Advertisement
MIRROR FOCUS

ಮಳೆ ಸುರಿಯುತ್ತಿದ್ದಂತೆ ರಾಜ್ಯದಲ್ಲಿ ಡೆಂಗ್ಯು ಭೀತಿ | ಮುಂಜಾಗ್ರತಾ ಕ್ರಮಕ್ಕೆ ಮುಂದಾದ ರಾಜ್ಯ ಆರೋಗ್ಯ ಇಲಾಖೆ |

Share

ಮುಂಗಾರು ಮಳೆ(Manson) ಆರಂಭವಾಗುತ್ತಿದ್ದಂತೆ ಸಾಂಕ್ರಮಿಕ ರೋಗಗಳು(Infectious disease) ಆರಂಭವಾಗುವುದು ಮಾಮೂಲು. ಅದರಲ್ಲೂ ಮಳೆ(Rain) ಆರಂಭವಾಗುತ್ತಿದ್ದಂತೆ ಡೆಂಗ್ಯು(Dengue) ಎಲ್ಲಿದ್ದರೂ ಜನರನ್ನು ಕಾಡಲು ಸಿದ್ದವಾಗುತ್ತದೆ. ಈಗ ರಾಜ್ಯದಲ್ಲಿ ಇಷ್ಟು ದಿನ ಬಿಸಿಲಿನ ತಾಪಕ್ಕೆ(Heat Temperature) ನಲುಗಿದ್ದ ಜನಕ್ಕೆ ಈಗ ಮಳೆ ತಂಪೆರೆದಿದೆ. ಇದರ ಬೆನ್ನಲ್ಲೇ ಡೆಂಗ್ಯು ಭೀತಿ ಕೂಡ ಎದುರಾಗಿದೆ. ಮೇ 13ರ ವರೆಗೆ ರಾಜ್ಯದಲ್ಲಿ ಒಟ್ಟು 2,877 ಡೆಂಗ್ಯು ಪ್ರಕರಣಗಳು ವರದಿಯಾಗಿವೆ. ಕಳೆದ ವರ್ಷ ಇದೇ ಅವಧಿಯಲ್ಲಿ 1,725 ಪ್ರಕರಣಗಳು ವರದಿಯಾಗಿದ್ದವು. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ, ಈ ಸಾಲಿನಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ ಎಂದು ಆರೋಗ್ಯ ಇಲಾಖೆಯ(Health Department) ಅಂಕಿ – ಅಂಶಗಳು ತಿಳಿಸಿವೆ.

ಮಳೆಗಾಲದಲ್ಲಿ ಡೆಂಗ್ಯು, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಆರೋಗ್ಯ ಇಲಾಖೆ ಮುಂದಾಗಿದೆ. ಇದಕ್ಕಾಗಿ ಇಲಾಖೆಯು ರಾಷ್ಟ್ರೀಯ ಆರೋಗ್ಯ ಮಿಷನ್ (NHM) ನಿರ್ದೇಶಕರ ಅಧ್ಯಕ್ಷತೆಯಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿಗಳು (ಡಿಹೆಚ್​ಒ) ಮತ್ತು ರೋಗ ನಿಯಂತ್ರಣ ಅಧಿಕಾರಿಗಳೊಂದಿಗೆ ಸಭೆಗಳು ನಡೆಸುವುದರ ಮೂಲಕ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಅಲ್ಲದೆ, ಆರೋಗ್ಯ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಪ್ರತಿನಿತ್ಯ ಮನೆ-ಮನೆಗೆ ಭೇಟಿ ನೀಡುವುದು, ಜಿಲ್ಲಾ ಆಸ್ಪತ್ರೆಗಳಲ್ಲಿ ದೃಢಪಟ್ಟ ಡೆಂಗ್ಯು ಪ್ರಕರಣಗಳ ಮೇಲ್ವಿಚಾರಣೆ, ನೀರಿನ ಕೊರತೆ ಇರುವ ಪ್ರದೇಶಗಳಲ್ಲಿ ಜಾಗೃತಿ ಅಭಿಯಾನಗಳು ಮತ್ತು ಪರೀಕ್ಷಾ ಕಿಟ್‌ಗಳು ಮತ್ತು ಚಿಕಿತ್ಸಾ ಔಷಧಿಗಳ ಲಭ್ಯತೆಯನ್ನು ಪರೀಶೀಲನೆ ನಡೆಸಲಾಗುತ್ತಿದೆ.

