ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ

June 23, 2025
1:18 PM

ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ ಸಾಕುವುದು ಕೂಡಾ ಸಾಧ್ಯ ಇದೆ. ಆದರೆ ಪ್ರೀತಿ ಹಾಗೂ ಕಾಳಜಿ ಇರಬೇಕು ಅಷ್ಟೇ.  ಇದಕ್ಕೊಂದು ಉದಾಹರಣೆ ಮಂಗಳೂರಿನ ಕದ್ರಿ ಕಂಬಳದ ಮಲ್ಲಿಕಾ ಬಡಾವಣೆಯಲ್ಲಿರುವ ಪ್ರದೀಪ್‌ ಕುಮಾರ್‌ ಕಲ್ಕೂರ ಅವರ ಮನೆ. ಕಳೆದ ಕೆಲವು ವರ್ಷಗಳಿಂದ ದೇಸೀ ಗೋವನ್ನುಅವರ ಮನೆಯಲ್ಲಿ ಸಾಕುತ್ತಿದ್ದಾರೆ. …… ಮುಂದೆ ಓದಿ……

ಮನೆಯ ಮುಂದೆ ದೇಸೀ ಗೋವು. ಒಂದು ಹೋರಿ-ಎರಡು ದನ. ಕೃಷ್ಣ-ದೇವಕಿ-ಯಶೋಧೆ ಅಲ್ಲಿದ್ದಾರೆ. ಮಂಗಳೂರು ನಗರದಲ್ಲಿ ಸಾಧ್ಯ ಇದೆಯಾ ಎನ್ನುವ ಪ್ರಶ್ನೆಯೇ ಬೇಡ. ಪ್ರದೀಪ್‌ ಕುಮಾರ್‌ ಕಲ್ಕೂರ ಅವರ ಮನೆಯಲ್ಲಿ ದೇಸೀ ಗೋವು ಅದರಲ್ಲೂ ಮಲೆನಾಡು  ಗಿಡ್ಡ ಅಂದರೆ ಕರಾವಳಿ ಭಾಗದಲ್ಲಿ ಹಿಂದಿನಿಂದಲೂ ಇದ್ದ ಗೋವು ಅದು. ಸುಮಾರು ವರ್ಷಗಳಿಂದ ದನವನ್ನು ಸಾಕುತ್ತಿದ್ದೇವೆ. ಬಹುದೊಡ್ಡ ಖರ್ಚಿನಿಂದ ನಾಯಿ ಸಾಕುವ ನಮಗೆ ಕಡಿಮೆ ಖರ್ಚಿನಲ್ಲಿ ಬೆಳೆಸಬಹುದಾದ ದನವನ್ನು ಸಾಕಲು ಕಷ್ಟ ಇದೆಯಾ ಎಂದು ಮರುಪ್ರಶ್ನೆ ಮಾಡುತ್ತಾ, ದನ ಸಾಕಾಣಿಕೆಯ ಬಗ್ಗೆ ಮಾತು ಆರಂಭಿಸುತ್ತಾರೆ. ನಗರದಲ್ಲಿ ಹುಲ್ಲನ್ನು ಖರೀದಿ ಮಾಡುತ್ತೇವೆ, ಒಣಹುಲ್ಲು ತರುತ್ತೇವೆ. ಸೆಗಣಿ-ಮೂತ್ರವನ್ನು ತಮ್ಮದೇ ಕೈತೋಟಕ್ಕೆ ಬಳಕೆಯಾಗುತ್ತದೆ. ಅಗತ್ಯ ಇದ್ದರೆ ಆಸುಪಾಸಿನವರೂ ಪಡೆಯುತ್ತಾರೆ. ದೊಡ್ಡ ಕಷ್ಟವೇ ಆಗುವುದಿಲ್ಲ.ಮನೆಯ ಮುಂದೆ ಇರುತ್ತದೆ, ಹಟ್ಟಿ ಎನ್ನುವ ದೊಡ್ಡ ಖರ್ಚು ಕೂಡಾ ಇಲ್ಲ ಎನ್ನುತ್ತಾರೆ ಪ್ರದೀಪ್‌ ಕುಮಾರ್‌ ಅವರು.

ದೇಸೀ ತಳಿಯ ದನ ಇರಬೇಕು ಎಂದು ನಮ್ಮದು ಆಸೆ. ಮಲೆನಾಡು ಗಿಡ್ಡ ಅಥವಾ  ನಮ್ಮದೇ ಊರ ದನವಾದರೆ ಖರ್ಚುಗಳು ಕಡಿಮೆ, ದೊಡ್ಡ ಕ್ಲೀನಿಂಗ್‌ ಕೆಲಸವೂ ಇರುವುದಿಲ್ಲ ಎನ್ನುತ್ತಾರೆ. ಮೊದಲು ಇರಬೇಕಾದ್ದು ದನದ ಮೇಲೆ ಪ್ರೀತಿ ಹಾಗೂ ಕಾಳಜಿ. ಇದು ಇದ್ದರೆ ದೊಡ್ಡ ಕಷ್ಟೇ ಇಲ್ಲ, ದನವೊಂದು ಇದ್ದರೆ ಕೈತೋಟವೂ ಆರೋಗ್ಯಪೂರ್ಣವಾಗಿರುತ್ತದೆ , ನಮ್ಮ ಆರೋಗ್ಯವೂ ಚೆನ್ನಾಗಿರುತ್ತದೆ ಎನ್ನುತ್ತಾರೆ ಪ್ರದೀಪ್‌ ಕುಮಾರ್‌ ಕಲ್ಕೂರ.

Advertisement

ಗ್ರಾಮೀಣ ಭಾಗದಲ್ಲಿ ಅಂದರೆ ಹಳ್ಳಿಯಲ್ಲಿ ದನ ಸಾಕಾಣಿಕೆ ಕಡಿಮೆಯಾಗುತ್ತಿರುವ ಸಂದರ್ಭ, ಕಾಳಜಿ ಇದ್ದರೆ ಎಲ್ಲಿ ಬೇಕಾದರೂ ಸಾಕಬಹುದು ಎನ್ನುವುದಕ್ಕೆ ಇದೊಂದು ಉದಾಹರಣೆಯಾಗಿದೆ. ಗೋತಳಿ ಉಳಿಯಲು ಇಂತಹ ಕಾಳಜಿಗಳೇ ಕಾರಣವಾಗುತ್ತದೆ.

 

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಿಸಾನ್ ಪಾಠಶಾಲೆ ಮೂಲಕ 20 ಲಕ್ಷ ರೈತರಿಗೆ ಆಧುನಿಕ ಕೃಷಿ ತರಬೇತಿ
January 8, 2026
10:40 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕ ಕಾಯ್ದೆಯಲ್ಲಿ ಮಹತ್ವದ ಬದಲಾವಣೆ | ಕೇಂದ್ರ ಸರ್ಕಾರದಿಂದ ಹೊಸ ಕರಡು ಮಸೂದೆ
January 8, 2026
10:34 PM
by: ದ ರೂರಲ್ ಮಿರರ್.ಕಾಂ
ಕುರಿ ಸಾಕಾಣಿಕ ಘಟಕ ಸ್ಥಾಪನೆಗೆ ಸಹಾಯಧನ
January 8, 2026
9:25 PM
by: ರೂರಲ್‌ ಮಿರರ್ ಸುದ್ದಿಜಾಲ
ವೃತ್ತಿಯಲ್ಲಿ ಇಂಗ್ಲಿಷ್ ಪ್ರೊಫೆಸರ್- ಕೃಷಿಕನಾಗಿಯೂ ಯಶಸ್ಸು…!
January 8, 2026
9:23 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror