Advertisement
MIRROR FOCUS

ಡಿವಿಎಸ್ ಕಾಂಗ್ರೆಸ್‌ಗೆ ಹೋಗ್ತಾರಾ..? | ಮೈಸೂರಿನಿಂದಲೋ, ಚಿಕ್ಕಬಳ್ಳಾಪುರದಿಂದ ಸ್ಫರ್ಧೆಯೋ ನಡೆಯುತ್ತಿದೆ ಚರ್ಚೆ…! | ನಾಳೆ ಚರ್ಚೆಗೆ ತೆರೆ |

Share

ಒಬ್ಬ ರಾಜಕೀಯ(Politics) ವ್ಯಕ್ತಿ ಸಾರ್ವಜನಿಕ ಜೀವನಕ್ಕೆ ಎಷ್ಟು ಉತ್ತರದಾಯಿಯಾಗಿರಬೇಕೋ, ಅಷ್ಟೆ ಪಕ್ಷಕ್ಕೆ(Party) ಕೂಡ ನಿಯತ್ತಾಗಿ ಇರಬೇಕು. ಅದು.. ಒಂದು ಪಕ್ಷ ಏನೆಲ್ಲಾ ಹುದ್ದೆಗಳನ್ನು ಕೊಡಬೇಕೋ ಅದೆಲ್ಲವನ್ನು ಕೊಟ್ಟ ಮೇಲೆ ಪಕ್ಷವನ್ನು ಕಡೆಗಣಿಸುವುದು ನಿಜಕ್ಕೂ ದುರದೃಷ್ಟಕರ…! ಇದೇ ಮಾತನ್ನು ನಾವು ಮಾಜಿ ಸಿಎಂ, ಹಾಲಿ ಬೆಂಗಳೂರು ಉತ್ತರ (Bengaluru North) ಕ್ಷೇತ್ರದ ಬಿಜೆಪಿ ಸಂಸದ ಸದಾನಂದ ಗೌಡ (D. V. Sadananda Gowda) ಅವರಲ್ಲಿ ಕೇಳಿದರೆ…?.  ಒಂದು ವೇಳೆ ತಮ್ಮ ತವರು ಪಕ್ಷ ಬಿಟ್ಟು ಕಾಂಗ್ರೆಸ್‌ ಸೇರಿ ಮೈಸೂರಿನಿಂದಲೋ, ಚಿಕ್ಕಬಳ್ಳಾಪುರದಿಂದಲೋ ಸ್ಪರ್ಧೆ ಮಾಡಿದರೆ…? ಈಗ ಏನಿದ್ದರೂ ಇದೆಲ್ಲಾ ಚರ್ಚೆ, ನಾಳೆ ಈ ಚರ್ಚೆಗೆ ತೆರೆ ಬೀಳಲಿದೆ. 

ಇಂದು ತಮ್ಮ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜೊತೆ ಡಿವಿಎಸ್‌ ಮಾತನಾಡಿದರು. ಈ ವೇಳೆ ನಾನು ಮಹತ್ವದ ವಿಷಯದ ಬಗ್ಗೆ ನಾಳೆ ನಿಮ್ಮ ಜೊತೆ ಮಾತನಾಡುತ್ತೇನೆ ಎಂದು ಹೇಳಿದ್ದರಿಂದ ಈ ಪ್ರಶ್ನೆ ಈಗ ಸೃಷ್ಟಿಯಾಗಿದೆ. ಕಾಂಗ್ರೆಸ್ (Congress) ನಾಯಕರ ಸಂಪರ್ಕ ವಿಚಾರ ಒಪ್ಪಿಕೊಂಡ ಡಿವಿಎಸ್, ನನ್ನನ್ನ ಬೇರೆಬೇರೆಯವರು ಬಂದು ಸಂಪರ್ಕ ಮಾಡುತ್ತಿರುವುದು ನಿಜ. ನಿನ್ನೆ ನಮ್ಮ ಪಕ್ಷದ ಪ್ರಮುಖ ನಾಯಕರೊಬ್ಬರು ಬಂದು ಸಮಾಧಾನ ಹೇಳಿದ್ದಾರೆ. ಇವತ್ತು ನನ್ನ ಜನ್ಮದಿನ. ಇಡೀ ದಿನ ಕುಟುಂಬದ ಸದಸ್ಯರ ಜತೆ ಕಳೆದು ನಂತರ ನಿಶ್ಚಯ ಮಾಡುತ್ತೇನೆ ಎಂದು ಹೇಳಿದರು.

