Advertisement
ಸುದ್ದಿಗಳು

ದೇರಾಜೆ ಸೀತಾರಾಮಯ್ಯ ನೆನಪು ನೂರೆಂಟು ಮತ್ತು ರಸಋಷಿ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ | ವಿವೇಕಾನಂದ ಮಹಾವಿದ್ಯಾಲಯದಲ್ಲಿ ಕಾರ್ಯಕ್ರಮ

Share

“ಮಂತ್ರದ ವಿನಿಯೋಗವಾಗುವ ಕ್ಷೇತ್ರ ಯಕ್ಷಗಾನ. ಇದನ್ನು ಅರ್ಥೈಸಿಕೊಳ್ಳುವ ಸಹೃದಯಿಗಳು ನಾವಾಗಬೇಕು. ಅಂತೆಯೇ ಇದು ಕೇಳುಗರನ್ನು ಬೆಳೆಸುವ ಕ್ಷೇತ್ರವೂ ಹೌದು. ಅರ್ಥದಾರಿಗಳು ಕೇಳುಗರನ್ನು ತೃಪ್ತಿ ಪಡಿಸುವ ಗುಣವನ್ನು ಹೊಂದಿರಬೇಕು” ಎಂದು ಖ್ಯಾತ ಚಿಂತಕ ಲಕ್ಷ್ಮೀಶ ತೋಳ್ಪಾಡಿ ಹೇಳಿದರು.

ಅವರು ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ, ವಿವೇಕಾನಂದ ಸಂಶೋಧನ ಕೇಂದ್ರ, ಐಕ್ಯೂಎಸಿ, ದೇರಾಜೆ ಸೀತಾರಾಮಯ್ಯ ಯಕ್ಷಗಾನ ಅಧ್ಯಯನ ಕೇಂದ್ರ ಹಾಗೂ ದೇರಾಜೆ ಸೀತಾರಾಮಯ್ಯ ಸಂಸ್ಕರಣ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ದೇರಾಜೆ ಸೀತಾರಾಮಯ್ಯ ನೆನಪು ನೂರೆಂಟು (ಸಂಸ್ಕರಣ ಗ್ರಂಥ) ಮತ್ತು ರಸಋಷಿ (ಮರುಮುದ್ರಣ) ಕೃತಿಗಳನ್ನು ಲೋಕಾರ್ಪಣೆ ಗೈದು ಮಾತನಾಡಿದರು.

“ಯಕ್ಷಗಾನ ಕಲಾವಿದನಾದವನು ಸೋಲುವುದಕ್ಕೆ ಭಯಪಡಬಾರದು. ಸೋಲಿಗೆ ಹೆದರಿದರೆ ಸೋಲುವ ಮೊದಲೇ ಸೋಲನ್ನು ಒಪ್ಪಿಕೊಂಡಂತೆ. ಗೆಲುವಿನಷ್ಟೇ ಸಮಾನವಾಗಿ ಸೋಲನ್ನು ಕೂಡಾ ಸ್ವೀಕರಿಸುವ ಮನೋಭಾವನೆ ಕಲಾವಿದನಲ್ಲಿರಬೇಕು. ವಾಗ್ವಾದಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡದೆ ಜೀವನವನ್ನು ಕಲೆಯ ಜೊತೆ ಸರಿದೂಗಿಸಿಕೊಂಡು ಮುನ್ನಡೆಯಬೇಕು” ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಶ್ರೀಪತಿ ಕಲ್ಲೂರಾಯ ಮಾತನಾಡಿ, “ಈಗಿನ ಸಮಾಜದಲ್ಲಿ ವೃತ್ತಿಯನ್ನು ಪಡೆದುಕೊಳ್ಳುವುದೇ ಜನರ ಗುರಿಯಾಗಿದೆ. ವೃತ್ತಿಯನ್ನು ಪಡೆದುಕೊಳ್ಳುವುದರ ಜೊತೆಗೆ ಕಲೆಯನ್ನು ಬೆಳೆಸಿಕೊಳ್ಳುವುದು ಕೂಡಾ ಬಹಳ ಮುಖ್ಯ. ವೃತ್ತಿಯನ್ನು ಪಡೆದುಕೊಳ್ಳಲು ಬೇಕಾದ ವ್ಯಕ್ತಿತ್ವವನ್ನು ಕಲೆ ರೂಪಿಸಿಕೊಡುತ್ತದೆ. ಇಂತಹ ಅದ್ಭುತ ಕಲೆಯನ್ನು ಬೆಳೆಸುವಂತವರು ನಾವಾಗಬೇಕು” ಎಂದು ನುಡಿದರು.

ಈ ಸಂದರ್ಭದಲ್ಲಿ ದೇರಾಜೆ ಸಂಸ್ಕರಣಾ ಸಮಿತಿಯ ಗೌರವಾಧ್ಯಕ್ಷ ಆನೆಕಾರ ಗಣಪ್ಪಯ್ಯ ಹಾಗೂ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳೀಕೃಷ್ಣ ಕೆ. ಎನ್ ಶುಭಹಾರೈಸಿದರು.ವೇದಿಕೆಯಲ್ಲಿ ಐಕ್ಯೂಎಸಿ ಘಟಕದ ಸಂಯೋಜಕ ಶಿವಪ್ರಸಾದ್ ಕೆ ಎಸ್ ಉಪಸ್ಥಿತರಿದ್ದರು.

ಶ್ರೀರಾಮಕುಂಜೇಶ್ವರ ಮಹಾವಿದ್ಯಾಲಯದ ಪ್ರಾಚಾರ್ಯ ಹಾಗೂ ಅರ್ಥಧಾರಿ ಗಣರಾಜ ಕುಂಬ್ಳೆ ಅವರಿಗೆ ಯಕ್ಷ ಗೌರವ ನೀಡಲಾಯಿತು.

ಕಾಲೇಜಿನ ಪ್ರಾಚಾರ್ಯ ಪ್ರೊ.ವಿಷ್ಣುಗಣಪತಿ ಭಟ್ ಸ್ವಾಗತಿಸಿ, ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯಸರಸ್ವತಿ ಬಿ ವಂದಿಸಿದರು.  ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮನಮೋಹನ ಎಂ. ನಿರೂಪಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

3 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago