ಈ ಬಾರಿಯ ಬಿಸಿಲು ಮಳೆಯ ಆಟಕ್ಕೆ ರಾಜ್ಯದ ಜನ ಬೇಸತ್ತು ಹೋಗಿದ್ದಾರೆ. ವಾತಾವರಣ ಅನಿಶ್ಚಿತತೆಯಿಂದ ವಿವಿಧ ರೋಗಗಳು ಕಾಣಿಸಿಕೊಳ್ಳುತ್ತಿವೆ. ಡೆಂಗ್ಯೂ (Dengue), ಮಲೇರಿಯಾ(Malaria), ಟೈಫಾಯ್ಡ್ ಪ್ರಕರಣಗಳು ಹೆಚ್ಚಾಗಿವೆ. ಇನ್ನೂ ಕೇರಳದಲ್ಲಿ ನಿಫಾ ವೈರಸ್ ನಿದ್ದೆಗೆಡಿಸಿದೆ. ರಾಜ್ಯಾದ್ಯಂತ ಡೆಂಗ್ಯೂ ಪ್ರಕರಣಗಳು ಏರಿಕೆ ಕಾಣೂತ್ತಿವೆ. ಅದರಲ್ಲೂ ಬೆಂಗಳೂರಿನ, ಆಸ್ಪತ್ರೆಗಳಿಗೆ ಮತ್ತೊಂದು ರೀತಿಯ ಟೆನ್ಷನ್ ಶುರುವಾಗಿದೆ. ಡೆಂಗ್ಯೂ ಹೊಡೆತದಿಂದ ನಲುಗಿದ ರೋಗಿಗಳಲ್ಲಿ ಬಿಳಿರಕ್ತ ಕಣ#ಗಳ ಕೊರತೆ ಉಂಟಾಗ್ತಿದ್ದು, ಇತ್ತ ಬ್ಲಡ್ ಬ್ಯಾಂಕ್ಗಳಿಗೂ ಸಂಕಷ್ಟ ಎದುರಾಗಿದೆ.
ಮಳೆ ನಿಂತರೂ ಮರದ ಹನಿ ನಿಲ್ಲಲ್ಲ ಅನ್ನೋ ಹಾಗೇ ರಾಜ್ಯದಲ್ಲಿ ಮಳೆ ಇಲ್ಲದಿದ್ರೂ ರಾಜಧಾನಿ ಬೆಂಗಳೂರಲ್ಲಿ ಡೆಂಗ್ಯೂ ಪ್ರಕರಣಗಳು ಏರಿಕೆಯಾಗ್ತಾಲೇ ಇದೆ. ಡೆಂಗ್ಯು ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗ್ತಿದ್ರೂ ಕೂಡ, ಕೆಲ ರೋಗಿಗಳಿಗೆ ಬಿಳಿರಕ್ತಕಣಗಳ ಕೊರತೆ ಇರೋದರಿಂದ ಸಮಸ್ಯೆ ಎದುರಾಗ್ತಿದೆ. ಚಿಕಿತ್ಸೆ ವೇಳೆ ವೈಟ್ ಬ್ಲಡ್ ಸೆಲ್ಸ್ ಕಡಿಮೆ ಇರೋ ರೋಗಿಗಳಿಗೆ ಚಿಕಿತ್ಸೆ ನೀಡಲಾಗದೇ ಆಸ್ಪತ್ರೆಗಳಲ್ಲಿ ಸಿಬ್ಬಂದಿ ಹೈರಾಣಾಗ್ತಿದ್ದಾರೆ.
ಈ ಹಿಂದೆ ದಿನಕ್ಕೆ 10-12ರಷ್ಟು ರ್ಯಾಂಡಮ್ ಡೋನರ್ ಪ್ಲೇಟ್ಲೆಟ್ಸ್ ಅವಶ್ಯಕತೆ ಇತ್ತು, ಇದೀಗ ದಿನಕ್ಕೆ 150 ಯುನಿಟ್ ನಷ್ಟು ರ್ಯಾಂಡಮ್ ಡೋನರ್ ಪ್ಲೇಟ್ಲೆಟ್ಸ್ ಗಳ ಅವಶ್ಯಕತೆ ಎದುರಾಗಿದ್ದು, ಇದರಿಂದ ರೋಗಿಗಳಿಗೆ ಚಿಕಿತ್ಸೆ ನೀಡೋಕೆ ಸಮಸ್ಯೆ ಉದ್ಭವಿಸಿದೆ. ಅತ್ತ, ಬ್ಲಡ್ ಬ್ಯಾಂಕ್ಗಳಲ್ಲೂ ಬಿಳಿ ರಕ್ತದಾನಿಗಳ ಕೊರತೆ ಎದುರಾಗಿದ್ದು, ಬ್ಲಡ್ ಬಾಂಕ್ಗಳು ರಕ್ತದಾನ ಶಿಬಿರಗಳನ್ನ ಹೆಚ್ಚಳ ಮಾಡೋಕೆ ಸಜ್ಜಾಗಿವೆ.
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…