ಕಬ್ಬು ಕಟಾವು ಯಂತ್ರಗಳ ಪ್ರಾತ್ಯಕ್ಷಿಕೆ, ವಿತರಣೆ | ಸಚಿವ ಎನ್. ಚಲುವರಾಯಸ್ವಾಮಿ ಭಾಗಿ

November 19, 2024
7:28 PM

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಬೆಳತೂರು ಗೇಟ್ ಬಳಿ ಆಯೋಜಿಸಿದ್ದ ಕಬ್ಬು ಕಟಾವು ಯಂತ್ರಗಳ ಪ್ರಾತ್ಯಕ್ಷಿಕೆ ಮತ್ತು ವಿತರಣಾ ಕಾರ್ಯಕ್ರಮಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ಕೃಷಿ ಸಚಿವ ಚಲುವರಾಯಸ್ವಾಮಿ, ಕೃಷಿ ಬಗ್ಗೆ ಮಾಹಿತಿ ನೀಡುವುದಕ್ಕಾಗಿ ಸರ್ಕಾರ ಹಲವು ತರಬೇತಿ ಮತ್ತು ಸಂಶೋಧನಾ ಕೇಂದ್ರಗಳನ್ನು ತೆರೆದು ವಿಚಾರ ವಿನಿಮಯ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.  ಹೆಚ್ಚಿನ ರೈತರು ಇದರ ಸದುಪಯೋಗ ಮಾಡಿಕೊಳ್ಳಬೇಕು. ಕೃಷಿಯಲ್ಲಿ ಯಂತ್ರೋಪಕರಣಗಳ ಬಳಕೆಯನ್ನು ಪ್ರೋತ್ಸಾಹಿಸಲು ಸರ್ಕಾರ ಸಬ್ಸಿಡಿ ನೀಡುತ್ತಿದೆ. ಇದರಿಂದ ಅನ್ನದಾತರ ಆದಾಯ ಹೆಚ್ಚಿಸಲು ಸಹಕಾರಿ ಎಂದರು.

ಶಾಸಕ ಕೆ.ಎಂ.ಉದಯ್, ಹಲವು ಕಾರಣಗಳಿಂದ ಕೃಷಿ ಕಾರ್ಮಿಕರ ಸಂಖ್ಯೆ ಕಡಿಮೆಯಾಗುತ್ತಿದ್ದು, ಅದನ್ನು ನೀಗಿಸಲು ಕೃಷಿ ಯಂತ್ರೋಪಕರಗಳನ್ನು ಬಳಕೆ ಮಾಡಬೇಕು. ಕೃಷಿ ವಿಜ್ಞಾನ ಕೇಂದ್ರಗಳಲ್ಲಿ ಯಂತ್ರೋಪಕರಣಗಳ ಬಗ್ಗೆ ಮಾಹಿತಿ ಲಭ್ಯವಾಗುತ್ತಿದೆ ಎಂದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್,  ಕಬ್ಬು ಕಟಾವು ಯಂತ್ರವನ್ನು ಖರೀದಿಸುವ ರೈತರು ಮತ್ತು ಸಂಘ ಸಂಸ್ಥೆಗಳಿಗೆ ಸರ್ಕಾರ ಸಬ್ಸಿಡಿ ನೀಡುತ್ತಿದೆ. ಕಬ್ಬು ಕೃಷಿಯಲ್ಲಿ ಯಂತ್ರೋಪಕರಣಗಳನ್ನು ಬಳಕೆ ಮಾಡುವುದರಿಂದ ಕಾರ್ಮಿಕರ ಕೊರತೆಯನ್ನು ನೀಗಿಸಬಹುದು ಜೊತೆಗೆ ಕಬ್ಬು ಇಳುವರಿಯನ್ನು ಹೆಚ್ಚಿಸಿಕೊಳ್ಳಲು ಸಹಕಾರಿ ಎಂದರು.

ರೈತ ರಮೇಶ್ ಮಾತನಾಡಿ, ಇತ್ತೀಚೆಗೆ ಕೃಷಿ ಕಾರ್ಮಿಕರ ಕೊರತೆ ಹೆಚ್ಚಿದೆ. ಕಬ್ಬು ಕಟಾವಿನಲ್ಲಿ ಯಂತ್ರೋಪಕರಣಗಳನ್ನು ಬಳಕೆ ಮಾಡುವುದರಿಂದ ರೈತರಿಗೆ ಅನುಕೂಲವಾಗಲಿದೆ ಎಂದರು.

ಶಾಸಕ ರವಿಕುಮಾರ್, ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಸೇರಿದಂತೆ ಹಲವು ರೈತರು ಭಾಗವಹಿಸಿದ್ದರು. ಇದೇ ವೇಳೆ ಕೃಷಿ ಸಂಚಯವನ್ನು ಬಿಡುಗಡೆ ಮಾಡಿ. ಪ್ರಗತಿಪರ ರೈತರನ್ನು ಸನ್ಮಾನಿಸಲಾಯಿತು

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ
August 25, 2026
1:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 25, 2026
1:04 PM
by: ಸಾಯಿಶೇಖರ್ ಕರಿಕಳ
ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!
August 25, 2026
12:13 PM
by: ದ ರೂರಲ್ ಮಿರರ್.ಕಾಂ
ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ
August 25, 2026
10:38 AM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror