ಈ ಬಾರಿ ಅಂತ ಮಳೆ ಬಾರದೇ ಹೋದರೂ, ಮಳೆಗಾಲದಲ್ಲಿ ಬರುವಂತ ಸಾಂಕ್ರಾಮಿಕ ರೋಗಗಳಿಗೇನು ಕಮ್ಮಿ ಇಲ್ಲ. ಅದರಲ್ಲೂ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಾಜ್ಯಾದ್ಯಂತ ಡೆಂಗ್ಯೂ ರೋಗ ಪ್ರಕರಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ. ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು ಏಳು ಸಾವಿರಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ.
ಇದರಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ. ಡೆಂಗ್ಯೂ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಔಷಧ ಸಿಂಪಡಣೆ, ನೀರು ಶೇಖರಣೆಯಾಗುವ ಸ್ಥಳಗಳನ್ನು ಗುರುತಿಸಿ ಸ್ವಚ್ಚಗೊಳಿಸುವುದು ಸೇರಿದಂತೆ ಸೊಳ್ಳೆ ನಿಯಂತ್ರಣಕ್ಕೆ ಪರಿಣಾಮಕಾರಿ ಮಾರ್ಗಗಳನ್ನು ಅನುಸರಿಸಲಾಗುತ್ತಿದೆ. ಮನೆ ಸುತ್ತಮುತ್ತಲಿನ ಪರಿಸರದ ಸ್ವಚ್ಚತೆಗೆ ಆದ್ಯತೆ ನೀಡಿ. ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ ವಹಿಸಿ. ಡೆಂಗ್ಯೂ ಬಗ್ಗೆ ಭಯ ಬೇಡ, ಜಾಗೃತೆಯಿರಲಿ ಎಂದರು.
ಡೆಂಗ್ಯೂಗೆ 7 ಜನ ಸಾವು: ಡೆಂಗ್ಯೂ ರೋಗದಿಂದ ಕಳೆದ ಮೂರು ತಿಂಗಳಲ್ಲಿ ನಗರದಲ್ಲಿ ಏಳು ಜನ ಮೃತಪಟ್ಟಿದ್ದರು. ಕಳೆದ ಮೂರು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸಾವು ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ಕಳೆದ ಒಂದು ತಿಂಗಳಿನಿಂದ ನಗರದಲ್ಲಿ ಡೆಂಗ್ಯೂ ರೋಗ ಆತಂಕಕಾರಿಯಾಗಿ ಏರಿಕೆ ಕಂಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳ ಪ್ರಕಾರ, ನಗರದಲ್ಲಿ ಈ ವರ್ಷ ಸೆ.08ರವರೆಗೆ 5,000 ಡೆಂಗ್ಯೂ ರೋಗ ಪ್ರಕರಣಗಳು ವರದಿಯಾಗಿದ್ದವು. ಆಗಸ್ಟ್ನಲ್ಲಿ 2,374 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದವು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…