MIRROR FOCUS

#Dengue | ರಾಜ್ಯಾದ್ಯಂತ ಕಾಡುತ್ತಿದೆ ಡೆಂಗ್ಯೂ | ಗ್ರಾಮೀಣ ಭಾಗದಲ್ಲೂ ಇರಲಿ ಎಚ್ಚರ | ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಿಎಂ ಸೂಚನೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಈ ಬಾರಿ ಅಂತ ಮಳೆ ಬಾರದೇ ಹೋದರೂ, ಮಳೆಗಾಲದಲ್ಲಿ ಬರುವಂತ ಸಾಂಕ್ರಾಮಿಕ ರೋಗಗಳಿಗೇನು ಕಮ್ಮಿ ಇಲ್ಲ. ಅದರಲ್ಲೂ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಾಜ್ಯಾದ್ಯಂತ ಡೆಂಗ್ಯೂ ರೋಗ ಪ್ರಕರಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ. ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು ಏಳು ಸಾವಿರಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ.

Advertisement

ಇದರಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ. ಡೆಂಗ್ಯೂ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಔಷಧ ಸಿಂಪಡಣೆ, ನೀರು ಶೇಖರಣೆಯಾಗುವ ಸ್ಥಳಗಳನ್ನು ಗುರುತಿಸಿ ಸ್ವಚ್ಚಗೊಳಿಸುವುದು ಸೇರಿದಂತೆ ಸೊಳ್ಳೆ ನಿಯಂತ್ರಣಕ್ಕೆ ಪರಿಣಾಮಕಾರಿ ಮಾರ್ಗಗಳನ್ನು ಅನುಸರಿಸಲಾಗುತ್ತಿದೆ. ಮನೆ ಸುತ್ತಮುತ್ತಲಿನ ಪರಿಸರದ ಸ್ವಚ್ಚತೆಗೆ ಆದ್ಯತೆ ನೀಡಿ. ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ ವಹಿಸಿ. ಡೆಂಗ್ಯೂ ಬಗ್ಗೆ ಭಯ ಬೇಡ, ಜಾಗೃತೆಯಿರಲಿ ಎಂದರು.

ಡೆಂಗ್ಯೂಗೆ 7 ಜನ ಸಾವು:  ಡೆಂಗ್ಯೂ ರೋಗದಿಂದ ಕಳೆದ ಮೂರು ತಿಂಗಳಲ್ಲಿ ನಗರದಲ್ಲಿ ಏಳು ಜನ ಮೃತಪಟ್ಟಿದ್ದರು. ಕಳೆದ ಮೂರು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸಾವು ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ಕಳೆದ ಒಂದು ತಿಂಗಳಿನಿಂದ ನಗರದಲ್ಲಿ ಡೆಂಗ್ಯೂ ರೋಗ ಆತಂಕಕಾರಿಯಾಗಿ ಏರಿಕೆ ಕಂಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳ ಪ್ರಕಾರ, ನಗರದಲ್ಲಿ ಈ ವರ್ಷ ಸೆ.08ರವರೆಗೆ 5,000 ಡೆಂಗ್ಯೂ ರೋಗ ಪ್ರಕರಣಗಳು ವರದಿಯಾಗಿದ್ದವು. ಆಗಸ್ಟ್‌ನಲ್ಲಿ 2,374 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದವು.

ಡೆಂಗ್ಯೂ ಪ್ರಕರಣಗಳ ನಿಯಂತ್ರಣ ಕುರಿತು ಬಿಬಿಪಿಎಂ ಅಧಿಕಾರಿಗಳ ಜೊತೆ ಸೆ.7 ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆಸಿ ಸೆಪ್ಟೆಂಬರ್​​ನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಈ ವೇಳೆ ಡೆಂಗ್ಯೂ ರೋಗ ಉಲ್ಬಣಗೊಳ್ಳದಂತೆ ನೋಡಿಕೊಳ್ಳಿ ಎಂದು ಸೂಚನೆ ನೀಡಿದ್ದರು. ಡೆಂಗ್ಯೂ ಮುಖ್ಯವಾಗಿ ಮಳೆಗೆ ಸಂಬಂಧಿಸಿದೆ. ಮಳೆ ಹೆಚ್ಚಾದಾಗ ಪ್ರಕರಣಗಳು ಹೆಚ್ಚಾಗುತ್ತವೆ. 2022ರ ಸೆಪ್ಟೆಂಬರ್, ಅಕ್ಟೋಬರ್ ಮತ್ತು ನವೆಂಬರ್‌ ತಿಂಗಳಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಿದ್ದವು. ಈ ವರ್ಷ ಜುಲೈ ಮತ್ತು ಆಗಸ್ಟ್‌ ತಿಂಗಳಿನಲ್ಲೇ ಹೆಚ್ಚು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮ ಹಾಗೂ ಟೆಸ್ಟಿಂಗ್ ಸ್ಯಾಂಪಲ್ಸ್ ಹೆಚ್ಚಿಸುವಂತೆ ಸೂಚಿಸಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜೂನ್‌ನಿಂದ ಈ 6 ರಾಶಿಯವರ ಅದೃಷ್ಟ ಖುಲಾಯಿಸಲಿದೆ… ಕೋಟ್ಯಾಧಿಪತಿಗಳಾಗುವ ಯೋಗ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

3 hours ago

ಹೊಸರುಚಿ | ಹಲಸಿನ ಬೀಜದ ಚಟ್ನಿ ಪುಡಿ

ಹಲಸಿನ ಬೀಜದ ಚಟ್ನಿ ಪುಡಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಬೀಜ 1ಕಪ್. (ಒಣಗಿಸಿದ ಹಲಸಿನ…

3 hours ago

ಆಪರೇಷನ್ ಸಿಂದೂರ್ – ಪಾಕಿಸ್ತಾನದ ದಾಳಿಗೆ ಭಾರತದ ಪ್ರತ್ಯುತ್ತರ

ನಿನ್ನೆ ಮಧ್ಯರಾತ್ರಿ ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದ ಹಲವು ಭಾಗಗಳಲ್ಲಿ ನಾಗರಿಕರನ್ನು ಮತ್ತು…

15 hours ago

ಭಾರತ, ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಳ | ವಾಯುಪಡೆಯ ನೆಲೆಯಿಂದ ಎಚ್ಚರಿಕೆ

ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಿರುವ ಹಿನ್ನೆಲೆಯಲ್ಲಿ  ಸಂಭವನೀಯ ದಾಳಿಯ ಬಗ್ಗೆ…

15 hours ago

ಭಗವದ್ಗೀತೆ ಬಿಡಿ, ಬೇರೆ ಏನಾದ್ರೂ ಸ್ತೋತ್ರ ಬರ್ತದಾ..?

ಹಿಂದೂ ಧರ್ಮದ ವಿಶೇಷತೆ ಎಂದರೆ ಅದು ಸ್ವ ವಿಮರ್ಶೆಯ (self -criticism) ಸ್ವಾತಂತ್ರ್ಯ…

1 day ago

ಮೇ.9 | ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯ ನಾಟಕ | ಸಂತೋಷದಿಂದ ನಗಲು ಒಂದು ವೇದಿಕೆ

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಹೊಸತನದ ಶೋರೂಮ್ ಅನಾವರಣದ ಅಂಗವಾಗಿ ಮೇ 9…

1 day ago