ನನ್ನ ನಿರ್ಧಾರಗಳನ್ನು ನಾನು ನನ್ನ ಕುಟುಂಬದ ಸದಸ್ಯರ ಜತೆ ಚರ್ಚಿಸಬೇಕು. ಬೆಂಗಳೂರು ಉತ್ತರದಲ್ಲಿ ನಿಮಗೆ ಟಿಕೆಟ್‌ ಎಂದು ಹೇಳಿ ಕೊನೇ ಕ್ಷಣದಲ್ಲಿ ನನ್ನ ರಕ್ಷಣೆಗೆ ಬರಲಿಲ್ಲ. ಕೆಲವೊಂದು ಮನದಾಳದ ವಿಚಾರಗಳನ್ನು ಹೇಳಿಕೊಳ್ಳಬೇಕಿದೆ. ಅದಕ್ಕಾಗಿ ಮಂಗಳವಾರ ಸುದ್ದಿಗೋಷ್ಠಿ ಕರೆಯುತ್ತೇನೆ. ನಾಳೆ ಯಾವ ನಿರ್ಣಯ ಅಂತ ಈಗಲೇ ಹೇಳಿಬಿಟ್ಟರೆ ನಾಳೆಗೆ ಏನೂ ಉಳಿಯುವುದಿಲ್ಲ. ರಾಜಕೀಯದಲ್ಲಿ ಏರುಪೇರು, ಮುಜುಗರ ಸಹಜ. ಹೀಗಿದ್ದರೂ ತಿಳಿದೂ ತಿಳಿದೂ ಹೀಗೆ ಮಾಡಿರುವುದು ಬೇಜಾರು ತಂದಿದೆ ಎಂದು ತಿಳಿಸಿದರು. 

ಮೈಸೂರಿನಿಂದ ಸ್ಪರ್ಧೆ:ಒಕ್ಕಲಿಗರ ಮತದಾರರ ಸಂಖ್ಯೆ ಮೈಸೂರಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹೀಗಾಗಿ ಕಾಂಗ್ರೆಸ್‌ ಆಪರೇಷನ್‌ ಹಸ್ತ ಮಾಡಿದ್ದು ಡಿವಿಎಸ್‌ ಅವರನ್ನು ಇಳಿಸಲು ಮುಂದಾಗಿದೆ ಎಂಬ ವದಂತಿ ರಾಜಕೀಯ ವಲಯದಿಂದ ಕೇಳಿ ಬರುತ್ತಿದೆ. ಈ ಬಗ್ಗೆ ಇನ್ನೂ ಯಾರು ಅಧಿಕೃತವಾಗಿ ತಿಳಿಸಿಲ್ಲ. ಈ ನಡುವೆ ಚಿಕ್ಕಬಳ್ಳಾಪುರದಿಂದ ಸ್ಫರ್ಧೆ ಮಾಡುತ್ತಾರೆ ಎನ್ನುವ ಚರ್ಚೆಯೂ ಇದೆ. ಇದಕ್ಕೆಲ್ಲಾ ಮಂಗಳವಾರದ ಡಿವಿಎಸ್‌ ಸುದ್ದಿಗೋಷ್ಠಿ ಭಾರೀ ಮಹತ್ವ ಪಡೆದಿದೆ.

  • ಅಂತರ್ಜಾಲ ಮಾಹಿತಿ

Mysore has the highest number of single voters. Therefore, rumors are being heard from the political circles that Congress has started an operation and DVS is ready to bring him down. No one has officially informed about this yet. Thus, Tuesday’s DVS press conference has become very important.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

7 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

8 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

8 hours ago

ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…

9 hours ago

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

21 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

1 day ago