Advertisement
MIRROR FOCUS

ಶಿಕ್ಷಣ ಸಚಿವರ ಜೊತೆ ಸಭೆ ನಡೆಸಿದರೂ ಮಾತುಕತೆ ವಿಫಲ : ಬೇಡಿಕೆ ಈಡೇರದ ಹಿನ್ನೆಲೆ ಸರಕಾರಿ ಶಿಕ್ಷಕರಿಂದ ಪ್ರತಿಭಟನೆ : ಶಿಕ್ಷಕರ ಗೈರು-ತರಗತಿ ವ್ಯತ್ಯಯ

Share

ರಾಜ್ಯದ ಸರ್ಕಾರಿ ಶಾಲೆ ಶಿಕ್ಷಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರವನ್ನು ಮನವಿ ಮಾಡಿದ್ದರು. ಆದರೆ ಸರ್ಕಾರದ ಕಡೆಯಿಂದ ಯಾವುದೇ ಸರಿಯಾದ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಇಂದಿನಿಂದ ಬೆಂಗಳೂರಿನ  ಫ್ರೀಡಂ ಪಾರ್ಕ್‌ನಲ್ಲಿ (Freedom park) ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (Karnataka State Primary School Teachers’ Association) ಪ್ರತಿಭಟನೆ ನಡೆಸಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಅವರ ಜೊತೆ ಸಭೆ ನಡೆಸಿದರೂ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಇಂದು ಸಂಘಟನೆ ರಾಜ್ಯಾದ್ಯಂತ ಪ್ರತಿಭಟನೆಗೆ (Protest) ಕರೆ ನೀಡಿದೆ. ಈ ಪ್ರತಿಭಟನೆಯಿಂದ ಸರ್ಕಾರಿ ಶಾಲೆಯಲ್ಲಿ ತರಗತಿಗಳು ವ್ಯತ್ಯಯವಾಗುವ ಸಾಧ್ಯತೆಯಿದೆ. ಬೃಹತ್ ಪ್ರತಿಭನೆ ಅಂಗವಾಗಿ ಆ.1 ರಿಂದಲೇ ವಿವಿಧ ಸ್ವರೂಪದ ಹೋರಾಟಗಳನ್ನು ರಾಜ್ಯಾದ್ಯಂತ ನಡೆಸಲಾಗುತ್ತಿದೆ.

ಬೇಡಿಕೆ ಏನು?
ಸರ್ಕಾರ 2017 ರ ವೃಂದ ಮತ್ತು ನೇಮಕಾತಿ ನಿಯಮಗಳು 2016ಕ್ಕಿಂತ ಮೊದಲು ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ಕಾರ್ಯಾದೇಶ ಹೊರಡಿಸಿ, ಮೂಲತಃ 1 ರಿಂದ 7, 8ಕ್ಕೆ ನೇಮಕ ಹೊಂದಿದ ಶಿಕ್ಷಕರನ್ನು ಪಿಎಸ್‌ಟಿ ಎಂದು ಪದನಾಮ ಮಾಡಿ 1 ರಿಂದ 5ಕ್ಕೆ ಹಿಂಬಡ್ತಿ ನೀಡಿದೆ. ಇದರಿಂದ ಸುಮಾರು 1.20 ಲಕ್ಷ ಶಿಕ್ಷಕರಿಗೆ ಅನ್ಯಾಯವಾಗಲಿದೆ. ಹಾಗಾಗಿ ಕೂಡಲೇ ಈ ಆದೇಶವನ್ನು ಹಿಂದಕ್ಕೆ ಪಡೆಯಬೇಕು. 2016ಕ್ಕಿಂತ ಮೊದಲು ನೇಮಕ ಹೊಂದಿದ ಶಿಕ್ಷಕರನ್ನು ಎನ್‌ಸಿಟಿ ಈ ನಿಯಮಾವಳಿ ಪ್ರಕಾರ ಪದವಿ ವಿದ್ಯಾರ್ಹತೆ ಹೊಂದಿದ ಎಲ್ಲ ಸೇವಾನಿರತ ಶಿಕ್ಷಕರನ್ನು ಜಿಪಿಟಿ ಶಿಕ್ಷಕರೆಂದು ಸೇವಾ ಜೇಷ್ಠತೆಯೊಂದಿಗೆ ಪುನರ್ ಪದನಾಮಕರಣ ಮಾಡಬೇಕು

ಈ ಮೊದಲಿನ ಪ್ರೌಢಶಾಲಾ ಬಡ್ತಿ ನಿಯಮಾವಳಿಯಂತೆ 2016ರ ಮೊದಲು ನೇಮಕಾತಿ ಹೊಂದಿದ ಹಾಗೂ ಬಿ ಇಡಿ ಪದವಿ ಪಡೆದ ಪ್ರಾಥಮಿಕ ಶಾಲಾ ಶಿಕ್ಷಕರು ಖಾಲಿಯಾಗುವವರೆಗೂ ಪ್ರೌಢಶಾಲೆಗೆ ಬಡ್ತಿ ನೀಡಬೇಕು. ನಂತರದಲ್ಲಿ ಹೊಸದಾಗಿ ನೇಮಕಗೊಂಡ ಜಿಪಿಟಿ ಶಿಕ್ಷಕರನ್ನು ಪರಿಗಣಿಸಬೇಕು. ಈ  ಮೊದಲಿನ ನಿಯಮಾವಳಿಯಂತೆ ಮುಖ್ಯ ಶಿಕ್ಷಕರ ಹುದ್ದೆಗೆ ವಿದ್ಯಾರ್ಹತೆಯನ್ನು ಪರಿಗಣಿಸದೇ ಅಖಂಡ ಸೇವಾಹಿರಿತನದ ಆಧಾರದ ಮೇಲೆ ಬಡ್ತಿ ನೀಡಬೇಕು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

8 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

16 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

16 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

23 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

2 days ago