MIRROR FOCUS

ಆಹಾರದಲ್ಲಿ ಹಾನಿಕಾರಕ ಅಂಶಗಳ ಪತ್ತೆ ಹಿನ್ನೆಲೆ | ಗೋಬಿ, ಕಬಾಬ್, ಪಾನಿಪುರಿ, ಟೀ ಟೆಸ್ಟ್‌ ಆಯ್ತು | ಬೆಂಗಳೂರಿನ 300ಕ್ಕೂ ಹೆಚ್ಚು ಕಡೆ ತರಕಾರಿ ಗುಣಮಟ್ಟ ಪರೀಕ್ಷೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಯಾವುದೇ ಪದಾರ್ಥ ತಿಂದರೂ ಈಗ ವಿಷಕಾರಕ ಅಂಶಗಳು(Poision) ಅದರಲ್ಲಿ ಪತ್ತೆಯಾಗುತ್ತಿದೆ. ಅದರಲ್ಲೂ ಹೊಟೇಲ್‌(Hotel), ಬೀದಿಬದಿ(Street), ಸ್ಟಾಲ್‌ ಗಳಲ್ಲಿ(Stall) ಆಹಾರ(Food) ತಿಂದರಂತೂ ನಮ್ಮ ಹೊಟ್ಟೆಯೊಳಗೆ ವಿಷ ಸೇರುವುದು ಖಚಿತ. ಅದೇ ರೀತಿ ನಾವು ತಿನ್ನುವ ಹಣ್ಣು(Fruits), ತರಕಾರಿಗಳು(Vegetable) ಇದಕ್ಕೆ ಹೊರತಾಗಿಲ್ಲ. ಗೋಬಿ(Gobi), ಕಬಾಬ್(Kabab), ಪಾನಿಪುರಿಯಲ್ಲಿ(Panipuri), ಚಹಾ(Tea) ಹಾನಿಕಾರಕ ಅಂಶಗಳ ಪತ್ತೆ ಬಳಿಕ ಈಗ ತರಕಾರಿ ಸರದಿ ಎದುರಾಗಿದೆ. ಬೆಂಗಳೂರಿನ (Bengaluru) 300ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಆಹಾರ ಇಲಾಖೆ (Food Safety Department) ವಿವಿಧ ತರಕಾರಿಗಳ ಕ್ವಾಲಿಟಿ ಟೆಸ್ಟ್ (Quality Test) ಮಾಡುತ್ತಿದೆ. ತರಕಾರಿಗಳಲ್ಲಿನ ಹಾನಿಕಾರಕ ಅಂಶಗಳನ್ನು ಪತ್ತೆಹಚ್ಚಲು ಆಹಾರ ಸುರಕ್ಷತಾ ಇಲಾಖೆ ಮುಂದಾಗಿದೆ.
Advertisement

ಕೆಲ ತಿಂಗಳ ಹಿಂದೆ ಗೋಬಿ, ಕಬಾಬ್‌ಗೆ ಬಳಸುವ ಕಲರ್‌ಗಳಲ್ಲಿ ಕ್ಯಾನ್ಸರ್‌ಕಾರಕ ಅಂಶಗಳು ಇವೆ ಎಂದು ಆಹಾರ ಮತ್ತು ಸುರಕ್ಷತಾ ಇಲಾಖೆ ಕಲರ್ ಬಳಕೆಗೆ ನಿಷೇಧ ಹೇರಿ ಆದೇಶ ಹೊರಡಿಸಿತ್ತು. ಇತ್ತೀಚಿಗೆ ಪಾನಿಪುರಿಯಲ್ಲೂ ಹಾನಿಕಾರಕ ಅಂಶ ಇರೋದನ್ನು ಆಹಾರ ಇಲಾಖೆ ಅಧಿಕಾರಿಗಳು ಪತ್ತೆ ಮಾಡಿದ್ದರು. ಇದೀಗ ತರಕಾರಿಗಳ ಗುಣಮಟ್ಟ ಪರಿಶೀಲಿಸಲು ಆಹಾರ ಸುರಕ್ಷತಾ ಇಲಾಖೆ ಮುಂದಾಗಿದೆ. ತರಕಾರಿಗಳನ್ನು ಟೆಸ್ಟ್ ಮಾಡುವ ಉದ್ದೇಶದಿಂದ ಬೆಂಗಳೂರಿನ 300ಕ್ಕೂ ಹೆಚ್ಚು ಪ್ರದೇಶಗಳಿಂದ ತರಕಾರಿಗಳನ್ನು ಸಂಗ್ರಹ ಮಾಡಿದ್ದಾರೆ.

ತರಕಾರಿಯಲ್ಲಿರುವ ಹಾನಿಕಾರಕ ಅಂಶಗಳು:

  • ತರಕಾರಿ ಗಿಡಗಳಿಗೆ ಔಷಧಿ ಸಿಂಪಡಣೆ
  • ಔಷಧಿ ಸಿಂಪಡಣೆ ಮಾಡುವುದರಿಂದ ಸುರಕ್ಷತೆ ಇಲ್ಲ
  • ಕಬ್ಬಿಣದ ಅಂಶಗಳು ಪತ್ತೆ
  • ಔಷಧಿ ಸಿಂಪಡಣೆ ಮಾಡಿರುವ ತರಕಾರಿ ತಿಂದರೆ ಆರೋಗ್ಯದ ಮೇಲೆ ಪರಿಣಾಮ
  • ಸುರಕ್ಷತೆ ಇಲ್ಲದೇ ಇರುವ ಆಹಾರ ಸ್ಲೋಪಾಯಿಸನ್‌ಗೆ ಸಮ

ಒಟ್ಟಾರೆ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ರಾಜ್ಯ ಆಹಾರ ಮತ್ತು ಸುರಕ್ಷತಾ ಇಲಾಖೆ ಕ್ವಾಲಿಟಿ ಚೆಕ್ ಮಾಡುತ್ತಿದ್ದು ಯಾವೆಲ್ಲಾ ಹಾನಿಕಾರಕ ಅಂಶ ಇವೆ ಎಂದು ಇನ್ನಷ್ಟೇ ಬೆಳಕಿಗೆ ಬರಬೇಕಿದೆ. ಒಂದು ವೇಳೆ ಹಾನಿಕಾರಕ ಅಂಶಗಳು ಪತ್ತೆಯಾದರೆ ಯಾವ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂಬುದು ಸದ್ಯದ ಕುತೂಹಲವಾಗಿದೆ.

Advertisement

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌

ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…

2 hours ago

ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …

4 hours ago

15 ದಿನಗಳಿಗೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ – ಜಿ. ಪಂ ಸಿಇಒ ಸೂಚನೆ

ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ  ತಪಾಸಣೆ…

5 hours ago

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

11 hours ago

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

18 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

18 hours ago