ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಡಿವಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಕಳೆದ ಜನವರಿಯಿಂದ ಮೇ ಅಂತ್ಯದವರೆಗೆ ಜಿಲ್ಲೆಯಲ್ಲಿ 43 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆ ಸುರಿದು ಅಲ್ಲಲ್ಲಿ ನೀರು ಸಂಗ್ರಹವಾಗುತ್ತಿರುವ ಕಾರಣ ಡೆಂಗ್ಯೂ ಪ್ರಕರಣ ಪತ್ತೆ ಸಂಖ್ಯೆ ಅಧಿಕವಾಗಿದೆ. ನಿರ್ಲಕ್ಷ್ಯ ವಹಿಸಿದರೆ ಪ್ರಾಣಾಪಾಯಕ್ಕೆ ಕಾರಣವಾಗಬಹುದಾದ ಡೆಂಗ್ಯೂ ಜ್ವರದ ಬಗ್ಗೆ ಜನತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ. 2024ರಲ್ಲಿ ಒಟ್ಟು 534 ಪ್ರಕರಣಗಳು ಜಿಲ್ಲೆಯಲ್ಲಿ ದೃಢಪಟ್ಟಿದ್ದವು. ಈ ಬಾರಿಯೂ ಪ್ರಕರಣಗಳು ಹೆಚ್ಚುತ್ತಿದ್ದು, ಕಡಿವಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಮಳೆಗಾಲದಲ್ಲಿ ಅಲ್ಲಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿ ಹೆಚ್ಚಾಗುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಡೆಂಗ್ಯೂ ಜ್ವರ ಬಾರದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…