ಕೃಷಿಯಲ್ಲಿ ದೇಸಿ ತಳಿಗಳ ಸಂರಕ್ಷಣೆಗೆ ಕೃಷಿ ಇಲಾಖೆ ಕಾರ್ಯಕ್ರಮ ರೂಪಿಸಿದ್ದು, 2025-26ನೇ ಸಾಲಿಗೆ ಇಲಾಖೆಯ ಮೂಲಕ ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲಾಗುತ್ತಿದೆ. ದೇಸಿ ತಳಿಗಳನ್ನು ಬೆಳೆಯುತ್ತಿರುವ ರೈತರನ್ನು ಗುರುತಿಸುವುದು, ತಳಿಗಳನ್ನು ಸಂರಕ್ಷಿಸುವುದು ಹಾಗೂ ಈ ತಳಿಗಳ ಅಭಿವೃದ್ಧಿ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
ಈ ಕಾರ್ಯಕ್ರಮದಲ್ಲಿ ಭತ್ತ, ಅವರೆ, ಅಲಸಂದೆ ಮತ್ತು ಇತರೆ ಬೆಳೆಗಳನ್ನು ಆಯ್ಕೆ ಮಾಡಲಾಗಿದೆ. ಪ್ರಾಥಮಿಕವಾಗಿ ಸ್ಥಳೀಯ ತಳಿಗಳನ್ನು ಬೆಳೆಯುತ್ತಿರುವ ರೈತರನ್ನು ಗುರುತಿಸಬೇಕಾಗಿರುವುದರಿಂದ ಸಮೀಕ್ಷಾ ಕಾರ್ಯವನ್ನು ಇಲಾಖೆಯಿಂದ ಕೈಗೊಳ್ಳಲಾಗುತ್ತಿದ್ದು ಜಿಲ್ಲೆಯಲ್ಲಿ ದೇಸಿ ತಳಿಗಳನ್ನು ಬೆಳೆಯುತ್ತಿರುವ ರೈತರು ಸಮೀಪದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಿ ಮೇ 31 ರೊಳಗೆ ನೋಂದಾಯಿಸಿಕೊಳ್ಳಬೇಕು. ಹಾಗೂ ಸ್ಥಳೀಯ ದೇಸಿ ತಳಿಗಳನ್ನು ಬೆಳೆಯುತ್ತಿರುವ ರೈತರ ಬಗ್ಗೆ ಮಾಹಿತಿಯನ್ನು ಇಲಾಖೆಗೆ ನೀಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…