Advertisement
ಸುದ್ದಿಗಳು

#HimachalRainfall | ಹಿಮಾಚಲ-ಉತ್ತರಾಖಂಡದಲ್ಲಿ ವಿನಾಶಕಾರಿ ಮಳೆ | ಹೀಗೆ ಮಳೆ ಸುರಿಯಲು ಕಾರಣವೇನು..? |

Share

ಮುಂಗಾರು ಮಳೆ#MansoonRain ಉತ್ತರ ಭಾರತದಲ್ಲಿ #NorthIndia ಭಾರಿ ಮಟ್ಟದ ಹಾನಿಯನ್ನುಂಟು ಮಾಡುತ್ತಿದೆ. ನಮ್ಮ ದಕ್ಷಿಣ ಭಾರತದಲ್ಲಿ ಮಳೆಯ ಕೊರತೆಯಿಂದ ರೈತರು ಕಂಗಾಲಾದ್ರೆ, ಅಲ್ಲಿ ಪ್ರವಾಹದಿಂದ ಜನ ತತ್ತರಿಸಿ ಹೋಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ನೈಸರ್ಗಿಕ ವಿಕೋಪವು ವಿನಾಶವನ್ನು ಉಂಟುಮಾಡುತ್ತಿದೆ.ಮಳೆ ಮತ್ತು ಭೂಕುಸಿತದಿಂದ ಸಾಕಷ್ಟು ಮಂದಿ ಸಾವನ್ನಪ್ಪಿದ್ದಾರೆ. ಮಲೆನಾಡಿನ ಎರಡೂ ರಾಜ್ಯಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ.

ಹಿಮಾಚಲ ಪ್ರದೇಶದ ಸೋಲನ್‌ನಲ್ಲಿ ಮೇಘಸ್ಫೋಟ ಮತ್ತು ಶಿಮ್ಲಾದ ಶಿವ ಮಂದಿರ ಕುಸಿದು 48 ಗಂಟೆಗಳಲ್ಲಿ ಒಟ್ಟು 21 ಜನರು ಸಾವನ್ನಪ್ಪಿದ್ದಾರೆ. ಎರಡೂ ರಾಜ್ಯಗಳಲ್ಲಿ ಮಳೆಗಾಗಿ ಎರಡು ವ್ಯವಸ್ಥೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹವಾಮಾನ ಕಚೇರಿಯಲ್ಲಿ ತಿಳಿಸಲಾಗಿದೆ. ಮೊದಲ ವೆಸ್ಟರ್ನ್ ಡಿಸ್ಟರ್ಬನ್ಸ್ ಸಕ್ರಿಯವಾಗಿದೆ ಮತ್ತು ಎರಡನೇ ಮಾನ್ಸೂನ್ ಟ್ರಫ್ ಹಿಮಾಲಯದ ತಪ್ಪಲಿನಲ್ಲಿದೆ ಮತ್ತು ನೈಋತ್ಯ ಅರೇಬಿಯನ್ ಸಮುದ್ರದಿಂದ ಮಾನ್ಸೂನ್ ಮಾರುತಗಳು ಹಿಮಾಲಯದ ತಪ್ಪಲಿನಲ್ಲಿ ಡಿಕ್ಕಿ ಹೊಡೆಯುತ್ತಿವೆ.

ಈ ಎರಡೂ ಕಾರಣಗಳಿಂದ ಭಾರೀ ಮಳೆಯಾಗುತ್ತಿದೆ ಎಂಬುವುದು ಉಲ್ಲೇಖನೀಯ. ವೆಸ್ಟರ್ನ್ ಡಿಸ್ಟರ್ಬನ್ಸ್ ಒಂದು ಚಂಡಮಾರುತವಾಗಿದೆ, ಇದು ಮೆಡಿಟರೇನಿಯನ್ ಸಮುದ್ರದಲ್ಲಿ ಹುಟ್ಟುತ್ತದೆ ಮತ್ತು ಭಾರತೀಯ ಉಪಖಂಡದ ಪರ್ವತ ಪ್ರದೇಶಗಳಲ್ಲಿ ಭಾರೀ ಮಳೆಯನ್ನು ತರುತ್ತದೆ. ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಗೆ ಕಾರಣವಾಗಿರುವ ಮಾನ್ಸೂನ್ ಟ್ರಫ್ ದಕ್ಷಿಣಕ್ಕೆ ಚಲಿಸುತ್ತಿದೆ ಎಂದು ಹವಮಾನ ಇಲಾಖೆ ಹೇಳಿದೆ. ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರೀ ಮಳೆಯನ್ನು ಉಂಟುಮಾಡುವ ಮಾನ್ಸೂನ್, ಅದರ ಸಾಮಾನ್ಯ ಸ್ಥಾನದ ಉತ್ತರಕ್ಕೆ ಉದ್ದವಾದ ಕಡಿಮೆ ಒತ್ತಡದ ಪ್ರದೇಶವಾಗಿದ್ದು, ಕ್ರಮೇಣ ದಕ್ಷಿಣಕ್ಕೆ ಚಲಿಸಲು ಪ್ರಾರಂಭಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಂಗಳವಾರ ತಿಳಿಸಿದೆ.

ಮುಂದಿನ ಎರಡು ದಿನಗಳಲ್ಲಿ ಹಿಮಾಚಲ ಪ್ರದೇಶದಲ್ಲಿ ಮತ್ತು ಉತ್ತರಾಖಂಡ ಮತ್ತು ಈಶಾನ್ಯ ಭಾರತದಲ್ಲಿ ಮುಂದಿನ 4-5 ದಿನಗಳಲ್ಲಿ ಪ್ರತ್ಯೇಕ ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಐಎಂಡಿ ಮಂಗಳವಾರ ಟ್ವೀಟ್ ಮಾಡಿದೆ. ಇದರೊಂದಿಗೆ, ಆಗಸ್ಟ್ 15 ರ ಮೊದಲು ಮಧ್ಯ ಭಾರತ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯ ಚಟುವಟಿಕೆಯಲ್ಲಿ ಕ್ರಮೇಣ ಹೆಚ್ಚಳವಾಗಲಿದೆ ಎಂದು ಹೇಳಲಾಗಿದೆ. ಅದೇ ಸಮಯದಲ್ಲಿ, ಮುಂದಿನ 4-5 ದಿನಗಳಲ್ಲಿ ದೇಶದ ಉಳಿದ ಭಾಗಗಳಲ್ಲಿ ಲಘು ಮಳೆಯ ಚಟುವಟಿಕೆ ಮುಂದುವರಿಯುವ ಸಾಧ್ಯತೆಯಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

11 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

20 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

20 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago