ವಿಶ್ವದ ಶ್ರೇಷ್ಠ ಕಲೆಗಳಲ್ಲಿ ಯಕ್ಷಗಾನವೂ ಒಂದಾಗಿದೆ.ಜಗತ್ತಿನ ಅತ್ಯಂತ ಶ್ರೀಮಂತ ಮೌಖಿಕ ಕಲೆಗಳಲ್ಲಿ ಒಂದು ಯಕ್ಷಗಾನ ತಾಳಮದ್ದಳೆ ಎಂದು ವಿಶ್ರಾಂತ ಪ್ರಾಧ್ಯಾಪಕ ಹಾಗೂ ಕಲಾವಿದ ಡಾ.ಪ್ರಭಾಕರ ಜೋಷಿ ಹೇಳಿದರು.
ಅವರು ವಿವೇಕಾನಂದ ಮಹಾವಿದ್ಯಾಲಯದ ಐಕ್ಯೂಎಸಿ ಘಟಕ ಹಾಗೂ ವಿವೇಕಾನಂದ ಸಂಶೋಧನ ಕೇಂದ್ರದ ಆಶ್ರಯಲ್ಲಿ ‘ದೇರಾಜೆ ಸೀತಾರಾಮಯ್ಯ ಯಕ್ಷಗಾನ ಅಧ್ಯಯನ ಕೇಂದ್ರ ಮತ್ತು ಭಾರತೀಯ ಸಂಸ್ಕೃತಿ ಮತ್ತು ಲಲಿತಕಲೆಗಳ ಅಧ್ಯಯನ ಕೇಂದ್ರ ಇದರ ಉದ್ಘಾಟನೆ ಹಾಗೂ ಸನ್ಮಾನ ಸಮಾರಂಭ’ವನ್ನು ಉದ್ಘಾಟಿಸಿ ಮಾತನಾಡಿದರು. ಕಲೆಗೆ ಅದರದ್ದೇ ಆದ ಭಾಷೆಯಿದೆ. ಭರತನಾಟ್ಯ, ಕಥಕ್ಕಳಿ, ಯಕ್ಷಗಾನ ಇನ್ನು ಹಲವು ಕಲೆಗಳು ಸಾಮಾನ್ಯ ಜನರಿಗೆ ಒಂದೇ ರೀತಿ ಕಾಣುತ್ತದೆ. ಈ ಕಲೆಯ ಸ್ವರೂಪಗಳು ಇದನ್ನು ಭಿನ್ನವಾಗಿಸಿದೆ.ಕಲೆಯ ಸ್ವರೂಪವನ್ನುಅರಿತವರಿಗೆ ಮಾತ್ರ ಈ ನಾಟ್ಯಗಳನ್ನು ಅರ್ಥೈಸಲು ಸಾಧ್ಯ.ಆ ಭಾಷೆಯನ್ನು ಅರ್ಥೈಸಿಕೊಳ್ಳುವುದನ್ನು ಕಲಿಯಬೇಕು ಎಂದರು.
ಮುಖ್ಯಅತಿಥಿಯಾಗಿ ಭಾಗವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷಡಾ.ಶ್ರೀಪತಿ ಕಲ್ಲೂರಾಯ ಮಾತನಾಡಿ, ದೇರಾಜೆ ಸೀತರಾಮಯ್ಯ ಅವರ ಹೆಸರಿನಲ್ಲಿ ಯಕ್ಷಗಾನ ಅಧ್ಯಯನ ಕೇಂದ್ರ, ಭಾರತೀಯ ಸಂಸ್ಕೃತಿ ಮತ್ತು ಲಲಿತಕಲೆಗಳ ಅಧ್ಯಯನ ಕೇಂದ್ರಗಳ ಉದ್ಘಾಟನೆಯ ಮೂಲಕ ಕಾಲೇಜಿನ ಕನಸೊಂದು ನನಸಾಗುತ್ತಿದೆ ಎಂದರು.
ದೇರಾಜೆ ಸೀತಾರಾಮಯ್ಯ ಅವರ ಪುತ್ರ, ರಂಗಕರ್ಮಿ ಮೂರ್ತಿದೇರಾಜೆ ಮಾತನಾಡಿ, ನನ್ನಅಪ್ಪಯ್ಯಅಂದರೆ ದೇರಾಜೆ ಸೀತರಾಮಯ್ಯ ಅವರಿಗೆ ಚೊಕ್ಕಾಡಿಯಲ್ಲಿ ಯಕ್ಷಗಾನ ಅಧ್ಯಯನ ಕೇಂದ್ರವನ್ನು ಸ್ಥಾಪಿಸಬೇಕು ಅನ್ನುವ ಕನಸಿತ್ತು. ಯಕ್ಷಗಾನಕ್ಕೆ ಪ್ರಚಾರವನ್ನುಕೊಡಬೇಕು ಅನ್ನುವ ಉದ್ದೇಶ ಅವರದ್ದಾಗಿತ್ತು.ಅವರ ಕನಸ್ಸನ್ನು ನಗರದ ಪ್ರತಿಷ್ಠಿತ ಕಾಲೇಜು ನನಸು ಮಾಡಿದ್ದು ತುಂಬಾ ಸಂತೋಷದ ವಿಚಾರ. ಕಲೆಯ ಮೂಲ ಹಾಗೂ ಸ್ವರೂಪವನ್ನುಎಲ್ಲರು ತಿಳಿದಿರಬೇಕು. ಇಲ್ಲದಿದ್ದಲ್ಲಿ ಕಲೆಯು ತನ್ನ ಮಹತ್ವವನ್ನು ಕಳೆದುಕೊಳ್ಳುವ ಸಾಧ್ಯತೆಗಳು ಇದೆ ಎಂದರು.ವಿವೇಕಾನಂದ ಸಂಶೋಧನ ಕೇಂದ್ರದ ನಿರ್ದೇಶಕ ಡಾ.ಎಚ್.ಜಿ.ಶ್ರೀಧರ್ ಪ್ರಸ್ತಾವಿಸಿದರು.ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣುಗಣಪತಿ ಭಟ್ ಸ್ವಾಗತಿಸಿ, ಕನ್ನಡ ವಿಭಾಗದ ಉಪನ್ಯಾಸಕ ಡಾ. ಮನಮೋಹನ್ ಎಂ ವಂದಿಸಿದರು.ಸ್ನಾತಕೋತ್ತರ ವಾಣಿಜ್ಯ ಶಾಸ್ತ್ರವಿಭಾಗದ ಸಂಯೋಜಕಿಡಾ. ವಿಜಯ ಸರಸ್ವತಿ ಕಾರ್ಯಕ್ರಮ ನಿರೂಪಿಸಿದರು.
ಕಾಸರಗೋಡು ಜಿಲ್ಲೆಯ ದೈಗೋಳಿಯಲ್ಲಿರುವ ಸಾಯಿನಿಕೇತನ ಸೇವಾಶ್ರಮಕ್ಕೆ ಮಂಗಳೂರು ಎಂಆರ್ಪಿಎಲ್ ಪ್ರಾಯೋಜಕತ್ವದಲ್ಲಿ ನಿರ್ಮಾಣಗೊಂಡ ಕಟ್ಟದ…
ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ…
ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ…
ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…
ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…