ಈ ಡೆಂಗ್ಯು ಜ್ವರವೂ ವಿಶೇಷವಾಗಿ ಈಡಿಸ್‌ ಎಂಬ ಹೆಣ್ಣು ಸೊಳ್ಳೆಯ ಕಚ್ಚುವಿಕೆಯಿಂದ ಉಂಟಾಗುತ್ತದೆ. ಸೋಂಕಿತ ವ್ಯಕ್ತಿಯನ್ನು ಕಚ್ಚಿ ನಂತರ ಸೋಂಕಿಲ್ಲದ ವ್ಯಕ್ತಿಯನ್ನು ಕಚ್ಚಿದಾಗ ಈ ಕಾಯಿಲೆಯು ಬರುತ್ತದೆ. ಇದು ಪ್ರಪಂಚದಾದ್ಯಂತ ಉಷ್ಣವಲಯದ ಮತ್ತು ಉಪ ಉಷ್ಣವಲಯದ ಪ್ರದೇಶಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದೆ.

ಡೆಂಗ್ಯು ರೋಗ ಲಕ್ಷಣಗಳು: ಮೈಬಿಸಿ (ತಾಪಮಾನ) ಹೆಚ್ಚಾಗುವುದು, ತೀವ್ರ ತಲೆನೋವು, ಕೀಲು ಮತ್ತು ಸ್ನಾಯು ನೋವು, ದದ್ದು ಮತ್ತು ಕೆಲವು ಸಲ ರಕ್ತಸ್ರಾವ, ವಾಂತಿ ಮತ್ತು ವಾಕರಿಕೆ ಕಾಣಿಸಿಕೊಳ್ಳಬಹುದು. ಕೆಲವು ಸಂದರ್ಭಗಳಲ್ಲಿ ಇದು ಡೆಂಘೀ ಹೆಮರಾಜಿಕ್ ಜ್ವರ ಎಂಬ ತೀವ್ರವಾದ ರೂಪಕ್ಕೆ ತಿರುಗಿ ಜೀವಕ್ಕೆ ಅಪಾಯಕಾರಿಯಾಗಬಹುದು.

ಎಚ್ಚರಿಕೆಗಳು: ಡೆಂಗ್ಯುಗೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಇಲ್ಲ. ಆದರೆ, ರೋಗಲಕ್ಷಣಗಳ ಬೆಂಬಲ ಮತ್ತು ನಿರ್ವಹಣೆ ಮುಖ್ಯವಾಗಿದೆ. ಸೊಳ್ಳೆಗಳ ಸಂತಾನೋತ್ಪತ್ತಿ ಸ್ಥಳಗಳನ್ನು ಕಡಿಮೆ ಮಾಡುವುದು ಮತ್ತು ಸೊಳ್ಳೆ ಕಡಿತದಿಂದ ರಕ್ಷಣೆ ಮಾಡಿಕೊಳ್ಳುವುದು ಮಹತ್ವದ ವಿಷಯ. ಡೆಂಗ್ಯು ಜ್ವರದಿಂದ ದೂರ ಉಳಿಯಲು ಸೊಳ್ಳೆ ಕಚ್ಚದಂತೆ ಸದಾ ಎಚ್ಚರವಹಿಸಬೇಕು. ಶುದ್ಧ ಹಾಗೂ ಕುದಿಸಿ ಆರಿಸಿದ ನೀರನ್ನು ಕುಡಿಯುವುದು ಬಹಳ ಉತ್ತಮ. ಸೀನುವಾಗ, ಕೆಮ್ಮುವಾಗ ಕರವಸ್ತ್ರಗಳನ್ನು ಅಡ್ಡಲಾಗಿ ಇಟ್ಟುಕೊಳ್ಳಬೇಕು. ಸೊಳ್ಳೆಗಳು ಕಡಿಯದಂತೆ ನೋಡಿಕೊಳ್ಳಬೇಕು. ಮನೆ ಸುತ್ತಲೂ ನೀರು ನಿಲ್ಲದಂತೆ ನೋಡಿಕೊಳ್ಳಬೇಕು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

5 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

7 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

14 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

20 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago