Advertisement
ಸುದ್ದಿಗಳು

ದೇರಾಜೆ ಸೀತಾರಾಮಯ್ಯ ನೆನಪು ನೂರೆಂಟು ಮತ್ತು ರಸಋಷಿ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ | ವಿವೇಕಾನಂದ ಮಹಾವಿದ್ಯಾಲಯದಲ್ಲಿ ಕಾರ್ಯಕ್ರಮ

Share

“ಮಂತ್ರದ ವಿನಿಯೋಗವಾಗುವ ಕ್ಷೇತ್ರ ಯಕ್ಷಗಾನ. ಇದನ್ನು ಅರ್ಥೈಸಿಕೊಳ್ಳುವ ಸಹೃದಯಿಗಳು ನಾವಾಗಬೇಕು. ಅಂತೆಯೇ ಇದು ಕೇಳುಗರನ್ನು ಬೆಳೆಸುವ ಕ್ಷೇತ್ರವೂ ಹೌದು. ಅರ್ಥದಾರಿಗಳು ಕೇಳುಗರನ್ನು ತೃಪ್ತಿ ಪಡಿಸುವ ಗುಣವನ್ನು ಹೊಂದಿರಬೇಕು” ಎಂದು ಖ್ಯಾತ ಚಿಂತಕ ಲಕ್ಷ್ಮೀಶ ತೋಳ್ಪಾಡಿ ಹೇಳಿದರು.

ಅವರು ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ, ವಿವೇಕಾನಂದ ಸಂಶೋಧನ ಕೇಂದ್ರ, ಐಕ್ಯೂಎಸಿ, ದೇರಾಜೆ ಸೀತಾರಾಮಯ್ಯ ಯಕ್ಷಗಾನ ಅಧ್ಯಯನ ಕೇಂದ್ರ ಹಾಗೂ ದೇರಾಜೆ ಸೀತಾರಾಮಯ್ಯ ಸಂಸ್ಕರಣ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ದೇರಾಜೆ ಸೀತಾರಾಮಯ್ಯ ನೆನಪು ನೂರೆಂಟು (ಸಂಸ್ಕರಣ ಗ್ರಂಥ) ಮತ್ತು ರಸಋಷಿ (ಮರುಮುದ್ರಣ) ಕೃತಿಗಳನ್ನು ಲೋಕಾರ್ಪಣೆ ಗೈದು ಮಾತನಾಡಿದರು.

“ಯಕ್ಷಗಾನ ಕಲಾವಿದನಾದವನು ಸೋಲುವುದಕ್ಕೆ ಭಯಪಡಬಾರದು. ಸೋಲಿಗೆ ಹೆದರಿದರೆ ಸೋಲುವ ಮೊದಲೇ ಸೋಲನ್ನು ಒಪ್ಪಿಕೊಂಡಂತೆ. ಗೆಲುವಿನಷ್ಟೇ ಸಮಾನವಾಗಿ ಸೋಲನ್ನು ಕೂಡಾ ಸ್ವೀಕರಿಸುವ ಮನೋಭಾವನೆ ಕಲಾವಿದನಲ್ಲಿರಬೇಕು. ವಾಗ್ವಾದಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡದೆ ಜೀವನವನ್ನು ಕಲೆಯ ಜೊತೆ ಸರಿದೂಗಿಸಿಕೊಂಡು ಮುನ್ನಡೆಯಬೇಕು” ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಶ್ರೀಪತಿ ಕಲ್ಲೂರಾಯ ಮಾತನಾಡಿ, “ಈಗಿನ ಸಮಾಜದಲ್ಲಿ ವೃತ್ತಿಯನ್ನು ಪಡೆದುಕೊಳ್ಳುವುದೇ ಜನರ ಗುರಿಯಾಗಿದೆ. ವೃತ್ತಿಯನ್ನು ಪಡೆದುಕೊಳ್ಳುವುದರ ಜೊತೆಗೆ ಕಲೆಯನ್ನು ಬೆಳೆಸಿಕೊಳ್ಳುವುದು ಕೂಡಾ ಬಹಳ ಮುಖ್ಯ. ವೃತ್ತಿಯನ್ನು ಪಡೆದುಕೊಳ್ಳಲು ಬೇಕಾದ ವ್ಯಕ್ತಿತ್ವವನ್ನು ಕಲೆ ರೂಪಿಸಿಕೊಡುತ್ತದೆ. ಇಂತಹ ಅದ್ಭುತ ಕಲೆಯನ್ನು ಬೆಳೆಸುವಂತವರು ನಾವಾಗಬೇಕು” ಎಂದು ನುಡಿದರು.

ಈ ಸಂದರ್ಭದಲ್ಲಿ ದೇರಾಜೆ ಸಂಸ್ಕರಣಾ ಸಮಿತಿಯ ಗೌರವಾಧ್ಯಕ್ಷ ಆನೆಕಾರ ಗಣಪ್ಪಯ್ಯ ಹಾಗೂ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳೀಕೃಷ್ಣ ಕೆ. ಎನ್ ಶುಭಹಾರೈಸಿದರು.ವೇದಿಕೆಯಲ್ಲಿ ಐಕ್ಯೂಎಸಿ ಘಟಕದ ಸಂಯೋಜಕ ಶಿವಪ್ರಸಾದ್ ಕೆ ಎಸ್ ಉಪಸ್ಥಿತರಿದ್ದರು.

ಶ್ರೀರಾಮಕುಂಜೇಶ್ವರ ಮಹಾವಿದ್ಯಾಲಯದ ಪ್ರಾಚಾರ್ಯ ಹಾಗೂ ಅರ್ಥಧಾರಿ ಗಣರಾಜ ಕುಂಬ್ಳೆ ಅವರಿಗೆ ಯಕ್ಷ ಗೌರವ ನೀಡಲಾಯಿತು.

ಕಾಲೇಜಿನ ಪ್ರಾಚಾರ್ಯ ಪ್ರೊ.ವಿಷ್ಣುಗಣಪತಿ ಭಟ್ ಸ್ವಾಗತಿಸಿ, ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯಸರಸ್ವತಿ ಬಿ ವಂದಿಸಿದರು.  ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮನಮೋಹನ ಎಂ. ನಿರೂಪಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

2 days ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

2 days ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

2 days ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

2 days ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

3 days ago