Advertisement
MIRROR FOCUS

ಮಳೆ ಸುರಿಯುತ್ತಿದ್ದಂತೆ ರಾಜ್ಯದಲ್ಲಿ ಡೆಂಗ್ಯು ಭೀತಿ | ಮುಂಜಾಗ್ರತಾ ಕ್ರಮಕ್ಕೆ ಮುಂದಾದ ರಾಜ್ಯ ಆರೋಗ್ಯ ಇಲಾಖೆ |

Share

ಮುಂಗಾರು ಮಳೆ(Manson) ಆರಂಭವಾಗುತ್ತಿದ್ದಂತೆ ಸಾಂಕ್ರಮಿಕ ರೋಗಗಳು(Infectious disease) ಆರಂಭವಾಗುವುದು ಮಾಮೂಲು. ಅದರಲ್ಲೂ ಮಳೆ(Rain) ಆರಂಭವಾಗುತ್ತಿದ್ದಂತೆ ಡೆಂಗ್ಯು(Dengue) ಎಲ್ಲಿದ್ದರೂ ಜನರನ್ನು ಕಾಡಲು ಸಿದ್ದವಾಗುತ್ತದೆ. ಈಗ ರಾಜ್ಯದಲ್ಲಿ ಇಷ್ಟು ದಿನ ಬಿಸಿಲಿನ ತಾಪಕ್ಕೆ(Heat Temperature) ನಲುಗಿದ್ದ ಜನಕ್ಕೆ ಈಗ ಮಳೆ ತಂಪೆರೆದಿದೆ. ಇದರ ಬೆನ್ನಲ್ಲೇ ಡೆಂಗ್ಯು ಭೀತಿ ಕೂಡ ಎದುರಾಗಿದೆ. ಮೇ 13ರ ವರೆಗೆ ರಾಜ್ಯದಲ್ಲಿ ಒಟ್ಟು 2,877 ಡೆಂಗ್ಯು ಪ್ರಕರಣಗಳು ವರದಿಯಾಗಿವೆ. ಕಳೆದ ವರ್ಷ ಇದೇ ಅವಧಿಯಲ್ಲಿ 1,725 ಪ್ರಕರಣಗಳು ವರದಿಯಾಗಿದ್ದವು. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ, ಈ ಸಾಲಿನಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ ಎಂದು ಆರೋಗ್ಯ ಇಲಾಖೆಯ(Health Department) ಅಂಕಿ – ಅಂಶಗಳು ತಿಳಿಸಿವೆ.

Advertisement
Advertisement

ಮಳೆಗಾಲದಲ್ಲಿ ಡೆಂಗ್ಯು, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಆರೋಗ್ಯ ಇಲಾಖೆ ಮುಂದಾಗಿದೆ. ಇದಕ್ಕಾಗಿ ಇಲಾಖೆಯು ರಾಷ್ಟ್ರೀಯ ಆರೋಗ್ಯ ಮಿಷನ್ (NHM) ನಿರ್ದೇಶಕರ ಅಧ್ಯಕ್ಷತೆಯಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿಗಳು (ಡಿಹೆಚ್​ಒ) ಮತ್ತು ರೋಗ ನಿಯಂತ್ರಣ ಅಧಿಕಾರಿಗಳೊಂದಿಗೆ ಸಭೆಗಳು ನಡೆಸುವುದರ ಮೂಲಕ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಅಲ್ಲದೆ, ಆರೋಗ್ಯ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಪ್ರತಿನಿತ್ಯ ಮನೆ-ಮನೆಗೆ ಭೇಟಿ ನೀಡುವುದು, ಜಿಲ್ಲಾ ಆಸ್ಪತ್ರೆಗಳಲ್ಲಿ ದೃಢಪಟ್ಟ ಡೆಂಗ್ಯು ಪ್ರಕರಣಗಳ ಮೇಲ್ವಿಚಾರಣೆ, ನೀರಿನ ಕೊರತೆ ಇರುವ ಪ್ರದೇಶಗಳಲ್ಲಿ ಜಾಗೃತಿ ಅಭಿಯಾನಗಳು ಮತ್ತು ಪರೀಕ್ಷಾ ಕಿಟ್‌ಗಳು ಮತ್ತು ಚಿಕಿತ್ಸಾ ಔಷಧಿಗಳ ಲಭ್ಯತೆಯನ್ನು ಪರೀಶೀಲನೆ ನಡೆಸಲಾಗುತ್ತಿದೆ.

ಈ ಡೆಂಗ್ಯು ಜ್ವರವೂ ವಿಶೇಷವಾಗಿ ಈಡಿಸ್‌ ಎಂಬ ಹೆಣ್ಣು ಸೊಳ್ಳೆಯ ಕಚ್ಚುವಿಕೆಯಿಂದ ಉಂಟಾಗುತ್ತದೆ. ಸೋಂಕಿತ ವ್ಯಕ್ತಿಯನ್ನು ಕಚ್ಚಿ ನಂತರ ಸೋಂಕಿಲ್ಲದ ವ್ಯಕ್ತಿಯನ್ನು ಕಚ್ಚಿದಾಗ ಈ ಕಾಯಿಲೆಯು ಬರುತ್ತದೆ. ಇದು ಪ್ರಪಂಚದಾದ್ಯಂತ ಉಷ್ಣವಲಯದ ಮತ್ತು ಉಪ ಉಷ್ಣವಲಯದ ಪ್ರದೇಶಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದೆ.

ಡೆಂಗ್ಯು ರೋಗ ಲಕ್ಷಣಗಳು: ಮೈಬಿಸಿ (ತಾಪಮಾನ) ಹೆಚ್ಚಾಗುವುದು, ತೀವ್ರ ತಲೆನೋವು, ಕೀಲು ಮತ್ತು ಸ್ನಾಯು ನೋವು, ದದ್ದು ಮತ್ತು ಕೆಲವು ಸಲ ರಕ್ತಸ್ರಾವ, ವಾಂತಿ ಮತ್ತು ವಾಕರಿಕೆ ಕಾಣಿಸಿಕೊಳ್ಳಬಹುದು. ಕೆಲವು ಸಂದರ್ಭಗಳಲ್ಲಿ ಇದು ಡೆಂಘೀ ಹೆಮರಾಜಿಕ್ ಜ್ವರ ಎಂಬ ತೀವ್ರವಾದ ರೂಪಕ್ಕೆ ತಿರುಗಿ ಜೀವಕ್ಕೆ ಅಪಾಯಕಾರಿಯಾಗಬಹುದು.

ಎಚ್ಚರಿಕೆಗಳು: ಡೆಂಗ್ಯುಗೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಇಲ್ಲ. ಆದರೆ, ರೋಗಲಕ್ಷಣಗಳ ಬೆಂಬಲ ಮತ್ತು ನಿರ್ವಹಣೆ ಮುಖ್ಯವಾಗಿದೆ. ಸೊಳ್ಳೆಗಳ ಸಂತಾನೋತ್ಪತ್ತಿ ಸ್ಥಳಗಳನ್ನು ಕಡಿಮೆ ಮಾಡುವುದು ಮತ್ತು ಸೊಳ್ಳೆ ಕಡಿತದಿಂದ ರಕ್ಷಣೆ ಮಾಡಿಕೊಳ್ಳುವುದು ಮಹತ್ವದ ವಿಷಯ. ಡೆಂಗ್ಯು ಜ್ವರದಿಂದ ದೂರ ಉಳಿಯಲು ಸೊಳ್ಳೆ ಕಚ್ಚದಂತೆ ಸದಾ ಎಚ್ಚರವಹಿಸಬೇಕು. ಶುದ್ಧ ಹಾಗೂ ಕುದಿಸಿ ಆರಿಸಿದ ನೀರನ್ನು ಕುಡಿಯುವುದು ಬಹಳ ಉತ್ತಮ. ಸೀನುವಾಗ, ಕೆಮ್ಮುವಾಗ ಕರವಸ್ತ್ರಗಳನ್ನು ಅಡ್ಡಲಾಗಿ ಇಟ್ಟುಕೊಳ್ಳಬೇಕು. ಸೊಳ್ಳೆಗಳು ಕಡಿಯದಂತೆ ನೋಡಿಕೊಳ್ಳಬೇಕು. ಮನೆ ಸುತ್ತಲೂ ನೀರು ನಿಲ್ಲದಂತೆ ನೋಡಿಕೊಳ್ಳಬೇಕು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

22 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

22 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

23 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

23 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

23 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

23 hours ago