MIRROR FOCUS

ಮಳೆನೀರು ಕೊಯ್ಲು ಅಳವಡಿಕೆಯ ಬಗ್ಗೆ ಜನಜಾಗೃತಿ | ವರುಣ ಮಿತ್ರ ತರಬೇತಿ ಕಾರ್ಯಕ್ರಮಕ್ಕೆ ಡಿಸಿಎಂ ಚಾಲನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಂಗಳೂರು(Bengaluru) ನಗರದಲ್ಲಿ ನೀರಿನ ಸಮಸ್ಯೆಯ(Water problem) ಪರಿಹಾರಕ್ಕೆ ಮಳೆನೀರು ಕೊಯ್ಲು(Water harvesting) ಪದ್ದತಿಯ ಸಮರ್ಪಕ ಅಳವಡಿಕೆ ಬಹಳ ಪ್ರಾಮುಖ್ಯವಾಗಿದೆ. ಈ ಬಗ್ಗೆ ಜನರಲ್ಲಿ ಇನ್ನಷ್ಟು ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು ಕೈಗೊಳ್ಳುವಂತೆ ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ದಿ ಸಚಿವರಾದ ಡಿ.ಕೆ ಶಿವಕುಮಾರ್‌(D K Shivakumar) ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಇಂದು ವಿಧಾನಸೌಧದ ಪೂರ್ವ ಭಾಗದಲ್ಲಿ ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ವತಿಯಿಂದ ಆಯೋಜಿಸಲಾಗಿದ್ದ, ಯುನೈಟೆಡ್‌ ನೇಷನ್ಸ್‌ – ಇನೋವೇಷನ್ಸ್‌ ಪ್ರಾಜೆಕ್ಟ್‌ ಫಾರ್‌ ವಾಟರ್‌ ಸೆಕ್ಯೂರಿಟಿ ಇನ್‌ ಬೆಂಗಳೂರು ಸಿಟಿ ಯೋಜನೆಗೆ, ಮಳೆ ನೀರು ಕೊಯ್ಲು ಜಾಗೃತಿ ಹಾಗೂ ಮನೆ ಬಾಗಿಲಿಗೆ ಕಾವೇರಿ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಈ ವರ್ಷ ಬೆಂಗಳೂರು ನಗರ ತೀವ್ರ ನೀರಿನ ಅಭಾವ ಎದುರಿಸಿತು. ಈ ಸಂಧರ್ಭದಲ್ಲಿ ಒತ್ತಡವನ್ನು ಸಹಿಸಿಕೊಂಡು ಬೆಂಗಳೂರು ಜಲಮಂಡಳಿಯ ಎಲ್ಲರೂ ಹಗಲಿರುಳು ಸಮರ್ಪಕವಾಗಿ ಕಾರ್ಯನಿರ್ವಹಿಸಿದ್ದಾರೆ. ಈ ಮೂಲಕ ಸರಕಾರಕ್ಕೆ ಯಾವುದೇ ಮುಜುಗರವಾಗದಂಥೆ ಪರಿಸ್ಥಿತಿ ನಿಭಾಯಿಸಿದ್ದಾರೆ. ಇದಕ್ಕೆ ಸರಕಾರದ ಪರವಾಗಿ ಜಲಮಂಡಳೀಯ ಎಲ್ಲಾ ಸಿಬ್ಬಂದಿಗಳೂ, ನೌಕರರರು ಹಾಗೂ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅದರಲ್ಲೂ ಚುನಾವಣೆಯ ಸಂಧರ್ಭದಲ್ಲಿ ಯಾವುದೇ ತೊಡಕಿಲ್ಲದೇ ಪರಿಸ್ಥಿತಿ ನಿರ್ವಹಣೆ ಶ್ಲಾಘನೀಯ ಎಂದರು.

ಯುನೈಟೆಡ್‌ ನೇಷನ್ಸ್‌ – ಇನೋವೇಷನ್ಸ್‌ ಪ್ರಾಜೆಕ್ಟ್‌ ಫಾರ್‌ ವಾಟರ್‌ ಸೆಕ್ಯೂರಿಟಿ ಇನ್‌ ಬೆಂಗಳೂರು ಸಿಟಿ:
ಬೆಂಗಳೂರು ನಗರದಲ್ಲಿ ಜಲಮಂಡಳಿ ವತಿಯಿಂದ ಕೈಗೊಳ್ಳಲಾಗುತ್ತಿರುವ ಸುಸ್ಥಿರ ಯೋಜನೆಗಳ ಬಗ್ಗೆ ಯುನೈಟೆಡ್‌ ನೇಷನ್ಸ್‌ ಕ್ಲೈಮೇಟ್‌ ಚೇಂಜ್‌ ಸಂಸ್ಥೆಯು ಪ್ರಶಂಸಿದೆ. ಅದರ ಜೊತೆಯಲ್ಲಿಯೇ, ಇನೋವೇಷನ್ಸ್‌ ಪ್ರಾಜೆಕ್ಟ್‌ ಫಾರ್‌ ವಾಟರ್‌ ಸೆಕ್ಯೂರಿಟಿ ಇನ್‌ ಬೆಂಗಳೂರು ಸಿಟಿ ಯೋಜನೆಯ ಅನುಷ್ಟಾನಕ್ಕೂ ಕೈಜೋಡಿಸಲು ಮುಂದಾಗಿದೆ. ಸಮಪರ್ಕ ನೀರು ನಿರ್ವಹಣೆ, ಮಳೆ ನೀರು ಕೊಯ್ಲು ಪದ್ದತಿಯ ಅಳವಡಿಕೆ, ಶುದ್ದ ಸಂಸ್ಕರಿಸಿದ ನೀರನ್ನ ಕೆರೆಗಳಿಗೆ ತುಂಬಿಸುವುದು, ಆಧುನಿಕ ತಂತ್ರಜ್ಞಾನಗಳ ಮೂಲಕ ಎಕೋ ಫ್ರೇಂಡ್ಲಿ ಸಂಸ್ಕರಿಸಿದ ನೀರಿನ ಬಳಕೆಯನ್ನು ಉತ್ತೇಜಿಸುವುದು. ಅಂತರ್ಜಲ ಸಮಪರ್ಕ ನಿರ್ವಹಣೆಗಾಗಿ ಆಧುನಿಕ ತಂತ್ರಜ್ಞಾನಗಳ ಬಳಕೆ, ನೂತನ ಆದಾಯ ಮೂಲಗಳನ್ನ ಪ್ರಾರಂಭಿಸುವ ಬಗ್ಗೆ ಸಮಪರ್ಕವಾದ ಯೋಜನೆ ಇದಾಗಿದೆ ಎಂದು ಉಪಮುಖ್ಯಮಂತ್ರಿ ಹೇಳಿದರು.

ಮಳೆನೀರು ಕೊಯ್ಲು ಅಳವಡಿಕೆಯ ಬಗ್ಗೆ ಜನಜಾಗೃತಿ – ವರುಣ ಮಿತ್ರ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ: ಕೇವಲ 1200 ಚದರ್ ಅಡಿ ವ್ಯಾಸದ ಕಟ್ಟಡದಿಂದ ನಾವು ಪ್ರತಿವರ್ಷ ಸುಮಾರು 1 ಲಕ್ಷ ಲೀಟರ್‌ನಷ್ಟು ನೀರನ್ನು ಸಂಗ್ರಹಿಸಬಹುದಾಗಿದೆ. ಇದು ಒಂದು ಕುಟುಂಬ ಸುಮಾರು 7 ತಿಂಗಳುಗಳ ಕಾಲ ಬಳಸಬಹುದಾಗಿದೆ. ನಗರದ ಬಹುಪಾಲು ಜನರು ಅಂತರ್ಜಲದ ಮೇಲೆ ಅವಲಂಬಿತರಾಗಿದ್ದು, ಸಮರ್ಪಕವಾಗಿ ಮಳೆ ನೀರು ಕೊಯ್ಲು ಪದ್ದತಿಯನ್ನು ಅಳವಡಿಸಿಕೊಂಡಲ್ಲಿ ಬಿರು ಬೇಸಿಗೆಯಲ್ಲೂ ನೀರಿನ ಕೊರತೆ ಆಗದಂತೆ ನಿಭಾಯಿಸಬಹುದಾಗಿದೆ. ಜನರು ಹೆಚ್ಚಿನ ಪ್ರಮಾಣದಲ್ಲಿ ಇದನ್ನ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಇದೇ ವೇಳೆ ಮಳೆ ನೀರು ಇಂಗುಗುಂಡಿಗಳನ್ನು ವೈಜ್ಞಾನಿಕವಾಗಿ ಅಳವಡಿಸುವ ಕುಶಲ ಕಾರ್ಮಿಕರ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಿರುದ್ಯೋಗಿ ಯುವ ಜನರಿಗೆ ಉತ್ತಮ ವ್ಯವಹಾರ ಪ್ರಾರಂಭಿಸಲು ಅನುವು ಮಾಡುವ ನಿಟ್ಟಿನಲ್ಲಿ ಜಲಮಂಡಳಿ ವತಿಯಿಂದ 1000 ವರುಣಮಿತ್ರರಿಗೆ ತರಬೇತಿ ನೀಡಲು ಚಿಂತಿಸಲಾಗಿದೆ ಎಂದು ಹೇಳಿದರು.

