Advertisement
MIRROR FOCUS

ದೇಸಿ ಗೋವು ದನಗಣತಿ ಆಗಲಿ | ಅಳಿವಿನತ್ತ ಸಾಗುತ್ತಿರುವ ದೇಸಿ ತಳಿ ಗೋವುಗಳು ಉಳಿಯಲಿ |

Share

ದೇಸಿ ತಳಿ ಹಸುಗಳು(Desi cattle) ಒಂದು ಕಾಲದಲ್ಲಿ ತಮ್ಮ ಹೊಟ್ಟೆ ಪಾಡನ್ನು ನಿಸರ್ಗ ದಿಂದಲೇ ಮಾಡಿಕೊಳ್ಳುತ್ತಿದ್ದ ಕಾಲದಲ್ಲಿ ಅವು ಸಹಸ್ರ ಲಕ್ಷ ಸಂಖ್ಯೆಯಲ್ಲಿ ತಮ್ಮ ಪಾಡಿಗೆ ತಾವು ಆನಂದವಾಗಿದ್ದವು. ಯಾವಾಗ ಈ ಹಸುಗಳ(cow) ಹೊಟ್ಟೆ ಪಾಡಿಗೆ ಮನುಷ್ಯ ದುಡಿದು ಹಣ ಖರ್ಚು ಮಾಡಿ ಇವುಗಳಿಗೆ ಅಹಾರ ಒದಗಿಸಿ ಪಾಲನೆ ಮಾಡಬೇಕಾದ ಕಾಲ ಬಂದ ನಂತರ ಒಬ್ಬೊಬ್ಬರಾಗಿ ಈ ಕಡಿಮೆ ಉತ್ಪತ್ತಿ ಯ ಈ ಕಾಲಕ್ಕೆ ನಷ್ಟ ದ ಬಾಬತ್ತಿನ ದೇಸಿ ಹಸು ಸಾಕಣೆಗೆ ಗುಡ್ ಬೈ ಹೇಳತೊಡಗಿದರು. ಈಗ ಹಳ್ಳಿಗಳೂ ಮೊದಲಿನಂತೆ ಧಾರಾಳವಾಗಿಲ್ಲ‌ . ಎಲ್ಲರೂ ಲೆಕ್ಕಾಚಾರದವರೇ ಆಗಿದ್ದಾರೆ.

ಸುಮ್ಮನೆ ಗೋವು ಪೂಜನೀಯ ಪ್ರಾಣಿ ಸಾಕಿ .. ಎಂದು ಸಲಹೆ ನೀಡಿದರೆ ಯಾರೂ ಸಾಕೋಲ್ಲ. ಕನಿಷ್ಠ ಜಾನುವಾರುಗಳ ಹೊಟ್ಟೆ ಪಾಡಿನ ಹಣವಾದರೂ ಅವುಗಳ ನಿರ್ವಾಹಕ ಗೋಪಾಲಕರಿಗೆ ದೊರೆತರೆ ಈಗಲೂ ಗೋಪಾಲನೆ ಸಾದ್ಯ. ಸಾಮಾನ್ಯ ಗೋಪಾಲಕರಿಗೆ (ದೇಸಿ ತಳಿ ಗೋ ಪರಿಪಾಲಕರು) ಸಗಣಿ ಗೋಮೂತ್ರದ ಸಂಕಲನದ ಉತ್ತಮ ಸಾವಯವ ಗೊಬ್ಬರ ಕ್ಕೆ ಬೆಲೆ ಬಂದರೆ ಮಾತ್ರ ದೇಸಿ ತಳಿ ಗೋಪಾಲನೆ ಮಾಡ್ತಾರೆ. ಈ ದೇಸಿ ತಳಿ ಹಸುಗಳ ಬಗ್ಗೆ ಇರುವ ಗೋಪ್ರೀತಿ ಗೋಪಾಲಕರಿಗೆ ಲೆಕ್ಕಾಚಾರ ದಲ್ಲಿ ನಷ್ಟ ವಾದರೂ ಗೋಪಾಲನೆ ಮಾಡುತ್ತಿದ್ದಾರೆ.

ಆಗಲಿ ದೇಸಿ ದನಗಣತಿ : ಯಾರು ದೇಸಿ ತಳಿ ಗೋಪಾಲನೆ ಮಾಡುತ್ತಿದ್ದಾರೆ ಎಂಬುದನ್ನು ಪ್ರತಿ ಗ್ತಾಮ ಪಂಚಾಯತಿ ವ್ಯಾಪ್ತಿಯಲ್ಲೂ "ದೇಸಿ ದನ ಗಣತಿ" ಮಾಡಿ  ಅವರಿಗೆ ವಿಶೇಷ ನೆರವನ್ನು ಸರ್ಕಾರ ಮತ್ತು ಸಮಾಜ ಮಾಡಬೇಕು. ಇದೆಲ್ಲಾ ಗ್ರಾಮ ಪಂಚಾಯತಿ ಮಟ್ಟದಿಂದ ಪ್ರಯತ್ನ ಮಾಡಿದರೆ ಸಾಧ್ಯ. ಇಂತಹ ದೇಸಿ ತಳಿಗಳನ್ನೇ ಸಾಕುವವರ ಮನೆಯ ಕೊಟ್ಟಿಗೆ ಗೊಬ್ಬರಕ್ಕೆ ಹೆಚ್ಚು ಬೆಲೆ ನಿಗದಿ ಪಡಿಸಿ ಆಸಕ್ತ ಕೃಷಿಕರು ಕೊಂಡು ಪರೋಕ್ಷವಾಗಿ ಗೋಪಾಲಕರಿಗೆ ಸಹಾಯ ಮಾಡಬಹುದು.

ಹಿಂದೂಗಳಲ್ಲಿ “ಗೋದಾನ” ಕ್ಕೆ ವಿಶೇಷ ಮಹತ್ವ ಇದೆ. ಗೋತ್ರ ಎಂಬ ಪದ ಹುಟ್ಟಲು ಈ ಗೋದಾನ ದ ದೊಡ್ಡ ಪಾತ್ರವಿದೆ. ಸಾವಿರಾರು ವರ್ಷ ಗಳಿಂದ ಈ ದೇಶದಲ್ಲಿ ಗೋ ಆಧಾರಿತ ಮತ್ತು ಕೃಷಿ ಆಧಾರಿತ ಜೀವನ ನೆಡೆಸುತ್ತಿದ್ದದ್ದು ಇದಕ್ಕೆ ಸಾಕ್ಷಿ. ನಮ್ಮಲ್ಲಿ ಕೆಲವು ಜಾತಿ‌ ಜನಾಂಗದಲ್ಲಿ ಸತ್ತ ಹಿರಿಯರ ಸದ್ದತಿಗಾಗಿ ಗೋದಾನ ಕೊಡುವ ಪರಿಪಾಠ ವಿದೆ. ಆದರೆ ಈಗ ಗೋದಾನ “ಹಿಡಿಯುವವರ”. ಸಂಖ್ಯೆ ಕಡಿಮೆಯಾಗಿದೆ. ಅದಕ್ಕೆ ಈಗ “ಜೀವಂತ” ಗೋದಾನ ದ ಬದಲಾಗಿ “ಬೆಳ್ಳಿ ” ಬಂಗಾರದ ” ಗೋವಿನ ಅಕೃತಿಯ ಗೋದಾನ ನೀಡುತ್ತಿದ್ದಾರೆ. ಇದು ನಿಲ್ಲಬೇಕು. ಹೀಗೆ ದಾನ ಕೊಡುವವರು ತಮ್ಮ ಸಮೀಪದ ವ್ಯಾಪ್ತಿಯಲ್ಲಿ ದೇಸಿ ತಳಿ ಹಸುಗಳನ್ನು ಸಾಕಣೆ ಮಾಡುವವರಿಗೆ ಗೋದಾನದ ಮೊತ್ತದ ಹಣವನ್ನು ಇಲ್ಲವೇ ಗೋ ಗ್ರಾಸ (ಹಿಂಡಿ, ಒಣ ಹುಲ್ಲು, ಸೈಲೇಜ್) ಗಳನ್ನು ಕೊಡಬಹುದು .

ದಯಮಾಡಿ ಯಾರೂ ಬೆಳ್ಳಿ ಬಂಗಾರದ ಗೋದಾನ ಕೊಡಬೇಡಿ. ಇದೊಂದು ಕೆಟ್ಟ ಪರ್ಯಾಯ. ‌ಜೀವಂತ ದೇಸಿ ತಳಿಯ ಗೋವುಗಳೂ ಮತ್ತು ಈ ಗೋವುಗಳನ್ನ ಪಾಲನೆ ಮಾಡುವ ಗೋಪಾಕರೂ ಇನ್ನೂ ಈ ಭೂಮಿಯ ಮೇಲಿದ್ದಾರೆ. ಹೀಗೆ ಗೋಪಾಲನೆ ಮಾಡುವವರು ಯಾವುದೇ ಜಾತಿ ಜನಾಂಗದವರಾಗಲಿ ಅವರಿಗೆ ಗೋದಾನದ ಬಾಬ್ತು ಮುಟ್ಟಿಸಿ “ಗೋದಾನ” ದ ಸಾರ್ಥಕತೆಯನ್ನ ದಾನಿಗಳು ಪಡೆಯಬೇಕು. ನಮ್ಮ ಸಮಾಜದ ಐಷಾರಾಮಿ ಮದುವೆ ಹಬ್ಬಗಳ ಸಂಧರ್ಭದಲ್ಲಿ ದುಂದು ಮಾಡುವವರು ಈ ದುಂದಿನಲ್ಲಿ ಕಿಂಚಿತ್ತಾದರೂ ಹಣವನ್ನು ಸಮೀಪದ ಗೋಪಾಲಕರಿಗೆ ನೀಡಿ ಗೋಪಾಲನೆಯನ್ನು ಪ್ರೋತ್ಸಾಹಿಸಬೇಕು.

ಇದೆಲ್ಲಾ ಸಾಧ್ಯತೆ ಇದೆ : ಇವತ್ತು ನಮ್ಮ ಸಮಾಜದಲ್ಲಿ ಈ ಇಪ್ಪತ್ತೈದು ವರ್ಷಗಳ ಹಿಂದಿನ ಆರ್ಥಿಕ ಬಡತನ ಇಲ್ಲ. ಜನಗಳ ಬಳಿ ಬೇಕಾದಷ್ಟು ಹಣ ಇದೆ. ನಮ್ಮ ಜನ ದಾನ ಧರ್ಮ ಎಂಬುದನ್ನು ಈ ಕಾಲಕ್ಕೆ ಅಪ್ ಡು ಡೇಟ್ ಮಾಡಿಕೊಂಡರೆ ಈ ಕಾಲಕ್ಕೆ ನಿಜವಾದ “ಆರ್ತ , ಕಷ್ಟ ದ ಜೀವಿಗಳಾದ ದೇಸಿ ಗೋ ತಳಿ ಸಂವರ್ಧನೆಗೆ ” ಬಹಳ ದೊಡ್ಡ ಸಹಾಯವಾಗುತ್ತದೆ. ಅತ್ಯಂತ ವೇಗವಾಗಿ ಅಳಿವಿನತ್ತ ಸಾಗುತ್ತಿರುವ ದೇಸಿ ತಳಿ ಗೋವುಗಳು ಉಳಿಯಲಿ… ಈ ಗೋವುಗಳನ್ನ ಉಳಿಸಲು ತಮ್ಮ ಬದುಕನ್ನು ಸವೆಸುತ್ತಿರುವ ಗೋಪಾಕರಿಗೆ ಶಕ್ತಿ ಯನ್ನು ಈ ಶ್ರೀಮಂತ ಸಂಸ್ಕೃತಿಯ ಸಮಾಜ ಸಹಾಯ ಹಸ್ತ ಚಾಚಲಿ ಎಂದು ಹೃದಯ ಪೂರ್ವಕ ವಾಗಿ ಬೇಡುತ್ತಿದ್ದೇನೆ.

ಬರಹ :
ಪ್ರಬಂಧ ಅಂಬುತೀರ್ಥ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪ್ರಬಂಧ ಅಂಬುತೀರ್ಥ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅಂಬುತೀರ್ಥದ ನಿವಾಸಿ ಪ್ರಬಂಧ. ಬಿ ಎ. ವಿಧ್ಯಾಭ್ಯಾಸ ಮುಗಿಸಿದ ಮೇಲೆ ಕೃಷಿ ಕೆಲಸ. ಕಥೆ , ಪರಿಸರ, ಕೃಷಿ , ವಿಜ್ಞಾನ , ಸಾಮಾಜಿಕ ಮತ್ತು ರಾಜಕೀಯ ವಿಚಾರಗಳ ಲೇಖನ ಬರೆಯುವ ಹವ್ಯಾಸ. ಮಲೆನಾಡು ಗಿಡ್ಡ ಗೋ ತಳಿ ಸಂವರ್ಧನೆ, ಜೀರಿಗೆ ಮೆಣಸಿನಕಾಯಿ ಬೆಳೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಣೆ. ಮಲೆನಾಡು ಗಿಡ್ಡ ತಳಿ ಹಸುಗಳ ಸೆಗಣಿಯನ್ನು ಮೌಲ್ಯ ವರ್ಧನೆ ಮಾಡಿ ಕೃಷಿ ಸ್ನೇಹಿ ಸೂಕ್ಷ್ಮಾಣು ಜೀವಿಯುಕ್ತ ಸಾವಯವ ಗೊಬ್ಬರ ತಯಾರಿಸಿ ಮಾರಾಟ ಮಾಡುವ ಕೆಲಸವನ್ನೂ ಮಾಡುತ್ತಿದ್ದಾರೆ.

Published by
ಪ್ರಬಂಧ ಅಂಬುತೀರ್ಥ

Recent Posts

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

6 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

7 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

7 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

12 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

15 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

19 hours ago