ದೇರಾಜೆ ಸೀತಾರಾಮಯ್ಯ ನೆನಪು ನೂರೆಂಟು ಮತ್ತು ರಸಋಷಿ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ | ವಿವೇಕಾನಂದ ಮಹಾವಿದ್ಯಾಲಯದಲ್ಲಿ ಕಾರ್ಯಕ್ರಮ

December 13, 2023
8:56 PM

“ಮಂತ್ರದ ವಿನಿಯೋಗವಾಗುವ ಕ್ಷೇತ್ರ ಯಕ್ಷಗಾನ. ಇದನ್ನು ಅರ್ಥೈಸಿಕೊಳ್ಳುವ ಸಹೃದಯಿಗಳು ನಾವಾಗಬೇಕು. ಅಂತೆಯೇ ಇದು ಕೇಳುಗರನ್ನು ಬೆಳೆಸುವ ಕ್ಷೇತ್ರವೂ ಹೌದು. ಅರ್ಥದಾರಿಗಳು ಕೇಳುಗರನ್ನು ತೃಪ್ತಿ ಪಡಿಸುವ ಗುಣವನ್ನು ಹೊಂದಿರಬೇಕು” ಎಂದು ಖ್ಯಾತ ಚಿಂತಕ ಲಕ್ಷ್ಮೀಶ ತೋಳ್ಪಾಡಿ ಹೇಳಿದರು.

Advertisement
Advertisement

ಅವರು ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ, ವಿವೇಕಾನಂದ ಸಂಶೋಧನ ಕೇಂದ್ರ, ಐಕ್ಯೂಎಸಿ, ದೇರಾಜೆ ಸೀತಾರಾಮಯ್ಯ ಯಕ್ಷಗಾನ ಅಧ್ಯಯನ ಕೇಂದ್ರ ಹಾಗೂ ದೇರಾಜೆ ಸೀತಾರಾಮಯ್ಯ ಸಂಸ್ಕರಣ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ದೇರಾಜೆ ಸೀತಾರಾಮಯ್ಯ ನೆನಪು ನೂರೆಂಟು (ಸಂಸ್ಕರಣ ಗ್ರಂಥ) ಮತ್ತು ರಸಋಷಿ (ಮರುಮುದ್ರಣ) ಕೃತಿಗಳನ್ನು ಲೋಕಾರ್ಪಣೆ ಗೈದು ಮಾತನಾಡಿದರು.

Advertisement

“ಯಕ್ಷಗಾನ ಕಲಾವಿದನಾದವನು ಸೋಲುವುದಕ್ಕೆ ಭಯಪಡಬಾರದು. ಸೋಲಿಗೆ ಹೆದರಿದರೆ ಸೋಲುವ ಮೊದಲೇ ಸೋಲನ್ನು ಒಪ್ಪಿಕೊಂಡಂತೆ. ಗೆಲುವಿನಷ್ಟೇ ಸಮಾನವಾಗಿ ಸೋಲನ್ನು ಕೂಡಾ ಸ್ವೀಕರಿಸುವ ಮನೋಭಾವನೆ ಕಲಾವಿದನಲ್ಲಿರಬೇಕು. ವಾಗ್ವಾದಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡದೆ ಜೀವನವನ್ನು ಕಲೆಯ ಜೊತೆ ಸರಿದೂಗಿಸಿಕೊಂಡು ಮುನ್ನಡೆಯಬೇಕು” ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಶ್ರೀಪತಿ ಕಲ್ಲೂರಾಯ ಮಾತನಾಡಿ, “ಈಗಿನ ಸಮಾಜದಲ್ಲಿ ವೃತ್ತಿಯನ್ನು ಪಡೆದುಕೊಳ್ಳುವುದೇ ಜನರ ಗುರಿಯಾಗಿದೆ. ವೃತ್ತಿಯನ್ನು ಪಡೆದುಕೊಳ್ಳುವುದರ ಜೊತೆಗೆ ಕಲೆಯನ್ನು ಬೆಳೆಸಿಕೊಳ್ಳುವುದು ಕೂಡಾ ಬಹಳ ಮುಖ್ಯ. ವೃತ್ತಿಯನ್ನು ಪಡೆದುಕೊಳ್ಳಲು ಬೇಕಾದ ವ್ಯಕ್ತಿತ್ವವನ್ನು ಕಲೆ ರೂಪಿಸಿಕೊಡುತ್ತದೆ. ಇಂತಹ ಅದ್ಭುತ ಕಲೆಯನ್ನು ಬೆಳೆಸುವಂತವರು ನಾವಾಗಬೇಕು” ಎಂದು ನುಡಿದರು.

Advertisement

ಈ ಸಂದರ್ಭದಲ್ಲಿ ದೇರಾಜೆ ಸಂಸ್ಕರಣಾ ಸಮಿತಿಯ ಗೌರವಾಧ್ಯಕ್ಷ ಆನೆಕಾರ ಗಣಪ್ಪಯ್ಯ ಹಾಗೂ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳೀಕೃಷ್ಣ ಕೆ. ಎನ್ ಶುಭಹಾರೈಸಿದರು.ವೇದಿಕೆಯಲ್ಲಿ ಐಕ್ಯೂಎಸಿ ಘಟಕದ ಸಂಯೋಜಕ ಶಿವಪ್ರಸಾದ್ ಕೆ ಎಸ್ ಉಪಸ್ಥಿತರಿದ್ದರು.

ಶ್ರೀರಾಮಕುಂಜೇಶ್ವರ ಮಹಾವಿದ್ಯಾಲಯದ ಪ್ರಾಚಾರ್ಯ ಹಾಗೂ ಅರ್ಥಧಾರಿ ಗಣರಾಜ ಕುಂಬ್ಳೆ ಅವರಿಗೆ ಯಕ್ಷ ಗೌರವ ನೀಡಲಾಯಿತು.

Advertisement

ಕಾಲೇಜಿನ ಪ್ರಾಚಾರ್ಯ ಪ್ರೊ.ವಿಷ್ಣುಗಣಪತಿ ಭಟ್ ಸ್ವಾಗತಿಸಿ, ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯಸರಸ್ವತಿ ಬಿ ವಂದಿಸಿದರು.  ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮನಮೋಹನ ಎಂ. ನಿರೂಪಿಸಿದರು.

 

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ
May 3, 2024
12:48 PM
by: ಸಾಯಿಶೇಖರ್ ಕರಿಕಳ
ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror