Advertisement
ಸುದ್ದಿಗಳು

#BlackMoney | ಸ್ವಿಸ್‌ ಬ್ಯಾಂಕ್‌ನಲ್ಲಿ ಭಾರತೀಯರ ಠೇವಣಿ 11 %ಕುಸಿತ | ಸೆಪ್ಟೆಂಬರ್‌ನಲ್ಲಿ ಐದನೇ ಕಪ್ಪುಹಣದಾರರ ಪಟ್ಟಿ ಕೇಂದ್ರ ಸರ್ಕಾರದ ಕೈ ಸೇರುವ ಸಾಧ್ಯತೆ |

Share

ಭಾರತದ ಕಪ್ಪು ಹಣ ಹೊರ ದೇಶದ ಬ್ಯಾಂಕ್ ಗಳಲ್ಲಿ ಜಮೆಯಾಗುತ್ತಿರುವ ವಿಷಯ ಎಲ್ಲರಿಗೂ ತಿಳಿದೇ ಇದೆ. ವರ್ಷದಿಂದ ವರ್ಷಕ್ಕೆ ಹಣ ಹೂಡಿಕೆ ಪ್ರಮಾಣ ಬೆಳೆಯುತ್ತಲೇ ಇತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಸ್ವಿಜರ್ಲೆಂಡ್‌ನಲ್ಲಿರುವ ಸ್ವಿಸ್‌ ಬ್ಯಾಂಕ್‌ನಲ್ಲಿ #Swiss Banks ಭಾರತೀಯರ ಹೂಡಿಕೆ, ಡಿಪಾಸಿಟ್ ಪ್ರಮಾಣ ಇಳಿಕೆಯಾಗಿದೆ. 2021ಕ್ಕೆ ಹೋಲಿಸಿದರೆ 11% ರಷ್ಟು ಕುಸಿತ ಕಂಡಿದ್ದು, ಪ್ರಸ್ತುತ 3.42 ಶತಕೋಟಿ ಫ್ರಾಂಕ್‌ ಅಂದರೆ ಅಂದಾಜು 30 ಸಾವಿರ ಕೋಟಿ ರೂಪಾಯಿಗೆ ಇಳಿಕೆಯಾಗಿದೆ ಎಂದು ಸ್ವಿಸ್‌ ಕೇಂದ್ರೀಯ ಬ್ಯಾಂಕ್‌ನ ವಾರ್ಷಿಕ ದತ್ತಾಂಶ ವರದಿ ತಿಳಿಸಿದೆ.

Advertisement
Advertisement
Advertisement
Advertisement

2021ರಲ್ಲಿ ಭಾರತೀಯರು, ಭಾರತ ಮೂಲದ ಬ್ಯಾಂಚ್‌ಗಳು ಮತ್ತು ಹಣಕಾಸು ಸಂಸ್ಥೆಗಳ ಒಟ್ಟು ಬಂಡವಾಳ 35 ಸಾವಿರ ಕೋಟಿ ರೂ.ಗೆ ಏರಿಕೆಯಾಗಿತ್ತು. ಇದು 14 ವರ್ಷಗಳಲ್ಲೇ ಗರಿಷ್ಠ ಬಂಡವಾಳ ಸಂಗ್ರಹ ಎನಿಸಿಕೊಂಡಿತ್ತು. ಬಂಡವಾಳ ಕಡಿಮೆಯಾದ ಹಿನ್ನೆಲೆಯಲ್ಲಿ ಕಳೆದ ವರ್ಷ 44ನೇ ಸ್ಥಾನದಲ್ಲಿ ಭಾರತ ಈ ಬಾರಿ 46ನೇ ಸ್ಥಾನ ಪಡೆದಿದೆ.

Advertisement

 

2006ರಲ್ಲಿ ಸಾರ್ವಕಾಲಿಕ ಗರಿಷ್ಟ 60 ಸಾವಿರ ಕೋಟಿ ರೂ. ಹೂಡಿಕೆಗೆ ಏರಿಕೆಯಾಗಿತ್ತು. 2011, 2013, 2017, 2020, 2021ರಲ್ಲಿ ಬಂಡವಾಳ ಏರಿಕೆಯಾಗಿತ್ತು. 2020ರಲ್ಲಿ ಸ್ವಿಸ್‍ಬ್ಯಾಂಕ್‍ನಲ್ಲಿ ಭಾರತೀಯರ ಸಂಪತ್ತು 20,700 ಕೋಟಿ ರೂ. ಗಳಷ್ಟಿತ್ತು. ಅಘೋಷಿತ ವಿದೇಶಿ ಆಸ್ತಿಗಳನ್ನು ಘೋಷಿಸಲು 2015ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ  ವಿದೇಶದಲ್ಲಿ ಇಟ್ಟಿರುವ ಕಪ್ಪುಹಣದ #Black Money ವಿರುದ್ಧ ಸಮರ ಸಾರಿತ್ತು. ಸ್ವಿಸ್ ಬ್ಯಾಂಕ್‍ಗಳಲ್ಲಿ ಇಟ್ಟಿರುವ ಕಪ್ಪು ಹಣದ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸರ್ಕಾರ ಘೋಷಿಸಿತ್ತು.

Advertisement
ಹಲವು ಸುತ್ತಿನ ಮಾತುಕತೆಯ ಬಳಿಕ ಸ್ವಿಸ್‌ ಬ್ಯಾಂಕ್‍ನಲ್ಲಿ ಭಾರತೀಯರು ಹೊಂದಿರುವ ಖಾತೆಗಳ ವಿವರಗಳ ಮೊದಲ ಪಟ್ಟಿ 2018ರಲ್ಲಿ ಭಾರತದ ಕೈಸೇರಿತ್ತು. ಭಾರತ ಸರ್ಕಾರ ಹಾಗೂ ಸ್ವಿಜರ್ಲೆಂಡ್ ನಡುವೆ ನಡೆದ ಒಪ್ಪಂದದ ಅನ್ವಯ ಮಾಹಿತಿಯನ್ನು ಹಂಚಿಕೆ ಮಾಡಲಾಗಿತ್ತು. ಈ ಬೆಳವಣಿಗೆಯನ್ನು ಭಾರತದಲ್ಲಿ ತೆರಿಗೆ ವಂಚಿಸಿ ವಿದೇಶಿಗಳಲ್ಲಿ ಕಪ್ಪು ಹಣವಾಗಿಟ್ಟಿದ್ದ ಪತ್ತೆಯ ಕಾರ್ಯದಲ್ಲಿ ಹೊಸ ಮೈಲಿಗಲ್ಲು ಎಂದು ವಿಶ್ಲೇಷಿಸಲಾಗಿತ್ತು.

ಸ್ವಯಂಚಾಲಿತ ಮಾಹಿತಿ ವಿನಿಮಯ ಚೌಕಟ್ಟಿನ ಅಡಿಯಲ್ಲಿ ಭಾರತವು ಸ್ವಿಸ್ ಬ್ಯಾಂಕ್ ಖಾತೆಗಳ ವಿವರಗಳ ನಾಲ್ಕನೇ ಪಟ್ಟಿಯನ್ನು 2022ರ ಅಕ್ಟೋಬರ್‌ನಲ್ಲಿ ಪಡೆದಿತ್ತು. ಈ ವರ್ಷದ ಸೆಪ್ಟೆಂಬರ್‌ನಲ್ಲಿ ಐದನೇ ಪಟ್ಟಿ ಕೇಂದ್ರ ಸರ್ಕಾರದ ಕೈ ಸೇರುವ ಸಾಧ್ಯತೆಯಿದೆ.

(Source : Online)

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

7 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

7 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

7 hours ago

ಹವಾಮಾನ ವರದಿ | 23-02-2025 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

1 day ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago