ಆಹಾರದಲ್ಲಿ ಹಾನಿಕಾರಕ ಅಂಶಗಳ ಪತ್ತೆ ಹಿನ್ನೆಲೆ | ಗೋಬಿ, ಕಬಾಬ್, ಪಾನಿಪುರಿ, ಟೀ ಟೆಸ್ಟ್‌ ಆಯ್ತು | ಬೆಂಗಳೂರಿನ 300ಕ್ಕೂ ಹೆಚ್ಚು ಕಡೆ ತರಕಾರಿ ಗುಣಮಟ್ಟ ಪರೀಕ್ಷೆ |

July 23, 2024
1:15 PM
ಯಾವುದೇ ಪದಾರ್ಥ ತಿಂದರೂ ಈಗ ವಿಷಕಾರಕ ಅಂಶಗಳು(Poision) ಅದರಲ್ಲಿ ಪತ್ತೆಯಾಗುತ್ತಿದೆ. ಅದರಲ್ಲೂ ಹೊಟೇಲ್‌(Hotel), ಬೀದಿಬದಿ(Street), ಸ್ಟಾಲ್‌ ಗಳಲ್ಲಿ(Stall) ಆಹಾರ(Food) ತಿಂದರಂತೂ ನಮ್ಮ ಹೊಟ್ಟೆಯೊಳಗೆ ವಿಷ ಸೇರುವುದು ಖಚಿತ. ಅದೇ ರೀತಿ ನಾವು ತಿನ್ನುವ ಹಣ್ಣು(Fruits), ತರಕಾರಿಗಳು(Vegetable) ಇದಕ್ಕೆ ಹೊರತಾಗಿಲ್ಲ. ಗೋಬಿ(Gobi), ಕಬಾಬ್(Kabab), ಪಾನಿಪುರಿಯಲ್ಲಿ(Panipuri), ಚಹಾ(Tea) ಹಾನಿಕಾರಕ ಅಂಶಗಳ ಪತ್ತೆ ಬಳಿಕ ಈಗ ತರಕಾರಿ ಸರದಿ ಎದುರಾಗಿದೆ. ಬೆಂಗಳೂರಿನ (Bengaluru) 300ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಆಹಾರ ಇಲಾಖೆ (Food Safety Department) ವಿವಿಧ ತರಕಾರಿಗಳ ಕ್ವಾಲಿಟಿ ಟೆಸ್ಟ್ (Quality Test) ಮಾಡುತ್ತಿದೆ. ತರಕಾರಿಗಳಲ್ಲಿನ ಹಾನಿಕಾರಕ ಅಂಶಗಳನ್ನು ಪತ್ತೆಹಚ್ಚಲು ಆಹಾರ ಸುರಕ್ಷತಾ ಇಲಾಖೆ ಮುಂದಾಗಿದೆ.

ಕೆಲ ತಿಂಗಳ ಹಿಂದೆ ಗೋಬಿ, ಕಬಾಬ್‌ಗೆ ಬಳಸುವ ಕಲರ್‌ಗಳಲ್ಲಿ ಕ್ಯಾನ್ಸರ್‌ಕಾರಕ ಅಂಶಗಳು ಇವೆ ಎಂದು ಆಹಾರ ಮತ್ತು ಸುರಕ್ಷತಾ ಇಲಾಖೆ ಕಲರ್ ಬಳಕೆಗೆ ನಿಷೇಧ ಹೇರಿ ಆದೇಶ ಹೊರಡಿಸಿತ್ತು. ಇತ್ತೀಚಿಗೆ ಪಾನಿಪುರಿಯಲ್ಲೂ ಹಾನಿಕಾರಕ ಅಂಶ ಇರೋದನ್ನು ಆಹಾರ ಇಲಾಖೆ ಅಧಿಕಾರಿಗಳು ಪತ್ತೆ ಮಾಡಿದ್ದರು. ಇದೀಗ ತರಕಾರಿಗಳ ಗುಣಮಟ್ಟ ಪರಿಶೀಲಿಸಲು ಆಹಾರ ಸುರಕ್ಷತಾ ಇಲಾಖೆ ಮುಂದಾಗಿದೆ. ತರಕಾರಿಗಳನ್ನು ಟೆಸ್ಟ್ ಮಾಡುವ ಉದ್ದೇಶದಿಂದ ಬೆಂಗಳೂರಿನ 300ಕ್ಕೂ ಹೆಚ್ಚು ಪ್ರದೇಶಗಳಿಂದ ತರಕಾರಿಗಳನ್ನು ಸಂಗ್ರಹ ಮಾಡಿದ್ದಾರೆ.

ತರಕಾರಿಯಲ್ಲಿರುವ ಹಾನಿಕಾರಕ ಅಂಶಗಳು:

  • ತರಕಾರಿ ಗಿಡಗಳಿಗೆ ಔಷಧಿ ಸಿಂಪಡಣೆ
  • ಔಷಧಿ ಸಿಂಪಡಣೆ ಮಾಡುವುದರಿಂದ ಸುರಕ್ಷತೆ ಇಲ್ಲ
  • ಕಬ್ಬಿಣದ ಅಂಶಗಳು ಪತ್ತೆ
  • ಔಷಧಿ ಸಿಂಪಡಣೆ ಮಾಡಿರುವ ತರಕಾರಿ ತಿಂದರೆ ಆರೋಗ್ಯದ ಮೇಲೆ ಪರಿಣಾಮ
  • ಸುರಕ್ಷತೆ ಇಲ್ಲದೇ ಇರುವ ಆಹಾರ ಸ್ಲೋಪಾಯಿಸನ್‌ಗೆ ಸಮ

ಒಟ್ಟಾರೆ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ರಾಜ್ಯ ಆಹಾರ ಮತ್ತು ಸುರಕ್ಷತಾ ಇಲಾಖೆ ಕ್ವಾಲಿಟಿ ಚೆಕ್ ಮಾಡುತ್ತಿದ್ದು ಯಾವೆಲ್ಲಾ ಹಾನಿಕಾರಕ ಅಂಶ ಇವೆ ಎಂದು ಇನ್ನಷ್ಟೇ ಬೆಳಕಿಗೆ ಬರಬೇಕಿದೆ. ಒಂದು ವೇಳೆ ಹಾನಿಕಾರಕ ಅಂಶಗಳು ಪತ್ತೆಯಾದರೆ ಯಾವ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂಬುದು ಸದ್ಯದ ಕುತೂಹಲವಾಗಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?
August 22, 2026
10:25 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ
August 22, 2026
2:07 PM
by: ಸಾಯಿಶೇಖರ್ ಕರಿಕಳ
ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ
August 22, 2026
6:47 AM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ
August 21, 2026
7:49 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror