Advertisement
ಸುದ್ದಿಗಳು

ವಿವೇಕಾನಂದ ಕಾಲೇಜಿನಲ್ಲಿ ಅಧ್ಯಯನ ಕೇಂದ್ರ ಉದ್ಘಾಟನೆ |ಜಗತ್ತಿನ ಅತ್ಯಂತ ಶ್ರೀಮಂತ ಮೌಖಿಕ ಕಲೆಗಳಲ್ಲಿ ಒಂದುಯಕ್ಷಗಾನ ತಾಳಮದ್ದಳೆ – ಡಾ. ಪ್ರಭಾಕರ ಜೋಶಿ

Share

ವಿಶ್ವದ ಶ್ರೇಷ್ಠ ಕಲೆಗಳಲ್ಲಿ ಯಕ್ಷಗಾನವೂ ಒಂದಾಗಿದೆ.ಜಗತ್ತಿನ ಅತ್ಯಂತ ಶ್ರೀಮಂತ ಮೌಖಿಕ ಕಲೆಗಳಲ್ಲಿ ಒಂದು ಯಕ್ಷಗಾನ ತಾಳಮದ್ದಳೆ ಎಂದು ವಿಶ್ರಾಂತ ಪ್ರಾಧ್ಯಾಪಕ ಹಾಗೂ ಕಲಾವಿದ ಡಾ.ಪ್ರಭಾಕರ ಜೋಷಿ ಹೇಳಿದರು.

ಅವರು ವಿವೇಕಾನಂದ ಮಹಾವಿದ್ಯಾಲಯದ ಐಕ್ಯೂಎಸಿ ಘಟಕ ಹಾಗೂ ವಿವೇಕಾನಂದ ಸಂಶೋಧನ ಕೇಂದ್ರದ ಆಶ್ರಯಲ್ಲಿ ‘ದೇರಾಜೆ ಸೀತಾರಾಮಯ್ಯ ಯಕ್ಷಗಾನ ಅಧ್ಯಯನ ಕೇಂದ್ರ ಮತ್ತು ಭಾರತೀಯ ಸಂಸ್ಕೃತಿ ಮತ್ತು ಲಲಿತಕಲೆಗಳ ಅಧ್ಯಯನ ಕೇಂದ್ರ ಇದರ ಉದ್ಘಾಟನೆ ಹಾಗೂ ಸನ್ಮಾನ ಸಮಾರಂಭ’ವನ್ನು ಉದ್ಘಾಟಿಸಿ  ಮಾತನಾಡಿದರು. ಕಲೆಗೆ ಅದರದ್ದೇ ಆದ ಭಾಷೆಯಿದೆ. ಭರತನಾಟ್ಯ, ಕಥಕ್ಕಳಿ, ಯಕ್ಷಗಾನ ಇನ್ನು ಹಲವು ಕಲೆಗಳು ಸಾಮಾನ್ಯ ಜನರಿಗೆ ಒಂದೇ ರೀತಿ ಕಾಣುತ್ತದೆ. ಈ ಕಲೆಯ ಸ್ವರೂಪಗಳು ಇದನ್ನು ಭಿನ್ನವಾಗಿಸಿದೆ.ಕಲೆಯ ಸ್ವರೂಪವನ್ನುಅರಿತವರಿಗೆ ಮಾತ್ರ ಈ ನಾಟ್ಯಗಳನ್ನು ಅರ್ಥೈಸಲು ಸಾಧ್ಯ.ಆ ಭಾಷೆಯನ್ನು ಅರ್ಥೈಸಿಕೊಳ್ಳುವುದನ್ನು ಕಲಿಯಬೇಕು ಎಂದರು.

ಮುಖ್ಯಅತಿಥಿಯಾಗಿ ಭಾಗವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷಡಾ.ಶ್ರೀಪತಿ ಕಲ್ಲೂರಾಯ ಮಾತನಾಡಿ, ದೇರಾಜೆ ಸೀತರಾಮಯ್ಯ ಅವರ ಹೆಸರಿನಲ್ಲಿ ಯಕ್ಷಗಾನ ಅಧ್ಯಯನ ಕೇಂದ್ರ, ಭಾರತೀಯ ಸಂಸ್ಕೃತಿ ಮತ್ತು ಲಲಿತಕಲೆಗಳ ಅಧ್ಯಯನ ಕೇಂದ್ರಗಳ ಉದ್ಘಾಟನೆಯ ಮೂಲಕ ಕಾಲೇಜಿನ ಕನಸೊಂದು ನನಸಾಗುತ್ತಿದೆ ಎಂದರು.

ದೇರಾಜೆ ಸೀತಾರಾಮಯ್ಯ ಅವರ ಪುತ್ರ, ರಂಗಕರ್ಮಿ ಮೂರ್ತಿದೇರಾಜೆ ಮಾತನಾಡಿ, ನನ್ನಅಪ್ಪಯ್ಯಅಂದರೆ ದೇರಾಜೆ ಸೀತರಾಮಯ್ಯ ಅವರಿಗೆ ಚೊಕ್ಕಾಡಿಯಲ್ಲಿ ಯಕ್ಷಗಾನ ಅಧ್ಯಯನ ಕೇಂದ್ರವನ್ನು ಸ್ಥಾಪಿಸಬೇಕು ಅನ್ನುವ ಕನಸಿತ್ತು. ಯಕ್ಷಗಾನಕ್ಕೆ ಪ್ರಚಾರವನ್ನುಕೊಡಬೇಕು ಅನ್ನುವ ಉದ್ದೇಶ ಅವರದ್ದಾಗಿತ್ತು.ಅವರ ಕನಸ್ಸನ್ನು ನಗರದ ಪ್ರತಿಷ್ಠಿತ ಕಾಲೇಜು ನನಸು ಮಾಡಿದ್ದು ತುಂಬಾ ಸಂತೋಷದ ವಿಚಾರ. ಕಲೆಯ ಮೂಲ ಹಾಗೂ ಸ್ವರೂಪವನ್ನುಎಲ್ಲರು ತಿಳಿದಿರಬೇಕು. ಇಲ್ಲದಿದ್ದಲ್ಲಿ ಕಲೆಯು ತನ್ನ ಮಹತ್ವವನ್ನು ಕಳೆದುಕೊಳ್ಳುವ ಸಾಧ್ಯತೆಗಳು ಇದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಮಾತನಾಡಿ, ಪ್ರಾಚೀನ ಇತಿಹಾಸವನ್ನು ಭಾರತ ಹೊಂದಿದೆ. ಇದು ಕಲೆ ಸಾಹಿತ್ಯಗಳ ಬೀಡು.ಆದರೆ ಪಾಶ್ಚಾತ್ಯರ ದಾಳಿಯಿಂದ ಶಿಕ್ಷಣ ವ್ಯವಸ್ಥೆ ಬದಲಾಯಿತು.ಒಂದು ವಿಧವಾಗಿ ಮಾನಸಿಕವಾಗಿ ಭಾರತೀಯರನ್ನು ಕುಗ್ಗಿಸುವ ಪ್ರಯತ್ನಗಳು ನಡೆದವು.ಆದರೆ ಭಾರತೀಯರು ಯಾವುದೇ ಕ್ಷೇತ್ರವನ್ನು ತಲುಪುವ ಪ್ರತಿಭೆಯನ್ನು ಹೊಂದಿದ್ದಾರೆ ಎಂದು ನುಡಿದರು.
ವಿವೇಕಾನಂದಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ.ಎನ್. ಅತಿಥಿಯಾಗಿ ಭಾಗವಹಿಸಿ ಶುಭ ಹಾರೈಸಿದರು. ಈ ಸಂದರ್ಭ ದೇರಾಜೆ ಸೀತಾರಾಮಯ್ಯ ಯಕ್ಷಗಾನ ಅಧ್ಯಯನ ಕೇಂದ್ರದ ಸಂಯೋಜಕರಾಗಿ ಕನ್ನಡ ವಿಭಾಗದ ಉಪನ್ಯಾಸಕ ಡಾ.ಮನಮೋಹನ್ ಎಂ ಹಾಗೂ ಭಾರತೀಯ ಸಂಸ್ಕೃತಿ ಮತ್ತು ಲಲಿತ ಕಲೆಗಳ ಅಧ್ಯಯನಕೇಂದ್ರದ ಸಂಯೋಜಕರಾಗಿ ಸ್ನಾತಕೋತ್ತರ ವಾಣಿಜ್ಯ ಶಾಸ್ತ್ರ ವಿಭಾಗದ ಸಂಯೋಜಕಿ ಡಾ. ವಿಜಯ ಸರಸ್ವತಿ ಅವರಿಗೆ ಜವಾಬ್ದಾರಿಯನ್ನು ವಹಿಸಲಾಯಿತು.
ಈ ಸಂದರ್ಭ ಯಕ್ಷಗಾನದ ಹಿರಿಯ ಕಲಾವಿದ ಕುರಿಯ ಗಣಪತಿ ಶಾಸ್ತ್ರಿ, ಸುನಾದ ಸಂಗೀತ ಶಾಲೆಯ ಮುಖ್ಯಸ್ಥಹಾಗೂ ಸಂಗೀತ ಗುರು ವಿದ್ವಾನ್ ಕಾಂಚನ ಈಶ್ವರ್ ಭಟ್ ಹಾಗೂ ಪುತ್ತೂರಿನ ವೈಷ್ಣವಿ ನಾಟ್ಯಾಲಯದ ನೃತ್ಯಗುರು ವಿದುಷಿ ಯೋಗೀಶ್ವರಿ ಜಯಪ್ರಕಾಶ್‍ ಅವರನ್ನು ಸನ್ಮಾನಿಸಲಾಯಿತು.

ವಿವೇಕಾನಂದ ಸಂಶೋಧನ ಕೇಂದ್ರದ ನಿರ್ದೇಶಕ ಡಾ.ಎಚ್.ಜಿ.ಶ್ರೀಧರ್ ಪ್ರಸ್ತಾವಿಸಿದರು.ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣುಗಣಪತಿ ಭಟ್ ಸ್ವಾಗತಿಸಿ, ಕನ್ನಡ ವಿಭಾಗದ ಉಪನ್ಯಾಸಕ ಡಾ. ಮನಮೋಹನ್ ಎಂ ವಂದಿಸಿದರು.ಸ್ನಾತಕೋತ್ತರ ವಾಣಿಜ್ಯ ಶಾಸ್ತ್ರವಿಭಾಗದ ಸಂಯೋಜಕಿಡಾ. ವಿಜಯ ಸರಸ್ವತಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

9 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

1 day ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago