Advertisement
MIRROR FOCUS

ರಾಜ್ಯದಲ್ಲಿ ಡೆಂಗ್ಯು ಪ್ರಕರಣ ಶೇ. 60 ರಷ್ಟು ಹೆಚ್ಚಳ | ಸೊಳ್ಳೆಗಳ ನಿಯಂತ್ರಣಕ್ಕೆ ಗಪ್ಪಿ ಮೀನು ಪ್ರಯೋಗ | ಇದು ಲಾರ್ವಾ ತಿಂದು ಬದುಕುವ ಜಲಚರ

Share

ರಾಜ್ಯಾದ್ಯಂತ ಮಳೆಗಾಲ(Rain) ಆರಂಭವಾಗುತ್ತಿದ್ದಂತೆ ಡೆಂಗ್ಯು ಪ್ರಕರಣಗಳು(Dengue case) ಹೆಚ್ಚಾಗುತ್ತಲೇ ಇದೆ. 2023 ಕ್ಕೆ ಹೋಲಿಸಿದರೆ ಈ ವರ್ಷದ ಮೊದಲಾರ್ಧದಲ್ಲಿ ಡೆಂಗ್ಯು ಪ್ರಕರಣಗಳಲ್ಲಿ ಸುಮಾರು ಶೇ. 60 ರಷ್ಟು ಹೆಚ್ಚಳವನ್ನು ರಾಜ್ಯ ಆರೋಗ್ಯ ಇಲಾಖೆ(Health department) ದಾಖಲಿಸಿದೆ. ಜೂನ್ 2023ರವರೆಗೆ ಒಟ್ಟು ಪ್ರಕರಣಗಳ ಸಂಖ್ಯೆ 2,003ರಷ್ಟಿತ್ತು. ಅದು ಈ ವರ್ಷದಲ್ಲಿ 4,886ಕ್ಕೆ ಏರಿಕೆಯಾಗಿದೆ.  ಡೆಂಗ್ಯು ರೋಗಕ್ಕೆ ಕಾರಣವಾಗುವ ಸೊಳ್ಳೆಯ(Mosquito) ಉತ್ಪತ್ತಿ ನಿಯಂತ್ರಣಕ್ಕೆ ಇದೀಗ ಶಿವಮೊಗ್ಗ ಆರೋಗ್ಯ ಇಲಾಖೆ ಅಧಿಕಾರಿಗಳು ಗಪ್ಪಿ ಮೀನಿನ(Guppy Fish) ಬಳಕೆಗೆ ಮುಂದಾಗಿದ್ದಾರೆ.

Advertisement
Advertisement

ಶಿವಮೊಗ್ಗ ಜಿಲ್ಲೆಯಲ್ಲಿ ಸದ್ಯ ಡೆಂಗ್ಯು ಜ್ವರದಿಂದ ಬಳಲುತ್ತಿರುವವರ ಸಂಖ್ಯೆ ಏರುತ್ತಲೇ ಇದೆ. ಜಿಲ್ಲೆಯ ಬಹುತೇಕ ಎಲ್ಲ ಆಸ್ಪತ್ರೆಗಳಲ್ಲಿ ಡೆಂಗ್ಯುನಿಂದ ಬಳಲುತ್ತಿರುವವರು ಭಾರೀ ಸಂಖ್ಯೆಯಲ್ಲಿ ದಾಖಲಾಗುತ್ತಿದ್ದಾರೆ. ಅವರಿಗೆ ಚಿಕಿತ್ಸೆ ನೀಡುವ ಜೊತೆಗೆ ಡೆಂಗ್ಯು ಹರಡುವ ಸೊಳ್ಳೆ ಉತ್ಪತ್ತಿ ನಿಯಂತ್ರಣಕ್ಕೆ ಆಡಳಿತ ಗಮನ ಹರಿಸಿದೆ. ಜಿಲ್ಲೆಯಲ್ಲಿ ಕಳೆದ ಬಾರಿಗೆ ಹೋಲಿಸಿಕೊಂಡರೆ ಈ ಬಾರಿ ಡೆಂಗ್ಯು ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಕಳೆದ ಬಾರಿ ಜೂನ್‌ 20ವರೆಗೆ ಕೇವಲ 83 ಪ್ರಕರಣಗಳು ದಾಖಲಾಗಿದ್ದವು. ಈ ಬಾರಿ ಡೆಂಗ್ಯು ಪ್ರಕರಣಗಳ ಸಂಖ್ಯೆ 236ಕ್ಕೆ ಏರಿಕೆಯಾಗಿದೆ.

Advertisement

ಸೊಳ್ಳೆ ಉತ್ಪತ್ತಿ ನಿಯಂತ್ರಣ: ಹೀಗಾಗಿ ಡೆಂಗ್ಯು ಹರಡುವ ಸೊಳ್ಳೆಗಳ ನಿಯಂತ್ರಣಕ್ಕೆ ಜಿಲ್ಲೆಯ ಆರೋಗ್ಯ ಇಲಾಖೆ ಗಪ್ಪಿ ಮೀನುಗಳನ್ನು ಬೆಳೆಸುವ ಪ್ರಯೋಗಕ್ಕೆ ಮುಂದಾಗಿದೆ. ಗಪ್ಪಿ ಮೀನು ಬೆಳೆಸಿ ಸೊಳ್ಳೆಗಳ ಲಾರ್ವಾ ನಿಯಂತ್ರಿಸುವ ಪ್ರಯೋಗಕ್ಕೆ ಮುಂದಾಗಿದ್ದು, ಗಾತ್ರದಲ್ಲಿ ಚಿಕ್ಕದಾಗಿರುವ ಗಪ್ಪಿ ಫಿಶ್‌ಗಳು ಲಾರ್ವಾಗಳನ್ನು (ಸೊಳ್ಳೆಯ ಮೊಟ್ಟೆ) ತಿಂದು ಬದುಕುವ ಜಲಚರಗಳಾಗಿವೆ. ಗಪ್ಪಿ ಫಿಶ್‌ಗಳು ಹೇರಳವಾಗಿ ಬೆಳೆಯುವ ನೀರಿನಲ್ಲಿ ಸೊಳ್ಳೆಗಳ ಲಾರ್ವಾ ಇರಲು ಸಾಧ್ಯವಿಲ್ಲ. ಇದರಿಂದ ಸೊಳ್ಳೆಗಳ ಉತ್ಪತ್ತಿ ಗಣನೀಯವಾಗಿ ನಿಯಂತ್ರಣವಾಗುತ್ತದೆ ಎಂಬುದು ಅಧಿಕಾರಿಗಳ ಅಭಿಪ್ರಾಯವಾಗಿದೆ.

ಲಾರ್ವಾ ಸಮೀಕ್ಷೆಮಳೆಗಾಲದಲ್ಲಿ ಹರಡುವ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹತ್ತು ಹಲವು ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಜಿಲ್ಲೆಯ ಎಲ್ಲ ಗ್ರಾಪಂಗಳಲ್ಲಿ ಸ್ಥಳೀಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ಗ್ರಾಪಂ ಸದಸ್ಯರ ಹಾಗೂ ಸಾರ್ವಜನಿಕರ ಸಭೆ ನಡೆಸಿ ಸಾಂಕ್ರಾಮಿಕ ರೋಗಗಳ ಕುರಿತು ಜಾಗೃತಿ ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ವಾರಕ್ಕೊಮ್ಮೆ ಜ್ವರ ಹಾಗೂ ಲಾರ್ವಾ ಸಮೀಕ್ಷೆ ಮಾಡುತ್ತಿದ್ದಾರೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಹೇಳುತ್ತಾರೆ.

Advertisement

ವಾರಕ್ಕೊಮ್ಮೆ ಡ್ರೈ ಡೇ: ಜಿಲ್ಲೆಯಲ್ಲಿ ಸೊಳ್ಳೆಯಲ್ಲಿ ನಿಯಂತ್ರಣದ ಬಗ್ಗೆ ಎಲ್ಲೆಡೆ ಜಾಗೃತಿ ಮೂಡಿಸಲಾಗುತ್ತಿದ್ದು, ವಿದ್ಯಾರ್ಥಿಗಳಿಗೂ ಕಾರ್ಯಾಗಾರದ ಮೂಲಕ ಡೆಂಗ್ಯು ಪ್ರಕರಣ ಹಾಗೂ ಸೊಳ್ಳೆ ನಿಯಂತ್ರಣದ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಡೆಂಗ್ಯು ಹರಡುವ ಸೊಳ್ಳೆಗಳ ನಿಯಂತ್ರಣಕ್ಕೆ ಜಿಲ್ಲೆಯ ಆರೋಗ್ಯ ಇಲಾಖೆ ಗಪ್ಪಿ ಮೀನುಗಳನ್ನು ಬೆಳೆಸುವ ಪ್ರಯೋಗ ಒಂದೆಡೆಯಾದರೆ ಇನ್ನೊಂಡೆ ವಾರಕ್ಕೊಮ್ಮೆ ಡ್ರೈ ಡೇ ಮೂಲಕವೂ ಸೊಳ್ಳೆಗಳ ಉತ್ಪತ್ತಿಯನ್ನು ನಿಯಂತ್ರಿಸಲು ಚಿಂತಿಸಲಾಗಿದೆ.

ಏನಿದು ಡ್ರೈ ಡೇ?: ವಾರದಲ್ಲಿ ಒಂದು ಮನೆಯಲ್ಲಿರುವ ತೊಟ್ಟೆ, ಡ್ರಮ್‌ಗಳು ಸೇರಿದಂತೆ ಇತರೆ ನೀರು ಸಂಗ್ರಹಿಸುವ ಸ್ಥಳಗಳನ್ನು ವಾರಕ್ಕೊಮ್ಮೆ ಸ್ವಚ್ಚಗೊಳಿಸಿ ಒಂದು ದಿನ ಒಣಗಲು ಬಿಟ್ಟು ಮರು ದಿನ ನೀರನ್ನು ತುಂಬಿಸಿಕೊಳ್ಳಬೇಕು. ಹೀಗೆ ಮಾಡುವುದರಿಂದಲೂ ಸೊಳ್ಳೆ ಉತ್ಪತ್ತಿಯನ್ನು ತಡೆಯಬಹುದು ಎನ್ನುವುದು ಅಧಿಕಾರಿಗಳ ಮಾಹಿತಿ.

Advertisement
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ| 2.06.2024 | ರಾಜ್ಯದ ಅಲ್ಲಲ್ಲಿ ಸಾಮಾನ್ಯ ಮಳೆ | ಜು.4 ರಿಂದ ಉತ್ತಮ ಮಳೆ ಮುನ್ಸೂಚನೆ

30.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

8 hours ago

ಒನಕೆ ಎಂಬ ಉಕ್ಕಿನ ಆಯುಧ…!!! ಬಲು ಅಪರೂಪದ ಒಂದು ಮಾಹಿತಿ

ಒನಕೆ(Onake) ಎಂದಾಕ್ಷಣಾ ನೆನಪಾಗುವುದು ಚಿತ್ರದುರ್ಗದ ಉಕ್ಕಿನ ಕೋಟೆಯ(Chitradurga Fort) 'ಒನಕೆ ಓಬವ್ವ"(Onake Obavva).…

8 hours ago

ಜೈವಿಕವಾಗಿ ವಿಘಟನೆಯಾಗುವ ಕ್ಯಾರಿಬ್ಯಾಗ್​ ಬಳಸಿ | ಸಸ್ಯಜನ್ಯ ಕೈಚೀಲಗಳ ತಯಾರಿಕೆ, ದಾಸ್ತಾನು, ಮಾರಾಟಕ್ಕೆ ತುರ್ತು ಕ್ರಮ | ಸಚಿವ ಈಶ್ವರ್ ಖಂಡ್ರೆ

ಪ್ರಕೃತಿಗೆ(Nature) ಬಹಳ ತ್ರಾಸದಾಯಕವಾದದ್ದು ಈಗ ಪ್ಲಾಸ್ಟಿಕ್‌ ನ(Plastic) ಹಾವಳಿ. ಎಲ್ಲಿ ನೋಡಿದರಲ್ಲಿ ಪ್ಲಾಸ್ಟಿಕ್‌…

9 hours ago

ಮೈಸೂರು ಅರಮನೆ ಸಮೀಪ ಪಾರಿವಾಳಗಳಿಗೆ ಆಹಾರ ಹಾಕದಿರಿ….! | ಬೀಳಲಿದೆ ದಂಡ : ತಜ್ಞರು, ಪಕ್ಷಿಪ್ರೇಮಿಗಳಅಭಿಪ್ರಾಯ ಏನು?

ಒಮ್ಮೊಮ್ಮೆ ನಾವು ಪ್ರಾಣಿ ಪಕ್ಷಿಗಳಿಗೆ(Animal-Birds) ತೋರಿಸುವ ಅತಿಯಾದ ಕಾಳಜಿ, ಪ್ರೀತಿ ಕೆಲವು ತೊಂದರೆಗಳಿಗೆ…

10 hours ago

ಟಿ-20 ವಿಶ್ವಕಪ್ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ | ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ-ಭಾರತ ಹಣಾಹಣಿ

ಇಂದು ಎಲ್ಲರ ಚಿತ್ತ ಚುಟುಕ ಮಾದರಿಯ ಕ್ರಿಕೆಟ್ ವಿಶ್ವಕಪ್ ಫೈನಲ್ (T20 World…

10 hours ago

ಎಂಆರ್‌ಪಿ ಬೆಲೆಗಿಂತ ಹೆಚ್ಚಿನ ಬೆಲೆಗೆ ಹಾಲು ಮಾರಾಟ…! | ಗ್ರಾಹಕರು ದೂರು ನೀಡಿದ್ರೆ ಲೈಸನ್ಸ್ ರದ್ದು?

ಇತ್ತೀಚೆಗೆ ರಾಜ್ಯದಲ್ಲಿ ನಂದಿನಿ ಹಾಲಿನ(Nandini Milk) ಬೆಲೆ ಜಾಸ್ತಿಯಾಗಿದ್ದು(Price hike) ಗ್ರಾಹಕರನ್ನು(Customer) ಕಂಗೆಡಿಸಿದೆ.…

11 hours ago