Advertisement
MIRROR FOCUS

#Dengue | ರಾಜ್ಯಾದ್ಯಂತ ಕಾಡುತ್ತಿದೆ ಡೆಂಗ್ಯೂ | ಗ್ರಾಮೀಣ ಭಾಗದಲ್ಲೂ ಇರಲಿ ಎಚ್ಚರ | ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಿಎಂ ಸೂಚನೆ |

Share

ಈ ಬಾರಿ ಅಂತ ಮಳೆ ಬಾರದೇ ಹೋದರೂ, ಮಳೆಗಾಲದಲ್ಲಿ ಬರುವಂತ ಸಾಂಕ್ರಾಮಿಕ ರೋಗಗಳಿಗೇನು ಕಮ್ಮಿ ಇಲ್ಲ. ಅದರಲ್ಲೂ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಾಜ್ಯಾದ್ಯಂತ ಡೆಂಗ್ಯೂ ರೋಗ ಪ್ರಕರಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ. ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು ಏಳು ಸಾವಿರಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ.

ಇದರಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ. ಡೆಂಗ್ಯೂ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಔಷಧ ಸಿಂಪಡಣೆ, ನೀರು ಶೇಖರಣೆಯಾಗುವ ಸ್ಥಳಗಳನ್ನು ಗುರುತಿಸಿ ಸ್ವಚ್ಚಗೊಳಿಸುವುದು ಸೇರಿದಂತೆ ಸೊಳ್ಳೆ ನಿಯಂತ್ರಣಕ್ಕೆ ಪರಿಣಾಮಕಾರಿ ಮಾರ್ಗಗಳನ್ನು ಅನುಸರಿಸಲಾಗುತ್ತಿದೆ. ಮನೆ ಸುತ್ತಮುತ್ತಲಿನ ಪರಿಸರದ ಸ್ವಚ್ಚತೆಗೆ ಆದ್ಯತೆ ನೀಡಿ. ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ ವಹಿಸಿ. ಡೆಂಗ್ಯೂ ಬಗ್ಗೆ ಭಯ ಬೇಡ, ಜಾಗೃತೆಯಿರಲಿ ಎಂದರು.

ಡೆಂಗ್ಯೂಗೆ 7 ಜನ ಸಾವು:  ಡೆಂಗ್ಯೂ ರೋಗದಿಂದ ಕಳೆದ ಮೂರು ತಿಂಗಳಲ್ಲಿ ನಗರದಲ್ಲಿ ಏಳು ಜನ ಮೃತಪಟ್ಟಿದ್ದರು. ಕಳೆದ ಮೂರು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸಾವು ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ಕಳೆದ ಒಂದು ತಿಂಗಳಿನಿಂದ ನಗರದಲ್ಲಿ ಡೆಂಗ್ಯೂ ರೋಗ ಆತಂಕಕಾರಿಯಾಗಿ ಏರಿಕೆ ಕಂಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳ ಪ್ರಕಾರ, ನಗರದಲ್ಲಿ ಈ ವರ್ಷ ಸೆ.08ರವರೆಗೆ 5,000 ಡೆಂಗ್ಯೂ ರೋಗ ಪ್ರಕರಣಗಳು ವರದಿಯಾಗಿದ್ದವು. ಆಗಸ್ಟ್‌ನಲ್ಲಿ 2,374 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದವು.

ಡೆಂಗ್ಯೂ ಪ್ರಕರಣಗಳ ನಿಯಂತ್ರಣ ಕುರಿತು ಬಿಬಿಪಿಎಂ ಅಧಿಕಾರಿಗಳ ಜೊತೆ ಸೆ.7 ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆಸಿ ಸೆಪ್ಟೆಂಬರ್​​ನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಈ ವೇಳೆ ಡೆಂಗ್ಯೂ ರೋಗ ಉಲ್ಬಣಗೊಳ್ಳದಂತೆ ನೋಡಿಕೊಳ್ಳಿ ಎಂದು ಸೂಚನೆ ನೀಡಿದ್ದರು. ಡೆಂಗ್ಯೂ ಮುಖ್ಯವಾಗಿ ಮಳೆಗೆ ಸಂಬಂಧಿಸಿದೆ. ಮಳೆ ಹೆಚ್ಚಾದಾಗ ಪ್ರಕರಣಗಳು ಹೆಚ್ಚಾಗುತ್ತವೆ. 2022ರ ಸೆಪ್ಟೆಂಬರ್, ಅಕ್ಟೋಬರ್ ಮತ್ತು ನವೆಂಬರ್‌ ತಿಂಗಳಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಿದ್ದವು. ಈ ವರ್ಷ ಜುಲೈ ಮತ್ತು ಆಗಸ್ಟ್‌ ತಿಂಗಳಿನಲ್ಲೇ ಹೆಚ್ಚು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮ ಹಾಗೂ ಟೆಸ್ಟಿಂಗ್ ಸ್ಯಾಂಪಲ್ಸ್ ಹೆಚ್ಚಿಸುವಂತೆ ಸೂಚಿಸಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

14 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

23 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

23 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago