Advertisement
ಸುದ್ದಿಗಳು

ವಿವೇಕಾನಂದ ಕಾಲೇಜಿನಲ್ಲಿ ಅಧ್ಯಯನ ಕೇಂದ್ರ ಉದ್ಘಾಟನೆ |ಜಗತ್ತಿನ ಅತ್ಯಂತ ಶ್ರೀಮಂತ ಮೌಖಿಕ ಕಲೆಗಳಲ್ಲಿ ಒಂದುಯಕ್ಷಗಾನ ತಾಳಮದ್ದಳೆ – ಡಾ. ಪ್ರಭಾಕರ ಜೋಶಿ

Share

ವಿಶ್ವದ ಶ್ರೇಷ್ಠ ಕಲೆಗಳಲ್ಲಿ ಯಕ್ಷಗಾನವೂ ಒಂದಾಗಿದೆ.ಜಗತ್ತಿನ ಅತ್ಯಂತ ಶ್ರೀಮಂತ ಮೌಖಿಕ ಕಲೆಗಳಲ್ಲಿ ಒಂದು ಯಕ್ಷಗಾನ ತಾಳಮದ್ದಳೆ ಎಂದು ವಿಶ್ರಾಂತ ಪ್ರಾಧ್ಯಾಪಕ ಹಾಗೂ ಕಲಾವಿದ ಡಾ.ಪ್ರಭಾಕರ ಜೋಷಿ ಹೇಳಿದರು.

ಅವರು ವಿವೇಕಾನಂದ ಮಹಾವಿದ್ಯಾಲಯದ ಐಕ್ಯೂಎಸಿ ಘಟಕ ಹಾಗೂ ವಿವೇಕಾನಂದ ಸಂಶೋಧನ ಕೇಂದ್ರದ ಆಶ್ರಯಲ್ಲಿ ‘ದೇರಾಜೆ ಸೀತಾರಾಮಯ್ಯ ಯಕ್ಷಗಾನ ಅಧ್ಯಯನ ಕೇಂದ್ರ ಮತ್ತು ಭಾರತೀಯ ಸಂಸ್ಕೃತಿ ಮತ್ತು ಲಲಿತಕಲೆಗಳ ಅಧ್ಯಯನ ಕೇಂದ್ರ ಇದರ ಉದ್ಘಾಟನೆ ಹಾಗೂ ಸನ್ಮಾನ ಸಮಾರಂಭ’ವನ್ನು ಉದ್ಘಾಟಿಸಿ  ಮಾತನಾಡಿದರು. ಕಲೆಗೆ ಅದರದ್ದೇ ಆದ ಭಾಷೆಯಿದೆ. ಭರತನಾಟ್ಯ, ಕಥಕ್ಕಳಿ, ಯಕ್ಷಗಾನ ಇನ್ನು ಹಲವು ಕಲೆಗಳು ಸಾಮಾನ್ಯ ಜನರಿಗೆ ಒಂದೇ ರೀತಿ ಕಾಣುತ್ತದೆ. ಈ ಕಲೆಯ ಸ್ವರೂಪಗಳು ಇದನ್ನು ಭಿನ್ನವಾಗಿಸಿದೆ.ಕಲೆಯ ಸ್ವರೂಪವನ್ನುಅರಿತವರಿಗೆ ಮಾತ್ರ ಈ ನಾಟ್ಯಗಳನ್ನು ಅರ್ಥೈಸಲು ಸಾಧ್ಯ.ಆ ಭಾಷೆಯನ್ನು ಅರ್ಥೈಸಿಕೊಳ್ಳುವುದನ್ನು ಕಲಿಯಬೇಕು ಎಂದರು.

ಮುಖ್ಯಅತಿಥಿಯಾಗಿ ಭಾಗವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷಡಾ.ಶ್ರೀಪತಿ ಕಲ್ಲೂರಾಯ ಮಾತನಾಡಿ, ದೇರಾಜೆ ಸೀತರಾಮಯ್ಯ ಅವರ ಹೆಸರಿನಲ್ಲಿ ಯಕ್ಷಗಾನ ಅಧ್ಯಯನ ಕೇಂದ್ರ, ಭಾರತೀಯ ಸಂಸ್ಕೃತಿ ಮತ್ತು ಲಲಿತಕಲೆಗಳ ಅಧ್ಯಯನ ಕೇಂದ್ರಗಳ ಉದ್ಘಾಟನೆಯ ಮೂಲಕ ಕಾಲೇಜಿನ ಕನಸೊಂದು ನನಸಾಗುತ್ತಿದೆ ಎಂದರು.

ದೇರಾಜೆ ಸೀತಾರಾಮಯ್ಯ ಅವರ ಪುತ್ರ, ರಂಗಕರ್ಮಿ ಮೂರ್ತಿದೇರಾಜೆ ಮಾತನಾಡಿ, ನನ್ನಅಪ್ಪಯ್ಯಅಂದರೆ ದೇರಾಜೆ ಸೀತರಾಮಯ್ಯ ಅವರಿಗೆ ಚೊಕ್ಕಾಡಿಯಲ್ಲಿ ಯಕ್ಷಗಾನ ಅಧ್ಯಯನ ಕೇಂದ್ರವನ್ನು ಸ್ಥಾಪಿಸಬೇಕು ಅನ್ನುವ ಕನಸಿತ್ತು. ಯಕ್ಷಗಾನಕ್ಕೆ ಪ್ರಚಾರವನ್ನುಕೊಡಬೇಕು ಅನ್ನುವ ಉದ್ದೇಶ ಅವರದ್ದಾಗಿತ್ತು.ಅವರ ಕನಸ್ಸನ್ನು ನಗರದ ಪ್ರತಿಷ್ಠಿತ ಕಾಲೇಜು ನನಸು ಮಾಡಿದ್ದು ತುಂಬಾ ಸಂತೋಷದ ವಿಚಾರ. ಕಲೆಯ ಮೂಲ ಹಾಗೂ ಸ್ವರೂಪವನ್ನುಎಲ್ಲರು ತಿಳಿದಿರಬೇಕು. ಇಲ್ಲದಿದ್ದಲ್ಲಿ ಕಲೆಯು ತನ್ನ ಮಹತ್ವವನ್ನು ಕಳೆದುಕೊಳ್ಳುವ ಸಾಧ್ಯತೆಗಳು ಇದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಮಾತನಾಡಿ, ಪ್ರಾಚೀನ ಇತಿಹಾಸವನ್ನು ಭಾರತ ಹೊಂದಿದೆ. ಇದು ಕಲೆ ಸಾಹಿತ್ಯಗಳ ಬೀಡು.ಆದರೆ ಪಾಶ್ಚಾತ್ಯರ ದಾಳಿಯಿಂದ ಶಿಕ್ಷಣ ವ್ಯವಸ್ಥೆ ಬದಲಾಯಿತು.ಒಂದು ವಿಧವಾಗಿ ಮಾನಸಿಕವಾಗಿ ಭಾರತೀಯರನ್ನು ಕುಗ್ಗಿಸುವ ಪ್ರಯತ್ನಗಳು ನಡೆದವು.ಆದರೆ ಭಾರತೀಯರು ಯಾವುದೇ ಕ್ಷೇತ್ರವನ್ನು ತಲುಪುವ ಪ್ರತಿಭೆಯನ್ನು ಹೊಂದಿದ್ದಾರೆ ಎಂದು ನುಡಿದರು.
ವಿವೇಕಾನಂದಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ.ಎನ್. ಅತಿಥಿಯಾಗಿ ಭಾಗವಹಿಸಿ ಶುಭ ಹಾರೈಸಿದರು. ಈ ಸಂದರ್ಭ ದೇರಾಜೆ ಸೀತಾರಾಮಯ್ಯ ಯಕ್ಷಗಾನ ಅಧ್ಯಯನ ಕೇಂದ್ರದ ಸಂಯೋಜಕರಾಗಿ ಕನ್ನಡ ವಿಭಾಗದ ಉಪನ್ಯಾಸಕ ಡಾ.ಮನಮೋಹನ್ ಎಂ ಹಾಗೂ ಭಾರತೀಯ ಸಂಸ್ಕೃತಿ ಮತ್ತು ಲಲಿತ ಕಲೆಗಳ ಅಧ್ಯಯನಕೇಂದ್ರದ ಸಂಯೋಜಕರಾಗಿ ಸ್ನಾತಕೋತ್ತರ ವಾಣಿಜ್ಯ ಶಾಸ್ತ್ರ ವಿಭಾಗದ ಸಂಯೋಜಕಿ ಡಾ. ವಿಜಯ ಸರಸ್ವತಿ ಅವರಿಗೆ ಜವಾಬ್ದಾರಿಯನ್ನು ವಹಿಸಲಾಯಿತು.
ಈ ಸಂದರ್ಭ ಯಕ್ಷಗಾನದ ಹಿರಿಯ ಕಲಾವಿದ ಕುರಿಯ ಗಣಪತಿ ಶಾಸ್ತ್ರಿ, ಸುನಾದ ಸಂಗೀತ ಶಾಲೆಯ ಮುಖ್ಯಸ್ಥಹಾಗೂ ಸಂಗೀತ ಗುರು ವಿದ್ವಾನ್ ಕಾಂಚನ ಈಶ್ವರ್ ಭಟ್ ಹಾಗೂ ಪುತ್ತೂರಿನ ವೈಷ್ಣವಿ ನಾಟ್ಯಾಲಯದ ನೃತ್ಯಗುರು ವಿದುಷಿ ಯೋಗೀಶ್ವರಿ ಜಯಪ್ರಕಾಶ್‍ ಅವರನ್ನು ಸನ್ಮಾನಿಸಲಾಯಿತು.

ವಿವೇಕಾನಂದ ಸಂಶೋಧನ ಕೇಂದ್ರದ ನಿರ್ದೇಶಕ ಡಾ.ಎಚ್.ಜಿ.ಶ್ರೀಧರ್ ಪ್ರಸ್ತಾವಿಸಿದರು.ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣುಗಣಪತಿ ಭಟ್ ಸ್ವಾಗತಿಸಿ, ಕನ್ನಡ ವಿಭಾಗದ ಉಪನ್ಯಾಸಕ ಡಾ. ಮನಮೋಹನ್ ಎಂ ವಂದಿಸಿದರು.ಸ್ನಾತಕೋತ್ತರ ವಾಣಿಜ್ಯ ಶಾಸ್ತ್ರವಿಭಾಗದ ಸಂಯೋಜಕಿಡಾ. ವಿಜಯ ಸರಸ್ವತಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

17 hours ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

1 day ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

1 day ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

1 day ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

1 day ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

2 days ago