Advertisement
ಸುದ್ದಿಗಳು

#HimachalRainfall | ಹಿಮಾಚಲ-ಉತ್ತರಾಖಂಡದಲ್ಲಿ ವಿನಾಶಕಾರಿ ಮಳೆ | ಹೀಗೆ ಮಳೆ ಸುರಿಯಲು ಕಾರಣವೇನು..? |

Share

ಮುಂಗಾರು ಮಳೆ#MansoonRain ಉತ್ತರ ಭಾರತದಲ್ಲಿ #NorthIndia ಭಾರಿ ಮಟ್ಟದ ಹಾನಿಯನ್ನುಂಟು ಮಾಡುತ್ತಿದೆ. ನಮ್ಮ ದಕ್ಷಿಣ ಭಾರತದಲ್ಲಿ ಮಳೆಯ ಕೊರತೆಯಿಂದ ರೈತರು ಕಂಗಾಲಾದ್ರೆ, ಅಲ್ಲಿ ಪ್ರವಾಹದಿಂದ ಜನ ತತ್ತರಿಸಿ ಹೋಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ನೈಸರ್ಗಿಕ ವಿಕೋಪವು ವಿನಾಶವನ್ನು ಉಂಟುಮಾಡುತ್ತಿದೆ.ಮಳೆ ಮತ್ತು ಭೂಕುಸಿತದಿಂದ ಸಾಕಷ್ಟು ಮಂದಿ ಸಾವನ್ನಪ್ಪಿದ್ದಾರೆ. ಮಲೆನಾಡಿನ ಎರಡೂ ರಾಜ್ಯಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ.

ಹಿಮಾಚಲ ಪ್ರದೇಶದ ಸೋಲನ್‌ನಲ್ಲಿ ಮೇಘಸ್ಫೋಟ ಮತ್ತು ಶಿಮ್ಲಾದ ಶಿವ ಮಂದಿರ ಕುಸಿದು 48 ಗಂಟೆಗಳಲ್ಲಿ ಒಟ್ಟು 21 ಜನರು ಸಾವನ್ನಪ್ಪಿದ್ದಾರೆ. ಎರಡೂ ರಾಜ್ಯಗಳಲ್ಲಿ ಮಳೆಗಾಗಿ ಎರಡು ವ್ಯವಸ್ಥೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹವಾಮಾನ ಕಚೇರಿಯಲ್ಲಿ ತಿಳಿಸಲಾಗಿದೆ. ಮೊದಲ ವೆಸ್ಟರ್ನ್ ಡಿಸ್ಟರ್ಬನ್ಸ್ ಸಕ್ರಿಯವಾಗಿದೆ ಮತ್ತು ಎರಡನೇ ಮಾನ್ಸೂನ್ ಟ್ರಫ್ ಹಿಮಾಲಯದ ತಪ್ಪಲಿನಲ್ಲಿದೆ ಮತ್ತು ನೈಋತ್ಯ ಅರೇಬಿಯನ್ ಸಮುದ್ರದಿಂದ ಮಾನ್ಸೂನ್ ಮಾರುತಗಳು ಹಿಮಾಲಯದ ತಪ್ಪಲಿನಲ್ಲಿ ಡಿಕ್ಕಿ ಹೊಡೆಯುತ್ತಿವೆ.

ಈ ಎರಡೂ ಕಾರಣಗಳಿಂದ ಭಾರೀ ಮಳೆಯಾಗುತ್ತಿದೆ ಎಂಬುವುದು ಉಲ್ಲೇಖನೀಯ. ವೆಸ್ಟರ್ನ್ ಡಿಸ್ಟರ್ಬನ್ಸ್ ಒಂದು ಚಂಡಮಾರುತವಾಗಿದೆ, ಇದು ಮೆಡಿಟರೇನಿಯನ್ ಸಮುದ್ರದಲ್ಲಿ ಹುಟ್ಟುತ್ತದೆ ಮತ್ತು ಭಾರತೀಯ ಉಪಖಂಡದ ಪರ್ವತ ಪ್ರದೇಶಗಳಲ್ಲಿ ಭಾರೀ ಮಳೆಯನ್ನು ತರುತ್ತದೆ. ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಗೆ ಕಾರಣವಾಗಿರುವ ಮಾನ್ಸೂನ್ ಟ್ರಫ್ ದಕ್ಷಿಣಕ್ಕೆ ಚಲಿಸುತ್ತಿದೆ ಎಂದು ಹವಮಾನ ಇಲಾಖೆ ಹೇಳಿದೆ. ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರೀ ಮಳೆಯನ್ನು ಉಂಟುಮಾಡುವ ಮಾನ್ಸೂನ್, ಅದರ ಸಾಮಾನ್ಯ ಸ್ಥಾನದ ಉತ್ತರಕ್ಕೆ ಉದ್ದವಾದ ಕಡಿಮೆ ಒತ್ತಡದ ಪ್ರದೇಶವಾಗಿದ್ದು, ಕ್ರಮೇಣ ದಕ್ಷಿಣಕ್ಕೆ ಚಲಿಸಲು ಪ್ರಾರಂಭಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಂಗಳವಾರ ತಿಳಿಸಿದೆ.

ಮುಂದಿನ ಎರಡು ದಿನಗಳಲ್ಲಿ ಹಿಮಾಚಲ ಪ್ರದೇಶದಲ್ಲಿ ಮತ್ತು ಉತ್ತರಾಖಂಡ ಮತ್ತು ಈಶಾನ್ಯ ಭಾರತದಲ್ಲಿ ಮುಂದಿನ 4-5 ದಿನಗಳಲ್ಲಿ ಪ್ರತ್ಯೇಕ ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಐಎಂಡಿ ಮಂಗಳವಾರ ಟ್ವೀಟ್ ಮಾಡಿದೆ. ಇದರೊಂದಿಗೆ, ಆಗಸ್ಟ್ 15 ರ ಮೊದಲು ಮಧ್ಯ ಭಾರತ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯ ಚಟುವಟಿಕೆಯಲ್ಲಿ ಕ್ರಮೇಣ ಹೆಚ್ಚಳವಾಗಲಿದೆ ಎಂದು ಹೇಳಲಾಗಿದೆ. ಅದೇ ಸಮಯದಲ್ಲಿ, ಮುಂದಿನ 4-5 ದಿನಗಳಲ್ಲಿ ದೇಶದ ಉಳಿದ ಭಾಗಗಳಲ್ಲಿ ಲಘು ಮಳೆಯ ಚಟುವಟಿಕೆ ಮುಂದುವರಿಯುವ ಸಾಧ್ಯತೆಯಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

52 minutes ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

59 minutes ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

8 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

10 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

17 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

19 hours ago