ಮನೆಬಾಗಿಲಿಗೆ ತೆರಳಿ ಕಾವೇರಿ ಸಂಪರ್ಕ: ಕಾವೇರಿ 5 ನೇ ಹಂತದ ಕಾಮಗಾರಿಗಳೂ ಪೂರ್ಣಗೊಂಡಿವೆ, ನಗರದ ಹೊರಭಾಗದಲ್ಲಿರುವ 110 ಹಳ್ಳಿಗಳಿಗೆ ಕಾವೇರಿ ನೀರು ಸಂಪರ್ಕ ನೀಡುವ ಕಾರ್ಯಕ್ಕೆ ಸದ್ಯದಲ್ಲೇ ಚಾಲನೆ ನೀಡಲಾಗುವುದು. ಇಂದು ಈ ಪ್ರದೇಶಗಳಲ್ಲಿ ಸಂಪರ್ಕ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಲಿ ಎನ್ನುವ ಉದ್ದೇಶದಿಂದ ಜನರ ಮನೆಬಾಗಿಲಿಗೆ ತೆರಳಿ ಸಂಪರ್ಕ ಅಭಿಯಾನ ಪ್ರಾರಂಭಿಸಲಾಗಿದೆ ಎಂದು ಹೇಳಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪಡಿತರ ಚೀಟಿದಾರರ ಇ-ಕೆವೈಸಿ ಮರುಸಂಗ್ರಹಿಸುವ ಕೊನೆಯ ಅವಕಾಶ

ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು…

2 hours ago

ರಬ್ಬರ್ ತೋಟಗಳ ಮಾಹಿತಿ ಸಂಗ್ರಹ | ರಬ್ಬರ್ ತೋಟಗಳ ಜಿಯೋ-ಮ್ಯಾಪಿಂಗ್

ನೈಸರ್ಗಿಕ ರಬ್ಬರ್ ಮತ್ತು ಅದರ ಉತ್ಪನ್ನಗಳು ಅರಣ್ಯನಾಶ ಮುಕ್ತ ನಿಯಮಗಳಿಗಾಗಿ ಯುರೋಪಿಯನ್ ಒಕ್ಕೂಟ…

2 hours ago

ಹವಾಮಾನ ವರದಿ | 25-04-2025 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ |

ಮುನ್ಸೂಚನೆಯಂತೆ ಮೇ 1 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

9 hours ago

ಒತ್ತುವರಿಯಾಗಿರುವ  ಕೆರೆಗಳನ್ನು ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸೂಚನೆ

ಖಾಸಗಿಯವರಿಂದ ಒತ್ತುವರಿಯಾಗಿರುವ  ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ…

16 hours ago

ಭಾರತದಿಂದ ಅಫ್ಘಾನಿಸ್ತಾನಕ್ಕೆ 4.8 ಟನ್ ಜೀವರಕ್ಷಕ ಲಸಿಕೆ ರವಾನೆ

ಭಾರತವು 4.8 ಟನ್ ಲಸಿಕೆಗಳನ್ನು ಅಫ್ಘಾನಿಸ್ತಾನಕ್ಕೆಕಳುಹಿಸುವ ಮೂಲಕ ಮಾನವೀಯ ನೆರವು ನೀಡಿದೆ. ಇದರಲ್ಲಿ…

16 hours ago

ಭ್ರಷ್ಟಾಚಾರದ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ  | ಉಪಲೋಕಾಯುಕ್ತ ಬಿ. ವೀರಪ್ಪ ಎಚ್ಚರಿಕೆ

ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದು, ಭ್ರಷ್ಟಾಚಾರದ ವಿರುದ್ಧ…

16 hours ago