಗೆ ಬಡ್ತಿ ನೀಡಬೇಕು. ನಂತರದಲ್ಲಿ ಹೊಸದಾಗಿ ನೇಮಕಗೊಂಡ ಜಿಪಿಟಿ ಶಿಕ್ಷಕರನ್ನು ಪರಿಗಣಿಸಬೇಕು. ಈ  ಮೊದಲಿನ ನಿಯಮಾವಳಿಯಂತೆ ಮುಖ್ಯ ಶಿಕ್ಷಕರ ಹುದ್ದೆಗೆ ವಿದ್ಯಾರ್ಹತೆಯನ್ನು ಪರಿಗಣಿಸದೇ ಅಖಂಡ ಸೇವಾಹಿರಿತನದ ಆಧಾರದ ಮೇಲೆ ಬಡ್ತಿ ನೀಡಬೇಕು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

7 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

7 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

8 hours ago

ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…

8 hours ago

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

21 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

1 day ago