ಈ ಬಾರಿಯ ಬಿಸಿಲು ಮಳೆಯ ಆಟಕ್ಕೆ ರಾಜ್ಯದ ಜನ ಬೇಸತ್ತು ಹೋಗಿದ್ದಾರೆ. ವಾತಾವರಣ ಅನಿಶ್ಚಿತತೆಯಿಂದ ವಿವಿಧ ರೋಗಗಳು ಕಾಣಿಸಿಕೊಳ್ಳುತ್ತಿವೆ. ಡೆಂಗ್ಯೂ (Dengue), ಮಲೇರಿಯಾ(Malaria), ಟೈಫಾಯ್ಡ್ ಪ್ರಕರಣಗಳು ಹೆಚ್ಚಾಗಿವೆ. ಇನ್ನೂ ಕೇರಳದಲ್ಲಿ ನಿಫಾ ವೈರಸ್ ನಿದ್ದೆಗೆಡಿಸಿದೆ. ರಾಜ್ಯಾದ್ಯಂತ ಡೆಂಗ್ಯೂ ಪ್ರಕರಣಗಳು ಏರಿಕೆ ಕಾಣೂತ್ತಿವೆ. ಅದರಲ್ಲೂ ಬೆಂಗಳೂರಿನ, ಆಸ್ಪತ್ರೆಗಳಿಗೆ ಮತ್ತೊಂದು ರೀತಿಯ ಟೆನ್ಷನ್ ಶುರುವಾಗಿದೆ. ಡೆಂಗ್ಯೂ ಹೊಡೆತದಿಂದ ನಲುಗಿದ ರೋಗಿಗಳಲ್ಲಿ ಬಿಳಿರಕ್ತ ಕಣ#ಗಳ ಕೊರತೆ ಉಂಟಾಗ್ತಿದ್ದು, ಇತ್ತ ಬ್ಲಡ್ ಬ್ಯಾಂಕ್ಗಳಿಗೂ ಸಂಕಷ್ಟ ಎದುರಾಗಿದೆ.
ಮಳೆ ನಿಂತರೂ ಮರದ ಹನಿ ನಿಲ್ಲಲ್ಲ ಅನ್ನೋ ಹಾಗೇ ರಾಜ್ಯದಲ್ಲಿ ಮಳೆ ಇಲ್ಲದಿದ್ರೂ ರಾಜಧಾನಿ ಬೆಂಗಳೂರಲ್ಲಿ ಡೆಂಗ್ಯೂ ಪ್ರಕರಣಗಳು ಏರಿಕೆಯಾಗ್ತಾಲೇ ಇದೆ. ಡೆಂಗ್ಯು ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗ್ತಿದ್ರೂ ಕೂಡ, ಕೆಲ ರೋಗಿಗಳಿಗೆ ಬಿಳಿರಕ್ತಕಣಗಳ ಕೊರತೆ ಇರೋದರಿಂದ ಸಮಸ್ಯೆ ಎದುರಾಗ್ತಿದೆ. ಚಿಕಿತ್ಸೆ ವೇಳೆ ವೈಟ್ ಬ್ಲಡ್ ಸೆಲ್ಸ್ ಕಡಿಮೆ ಇರೋ ರೋಗಿಗಳಿಗೆ ಚಿಕಿತ್ಸೆ ನೀಡಲಾಗದೇ ಆಸ್ಪತ್ರೆಗಳಲ್ಲಿ ಸಿಬ್ಬಂದಿ ಹೈರಾಣಾಗ್ತಿದ್ದಾರೆ.
ಈ ಹಿಂದೆ ದಿನಕ್ಕೆ 10-12ರಷ್ಟು ರ್ಯಾಂಡಮ್ ಡೋನರ್ ಪ್ಲೇಟ್ಲೆಟ್ಸ್ ಅವಶ್ಯಕತೆ ಇತ್ತು, ಇದೀಗ ದಿನಕ್ಕೆ 150 ಯುನಿಟ್ ನಷ್ಟು ರ್ಯಾಂಡಮ್ ಡೋನರ್ ಪ್ಲೇಟ್ಲೆಟ್ಸ್ ಗಳ ಅವಶ್ಯಕತೆ ಎದುರಾಗಿದ್ದು, ಇದರಿಂದ ರೋಗಿಗಳಿಗೆ ಚಿಕಿತ್ಸೆ ನೀಡೋಕೆ ಸಮಸ್ಯೆ ಉದ್ಭವಿಸಿದೆ. ಅತ್ತ, ಬ್ಲಡ್ ಬ್ಯಾಂಕ್ಗಳಲ್ಲೂ ಬಿಳಿ ರಕ್ತದಾನಿಗಳ ಕೊರತೆ ಎದುರಾಗಿದ್ದು, ಬ್ಲಡ್ ಬಾಂಕ್ಗಳು ರಕ್ತದಾನ ಶಿಬಿರಗಳನ್ನ ಹೆಚ್ಚಳ ಮಾಡೋಕೆ ಸಜ್ಜಾಗಿವೆ.
ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು…
ಪೆಹಲ್ಗಾಮ್ ಭಯೋತ್ಪಾದಕರ ವಿರುದ್ಧ ಪ್ರಧಾನಿ ನರೇಂದ್ರಮೋದಿಯವರು ತೆಗೆದುಕೊಂಡಿರುವ ಕಠಿಣ ಕ್ರಮವನ್ನು ಸಂಪೂರ್ಣ ಬೆಂಬಲಿಸುವುದಾಗಿ…
ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಮೇ14ರಿಂದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಹಲಸಿನ ಬೀಜದ ಚಟ್ನಿ ಪುಡಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಬೀಜ 1ಕಪ್. (ಒಣಗಿಸಿದ ಹಲಸಿನ…
ನಿನ್ನೆ ಮಧ್ಯರಾತ್ರಿ ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದ ಹಲವು ಭಾಗಗಳಲ್ಲಿ ನಾಗರಿಕರನ್ನು ಮತ್ತು…