Advertisement
ಸುದ್ದಿಗಳು

#BlackMoney | ಸ್ವಿಸ್‌ ಬ್ಯಾಂಕ್‌ನಲ್ಲಿ ಭಾರತೀಯರ ಠೇವಣಿ 11 %ಕುಸಿತ | ಸೆಪ್ಟೆಂಬರ್‌ನಲ್ಲಿ ಐದನೇ ಕಪ್ಪುಹಣದಾರರ ಪಟ್ಟಿ ಕೇಂದ್ರ ಸರ್ಕಾರದ ಕೈ ಸೇರುವ ಸಾಧ್ಯತೆ |

Share

ಭಾರತದ ಕಪ್ಪು ಹಣ ಹೊರ ದೇಶದ ಬ್ಯಾಂಕ್ ಗಳಲ್ಲಿ ಜಮೆಯಾಗುತ್ತಿರುವ ವಿಷಯ ಎಲ್ಲರಿಗೂ ತಿಳಿದೇ ಇದೆ. ವರ್ಷದಿಂದ ವರ್ಷಕ್ಕೆ ಹಣ ಹೂಡಿಕೆ ಪ್ರಮಾಣ ಬೆಳೆಯುತ್ತಲೇ ಇತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಸ್ವಿಜರ್ಲೆಂಡ್‌ನಲ್ಲಿರುವ ಸ್ವಿಸ್‌ ಬ್ಯಾಂಕ್‌ನಲ್ಲಿ #Swiss Banks ಭಾರತೀಯರ ಹೂಡಿಕೆ, ಡಿಪಾಸಿಟ್ ಪ್ರಮಾಣ ಇಳಿಕೆಯಾಗಿದೆ. 2021ಕ್ಕೆ ಹೋಲಿಸಿದರೆ 11% ರಷ್ಟು ಕುಸಿತ ಕಂಡಿದ್ದು, ಪ್ರಸ್ತುತ 3.42 ಶತಕೋಟಿ ಫ್ರಾಂಕ್‌ ಅಂದರೆ ಅಂದಾಜು 30 ಸಾವಿರ ಕೋಟಿ ರೂಪಾಯಿಗೆ ಇಳಿಕೆಯಾಗಿದೆ ಎಂದು ಸ್ವಿಸ್‌ ಕೇಂದ್ರೀಯ ಬ್ಯಾಂಕ್‌ನ ವಾರ್ಷಿಕ ದತ್ತಾಂಶ ವರದಿ ತಿಳಿಸಿದೆ.

2021ರಲ್ಲಿ ಭಾರತೀಯರು, ಭಾರತ ಮೂಲದ ಬ್ಯಾಂಚ್‌ಗಳು ಮತ್ತು ಹಣಕಾಸು ಸಂಸ್ಥೆಗಳ ಒಟ್ಟು ಬಂಡವಾಳ 35 ಸಾವಿರ ಕೋಟಿ ರೂ.ಗೆ ಏರಿಕೆಯಾಗಿತ್ತು. ಇದು 14 ವರ್ಷಗಳಲ್ಲೇ ಗರಿಷ್ಠ ಬಂಡವಾಳ ಸಂಗ್ರಹ ಎನಿಸಿಕೊಂಡಿತ್ತು. ಬಂಡವಾಳ ಕಡಿಮೆಯಾದ ಹಿನ್ನೆಲೆಯಲ್ಲಿ ಕಳೆದ ವರ್ಷ 44ನೇ ಸ್ಥಾನದಲ್ಲಿ ಭಾರತ ಈ ಬಾರಿ 46ನೇ ಸ್ಥಾನ ಪಡೆದಿದೆ.

 

2006ರಲ್ಲಿ ಸಾರ್ವಕಾಲಿಕ ಗರಿಷ್ಟ 60 ಸಾವಿರ ಕೋಟಿ ರೂ. ಹೂಡಿಕೆಗೆ ಏರಿಕೆಯಾಗಿತ್ತು. 2011, 2013, 2017, 2020, 2021ರಲ್ಲಿ ಬಂಡವಾಳ ಏರಿಕೆಯಾಗಿತ್ತು. 2020ರಲ್ಲಿ ಸ್ವಿಸ್‍ಬ್ಯಾಂಕ್‍ನಲ್ಲಿ ಭಾರತೀಯರ ಸಂಪತ್ತು 20,700 ಕೋಟಿ ರೂ. ಗಳಷ್ಟಿತ್ತು. ಅಘೋಷಿತ ವಿದೇಶಿ ಆಸ್ತಿಗಳನ್ನು ಘೋಷಿಸಲು 2015ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ  ವಿದೇಶದಲ್ಲಿ ಇಟ್ಟಿರುವ ಕಪ್ಪುಹಣದ #Black Money ವಿರುದ್ಧ ಸಮರ ಸಾರಿತ್ತು. ಸ್ವಿಸ್ ಬ್ಯಾಂಕ್‍ಗಳಲ್ಲಿ ಇಟ್ಟಿರುವ ಕಪ್ಪು ಹಣದ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸರ್ಕಾರ ಘೋಷಿಸಿತ್ತು.

ಹಲವು ಸುತ್ತಿನ ಮಾತುಕತೆಯ ಬಳಿಕ ಸ್ವಿಸ್‌ ಬ್ಯಾಂಕ್‍ನಲ್ಲಿ ಭಾರತೀಯರು ಹೊಂದಿರುವ ಖಾತೆಗಳ ವಿವರಗಳ ಮೊದಲ ಪಟ್ಟಿ 2018ರಲ್ಲಿ ಭಾರತದ ಕೈಸೇರಿತ್ತು. ಭಾರತ ಸರ್ಕಾರ ಹಾಗೂ ಸ್ವಿಜರ್ಲೆಂಡ್ ನಡುವೆ ನಡೆದ ಒಪ್ಪಂದದ ಅನ್ವಯ ಮಾಹಿತಿಯನ್ನು ಹಂಚಿಕೆ ಮಾಡಲಾಗಿತ್ತು. ಈ ಬೆಳವಣಿಗೆಯನ್ನು ಭಾರತದಲ್ಲಿ ತೆರಿಗೆ ವಂಚಿಸಿ ವಿದೇಶಿಗಳಲ್ಲಿ ಕಪ್ಪು ಹಣವಾಗಿಟ್ಟಿದ್ದ ಪತ್ತೆಯ ಕಾರ್ಯದಲ್ಲಿ ಹೊಸ ಮೈಲಿಗಲ್ಲು ಎಂದು ವಿಶ್ಲೇಷಿಸಲಾಗಿತ್ತು.

ಸ್ವಯಂಚಾಲಿತ ಮಾಹಿತಿ ವಿನಿಮಯ ಚೌಕಟ್ಟಿನ ಅಡಿಯಲ್ಲಿ ಭಾರತವು ಸ್ವಿಸ್ ಬ್ಯಾಂಕ್ ಖಾತೆಗಳ ವಿವರಗಳ ನಾಲ್ಕನೇ ಪಟ್ಟಿಯನ್ನು 2022ರ ಅಕ್ಟೋಬರ್‌ನಲ್ಲಿ ಪಡೆದಿತ್ತು. ಈ ವರ್ಷದ ಸೆಪ್ಟೆಂಬರ್‌ನಲ್ಲಿ ಐದನೇ ಪಟ್ಟಿ ಕೇಂದ್ರ ಸರ್ಕಾರದ ಕೈ ಸೇರುವ ಸಾಧ್ಯತೆಯಿದೆ.

(Source : Online)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

57 minutes ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

1 hour ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

8 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

10 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

17 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

19 hours ago