Advertisement
MIRROR FOCUS

ಮಳೆ ಸುರಿಯುತ್ತಿದ್ದಂತೆ ರಾಜ್ಯದಲ್ಲಿ ಡೆಂಗ್ಯು ಭೀತಿ | ಮುಂಜಾಗ್ರತಾ ಕ್ರಮಕ್ಕೆ ಮುಂದಾದ ರಾಜ್ಯ ಆರೋಗ್ಯ ಇಲಾಖೆ |

Share

ಮುಂಗಾರು ಮಳೆ(Manson) ಆರಂಭವಾಗುತ್ತಿದ್ದಂತೆ ಸಾಂಕ್ರಮಿಕ ರೋಗಗಳು(Infectious disease) ಆರಂಭವಾಗುವುದು ಮಾಮೂಲು. ಅದರಲ್ಲೂ ಮಳೆ(Rain) ಆರಂಭವಾಗುತ್ತಿದ್ದಂತೆ ಡೆಂಗ್ಯು(Dengue) ಎಲ್ಲಿದ್ದರೂ ಜನರನ್ನು ಕಾಡಲು ಸಿದ್ದವಾಗುತ್ತದೆ. ಈಗ ರಾಜ್ಯದಲ್ಲಿ ಇಷ್ಟು ದಿನ ಬಿಸಿಲಿನ ತಾಪಕ್ಕೆ(Heat Temperature) ನಲುಗಿದ್ದ ಜನಕ್ಕೆ ಈಗ ಮಳೆ ತಂಪೆರೆದಿದೆ. ಇದರ ಬೆನ್ನಲ್ಲೇ ಡೆಂಗ್ಯು ಭೀತಿ ಕೂಡ ಎದುರಾಗಿದೆ. ಮೇ 13ರ ವರೆಗೆ ರಾಜ್ಯದಲ್ಲಿ ಒಟ್ಟು 2,877 ಡೆಂಗ್ಯು ಪ್ರಕರಣಗಳು ವರದಿಯಾಗಿವೆ. ಕಳೆದ ವರ್ಷ ಇದೇ ಅವಧಿಯಲ್ಲಿ 1,725 ಪ್ರಕರಣಗಳು ವರದಿಯಾಗಿದ್ದವು. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ, ಈ ಸಾಲಿನಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ ಎಂದು ಆರೋಗ್ಯ ಇಲಾಖೆಯ(Health Department) ಅಂಕಿ – ಅಂಶಗಳು ತಿಳಿಸಿವೆ.

ಮಳೆಗಾಲದಲ್ಲಿ ಡೆಂಗ್ಯು, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಆರೋಗ್ಯ ಇಲಾಖೆ ಮುಂದಾಗಿದೆ. ಇದಕ್ಕಾಗಿ ಇಲಾಖೆಯು ರಾಷ್ಟ್ರೀಯ ಆರೋಗ್ಯ ಮಿಷನ್ (NHM) ನಿರ್ದೇಶಕರ ಅಧ್ಯಕ್ಷತೆಯಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿಗಳು (ಡಿಹೆಚ್​ಒ) ಮತ್ತು ರೋಗ ನಿಯಂತ್ರಣ ಅಧಿಕಾರಿಗಳೊಂದಿಗೆ ಸಭೆಗಳು ನಡೆಸುವುದರ ಮೂಲಕ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಅಲ್ಲದೆ, ಆರೋಗ್ಯ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಪ್ರತಿನಿತ್ಯ ಮನೆ-ಮನೆಗೆ ಭೇಟಿ ನೀಡುವುದು, ಜಿಲ್ಲಾ ಆಸ್ಪತ್ರೆಗಳಲ್ಲಿ ದೃಢಪಟ್ಟ ಡೆಂಗ್ಯು ಪ್ರಕರಣಗಳ ಮೇಲ್ವಿಚಾರಣೆ, ನೀರಿನ ಕೊರತೆ ಇರುವ ಪ್ರದೇಶಗಳಲ್ಲಿ ಜಾಗೃತಿ ಅಭಿಯಾನಗಳು ಮತ್ತು ಪರೀಕ್ಷಾ ಕಿಟ್‌ಗಳು ಮತ್ತು ಚಿಕಿತ್ಸಾ ಔಷಧಿಗಳ ಲಭ್ಯತೆಯನ್ನು ಪರೀಶೀಲನೆ ನಡೆಸಲಾಗುತ್ತಿದೆ.

ಈ ಡೆಂಗ್ಯು ಜ್ವರವೂ ವಿಶೇಷವಾಗಿ ಈಡಿಸ್‌ ಎಂಬ ಹೆಣ್ಣು ಸೊಳ್ಳೆಯ ಕಚ್ಚುವಿಕೆಯಿಂದ ಉಂಟಾಗುತ್ತದೆ. ಸೋಂಕಿತ ವ್ಯಕ್ತಿಯನ್ನು ಕಚ್ಚಿ ನಂತರ ಸೋಂಕಿಲ್ಲದ ವ್ಯಕ್ತಿಯನ್ನು ಕಚ್ಚಿದಾಗ ಈ ಕಾಯಿಲೆಯು ಬರುತ್ತದೆ. ಇದು ಪ್ರಪಂಚದಾದ್ಯಂತ ಉಷ್ಣವಲಯದ ಮತ್ತು ಉಪ ಉಷ್ಣವಲಯದ ಪ್ರದೇಶಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದೆ.

ಡೆಂಗ್ಯು ರೋಗ ಲಕ್ಷಣಗಳು: ಮೈಬಿಸಿ (ತಾಪಮಾನ) ಹೆಚ್ಚಾಗುವುದು, ತೀವ್ರ ತಲೆನೋವು, ಕೀಲು ಮತ್ತು ಸ್ನಾಯು ನೋವು, ದದ್ದು ಮತ್ತು ಕೆಲವು ಸಲ ರಕ್ತಸ್ರಾವ, ವಾಂತಿ ಮತ್ತು ವಾಕರಿಕೆ ಕಾಣಿಸಿಕೊಳ್ಳಬಹುದು. ಕೆಲವು ಸಂದರ್ಭಗಳಲ್ಲಿ ಇದು ಡೆಂಘೀ ಹೆಮರಾಜಿಕ್ ಜ್ವರ ಎಂಬ ತೀವ್ರವಾದ ರೂಪಕ್ಕೆ ತಿರುಗಿ ಜೀವಕ್ಕೆ ಅಪಾಯಕಾರಿಯಾಗಬಹುದು.

ಎಚ್ಚರಿಕೆಗಳು: ಡೆಂಗ್ಯುಗೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಇಲ್ಲ. ಆದರೆ, ರೋಗಲಕ್ಷಣಗಳ ಬೆಂಬಲ ಮತ್ತು ನಿರ್ವಹಣೆ ಮುಖ್ಯವಾಗಿದೆ. ಸೊಳ್ಳೆಗಳ ಸಂತಾನೋತ್ಪತ್ತಿ ಸ್ಥಳಗಳನ್ನು ಕಡಿಮೆ ಮಾಡುವುದು ಮತ್ತು ಸೊಳ್ಳೆ ಕಡಿತದಿಂದ ರಕ್ಷಣೆ ಮಾಡಿಕೊಳ್ಳುವುದು ಮಹತ್ವದ ವಿಷಯ. ಡೆಂಗ್ಯು ಜ್ವರದಿಂದ ದೂರ ಉಳಿಯಲು ಸೊಳ್ಳೆ ಕಚ್ಚದಂತೆ ಸದಾ ಎಚ್ಚರವಹಿಸಬೇಕು. ಶುದ್ಧ ಹಾಗೂ ಕುದಿಸಿ ಆರಿಸಿದ ನೀರನ್ನು ಕುಡಿಯುವುದು ಬಹಳ ಉತ್ತಮ. ಸೀನುವಾಗ, ಕೆಮ್ಮುವಾಗ ಕರವಸ್ತ್ರಗಳನ್ನು ಅಡ್ಡಲಾಗಿ ಇಟ್ಟುಕೊಳ್ಳಬೇಕು. ಸೊಳ್ಳೆಗಳು ಕಡಿಯದಂತೆ ನೋಡಿಕೊಳ್ಳಬೇಕು. ಮನೆ ಸುತ್ತಲೂ ನೀರು ನಿಲ್ಲದಂತೆ ನೋಡಿಕೊಳ್ಳಬೇಕು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

4 hours ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

9 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 day ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

1 day ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

1 day ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

2 days ago