Advertisement
ಸುದ್ದಿಗಳು

#BlackMoney | ಸ್ವಿಸ್‌ ಬ್ಯಾಂಕ್‌ನಲ್ಲಿ ಭಾರತೀಯರ ಠೇವಣಿ 11 %ಕುಸಿತ | ಸೆಪ್ಟೆಂಬರ್‌ನಲ್ಲಿ ಐದನೇ ಕಪ್ಪುಹಣದಾರರ ಪಟ್ಟಿ ಕೇಂದ್ರ ಸರ್ಕಾರದ ಕೈ ಸೇರುವ ಸಾಧ್ಯತೆ |

Share

ಭಾರತದ ಕಪ್ಪು ಹಣ ಹೊರ ದೇಶದ ಬ್ಯಾಂಕ್ ಗಳಲ್ಲಿ ಜಮೆಯಾಗುತ್ತಿರುವ ವಿಷಯ ಎಲ್ಲರಿಗೂ ತಿಳಿದೇ ಇದೆ. ವರ್ಷದಿಂದ ವರ್ಷಕ್ಕೆ ಹಣ ಹೂಡಿಕೆ ಪ್ರಮಾಣ ಬೆಳೆಯುತ್ತಲೇ ಇತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಸ್ವಿಜರ್ಲೆಂಡ್‌ನಲ್ಲಿರುವ ಸ್ವಿಸ್‌ ಬ್ಯಾಂಕ್‌ನಲ್ಲಿ #Swiss Banks ಭಾರತೀಯರ ಹೂಡಿಕೆ, ಡಿಪಾಸಿಟ್ ಪ್ರಮಾಣ ಇಳಿಕೆಯಾಗಿದೆ. 2021ಕ್ಕೆ ಹೋಲಿಸಿದರೆ 11% ರಷ್ಟು ಕುಸಿತ ಕಂಡಿದ್ದು, ಪ್ರಸ್ತುತ 3.42 ಶತಕೋಟಿ ಫ್ರಾಂಕ್‌ ಅಂದರೆ ಅಂದಾಜು 30 ಸಾವಿರ ಕೋಟಿ ರೂಪಾಯಿಗೆ ಇಳಿಕೆಯಾಗಿದೆ ಎಂದು ಸ್ವಿಸ್‌ ಕೇಂದ್ರೀಯ ಬ್ಯಾಂಕ್‌ನ ವಾರ್ಷಿಕ ದತ್ತಾಂಶ ವರದಿ ತಿಳಿಸಿದೆ.

2021ರಲ್ಲಿ ಭಾರತೀಯರು, ಭಾರತ ಮೂಲದ ಬ್ಯಾಂಚ್‌ಗಳು ಮತ್ತು ಹಣಕಾಸು ಸಂಸ್ಥೆಗಳ ಒಟ್ಟು ಬಂಡವಾಳ 35 ಸಾವಿರ ಕೋಟಿ ರೂ.ಗೆ ಏರಿಕೆಯಾಗಿತ್ತು. ಇದು 14 ವರ್ಷಗಳಲ್ಲೇ ಗರಿಷ್ಠ ಬಂಡವಾಳ ಸಂಗ್ರಹ ಎನಿಸಿಕೊಂಡಿತ್ತು. ಬಂಡವಾಳ ಕಡಿಮೆಯಾದ ಹಿನ್ನೆಲೆಯಲ್ಲಿ ಕಳೆದ ವರ್ಷ 44ನೇ ಸ್ಥಾನದಲ್ಲಿ ಭಾರತ ಈ ಬಾರಿ 46ನೇ ಸ್ಥಾನ ಪಡೆದಿದೆ.

 

2006ರಲ್ಲಿ ಸಾರ್ವಕಾಲಿಕ ಗರಿಷ್ಟ 60 ಸಾವಿರ ಕೋಟಿ ರೂ. ಹೂಡಿಕೆಗೆ ಏರಿಕೆಯಾಗಿತ್ತು. 2011, 2013, 2017, 2020, 2021ರಲ್ಲಿ ಬಂಡವಾಳ ಏರಿಕೆಯಾಗಿತ್ತು. 2020ರಲ್ಲಿ ಸ್ವಿಸ್‍ಬ್ಯಾಂಕ್‍ನಲ್ಲಿ ಭಾರತೀಯರ ಸಂಪತ್ತು 20,700 ಕೋಟಿ ರೂ. ಗಳಷ್ಟಿತ್ತು. ಅಘೋಷಿತ ವಿದೇಶಿ ಆಸ್ತಿಗಳನ್ನು ಘೋಷಿಸಲು 2015ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ  ವಿದೇಶದಲ್ಲಿ ಇಟ್ಟಿರುವ ಕಪ್ಪುಹಣದ #Black Money ವಿರುದ್ಧ ಸಮರ ಸಾರಿತ್ತು. ಸ್ವಿಸ್ ಬ್ಯಾಂಕ್‍ಗಳಲ್ಲಿ ಇಟ್ಟಿರುವ ಕಪ್ಪು ಹಣದ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸರ್ಕಾರ ಘೋಷಿಸಿತ್ತು.

ಹಲವು ಸುತ್ತಿನ ಮಾತುಕತೆಯ ಬಳಿಕ ಸ್ವಿಸ್‌ ಬ್ಯಾಂಕ್‍ನಲ್ಲಿ ಭಾರತೀಯರು ಹೊಂದಿರುವ ಖಾತೆಗಳ ವಿವರಗಳ ಮೊದಲ ಪಟ್ಟಿ 2018ರಲ್ಲಿ ಭಾರತದ ಕೈಸೇರಿತ್ತು. ಭಾರತ ಸರ್ಕಾರ ಹಾಗೂ ಸ್ವಿಜರ್ಲೆಂಡ್ ನಡುವೆ ನಡೆದ ಒಪ್ಪಂದದ ಅನ್ವಯ ಮಾಹಿತಿಯನ್ನು ಹಂಚಿಕೆ ಮಾಡಲಾಗಿತ್ತು. ಈ ಬೆಳವಣಿಗೆಯನ್ನು ಭಾರತದಲ್ಲಿ ತೆರಿಗೆ ವಂಚಿಸಿ ವಿದೇಶಿಗಳಲ್ಲಿ ಕಪ್ಪು ಹಣವಾಗಿಟ್ಟಿದ್ದ ಪತ್ತೆಯ ಕಾರ್ಯದಲ್ಲಿ ಹೊಸ ಮೈಲಿಗಲ್ಲು ಎಂದು ವಿಶ್ಲೇಷಿಸಲಾಗಿತ್ತು.

ಸ್ವಯಂಚಾಲಿತ ಮಾಹಿತಿ ವಿನಿಮಯ ಚೌಕಟ್ಟಿನ ಅಡಿಯಲ್ಲಿ ಭಾರತವು ಸ್ವಿಸ್ ಬ್ಯಾಂಕ್ ಖಾತೆಗಳ ವಿವರಗಳ ನಾಲ್ಕನೇ ಪಟ್ಟಿಯನ್ನು 2022ರ ಅಕ್ಟೋಬರ್‌ನಲ್ಲಿ ಪಡೆದಿತ್ತು. ಈ ವರ್ಷದ ಸೆಪ್ಟೆಂಬರ್‌ನಲ್ಲಿ ಐದನೇ ಪಟ್ಟಿ ಕೇಂದ್ರ ಸರ್ಕಾರದ ಕೈ ಸೇರುವ ಸಾಧ್ಯತೆಯಿದೆ.

(Source : Online)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

16 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago