Advertisement
MIRROR FOCUS

ಆಹಾರದಲ್ಲಿ ಹಾನಿಕಾರಕ ಅಂಶಗಳ ಪತ್ತೆ ಹಿನ್ನೆಲೆ | ಗೋಬಿ, ಕಬಾಬ್, ಪಾನಿಪುರಿ, ಟೀ ಟೆಸ್ಟ್‌ ಆಯ್ತು | ಬೆಂಗಳೂರಿನ 300ಕ್ಕೂ ಹೆಚ್ಚು ಕಡೆ ತರಕಾರಿ ಗುಣಮಟ್ಟ ಪರೀಕ್ಷೆ |

Share
ಯಾವುದೇ ಪದಾರ್ಥ ತಿಂದರೂ ಈಗ ವಿಷಕಾರಕ ಅಂಶಗಳು(Poision) ಅದರಲ್ಲಿ ಪತ್ತೆಯಾಗುತ್ತಿದೆ. ಅದರಲ್ಲೂ ಹೊಟೇಲ್‌(Hotel), ಬೀದಿಬದಿ(Street), ಸ್ಟಾಲ್‌ ಗಳಲ್ಲಿ(Stall) ಆಹಾರ(Food) ತಿಂದರಂತೂ ನಮ್ಮ ಹೊಟ್ಟೆಯೊಳಗೆ ವಿಷ ಸೇರುವುದು ಖಚಿತ. ಅದೇ ರೀತಿ ನಾವು ತಿನ್ನುವ ಹಣ್ಣು(Fruits), ತರಕಾರಿಗಳು(Vegetable) ಇದಕ್ಕೆ ಹೊರತಾಗಿಲ್ಲ. ಗೋಬಿ(Gobi), ಕಬಾಬ್(Kabab), ಪಾನಿಪುರಿಯಲ್ಲಿ(Panipuri), ಚಹಾ(Tea) ಹಾನಿಕಾರಕ ಅಂಶಗಳ ಪತ್ತೆ ಬಳಿಕ ಈಗ ತರಕಾರಿ ಸರದಿ ಎದುರಾಗಿದೆ. ಬೆಂಗಳೂರಿನ (Bengaluru) 300ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಆಹಾರ ಇಲಾಖೆ (Food Safety Department) ವಿವಿಧ ತರಕಾರಿಗಳ ಕ್ವಾಲಿಟಿ ಟೆಸ್ಟ್ (Quality Test) ಮಾಡುತ್ತಿದೆ. ತರಕಾರಿಗಳಲ್ಲಿನ ಹಾನಿಕಾರಕ ಅಂಶಗಳನ್ನು ಪತ್ತೆಹಚ್ಚಲು ಆಹಾರ ಸುರಕ್ಷತಾ ಇಲಾಖೆ ಮುಂದಾಗಿದೆ.

ಕೆಲ ತಿಂಗಳ ಹಿಂದೆ ಗೋಬಿ, ಕಬಾಬ್‌ಗೆ ಬಳಸುವ ಕಲರ್‌ಗಳಲ್ಲಿ ಕ್ಯಾನ್ಸರ್‌ಕಾರಕ ಅಂಶಗಳು ಇವೆ ಎಂದು ಆಹಾರ ಮತ್ತು ಸುರಕ್ಷತಾ ಇಲಾಖೆ ಕಲರ್ ಬಳಕೆಗೆ ನಿಷೇಧ ಹೇರಿ ಆದೇಶ ಹೊರಡಿಸಿತ್ತು. ಇತ್ತೀಚಿಗೆ ಪಾನಿಪುರಿಯಲ್ಲೂ ಹಾನಿಕಾರಕ ಅಂಶ ಇರೋದನ್ನು ಆಹಾರ ಇಲಾಖೆ ಅಧಿಕಾರಿಗಳು ಪತ್ತೆ ಮಾಡಿದ್ದರು. ಇದೀಗ ತರಕಾರಿಗಳ ಗುಣಮಟ್ಟ ಪರಿಶೀಲಿಸಲು ಆಹಾರ ಸುರಕ್ಷತಾ ಇಲಾಖೆ ಮುಂದಾಗಿದೆ. ತರಕಾರಿಗಳನ್ನು ಟೆಸ್ಟ್ ಮಾಡುವ ಉದ್ದೇಶದಿಂದ ಬೆಂಗಳೂರಿನ 300ಕ್ಕೂ ಹೆಚ್ಚು ಪ್ರದೇಶಗಳಿಂದ ತರಕಾರಿಗಳನ್ನು ಸಂಗ್ರಹ ಮಾಡಿದ್ದಾರೆ.

ತರಕಾರಿಯಲ್ಲಿರುವ ಹಾನಿಕಾರಕ ಅಂಶಗಳು:

  • ತರಕಾರಿ ಗಿಡಗಳಿಗೆ ಔಷಧಿ ಸಿಂಪಡಣೆ
  • ಔಷಧಿ ಸಿಂಪಡಣೆ ಮಾಡುವುದರಿಂದ ಸುರಕ್ಷತೆ ಇಲ್ಲ
  • ಕಬ್ಬಿಣದ ಅಂಶಗಳು ಪತ್ತೆ
  • ಔಷಧಿ ಸಿಂಪಡಣೆ ಮಾಡಿರುವ ತರಕಾರಿ ತಿಂದರೆ ಆರೋಗ್ಯದ ಮೇಲೆ ಪರಿಣಾಮ
  • ಸುರಕ್ಷತೆ ಇಲ್ಲದೇ ಇರುವ ಆಹಾರ ಸ್ಲೋಪಾಯಿಸನ್‌ಗೆ ಸಮ

ಒಟ್ಟಾರೆ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ರಾಜ್ಯ ಆಹಾರ ಮತ್ತು ಸುರಕ್ಷತಾ ಇಲಾಖೆ ಕ್ವಾಲಿಟಿ ಚೆಕ್ ಮಾಡುತ್ತಿದ್ದು ಯಾವೆಲ್ಲಾ ಹಾನಿಕಾರಕ ಅಂಶ ಇವೆ ಎಂದು ಇನ್ನಷ್ಟೇ ಬೆಳಕಿಗೆ ಬರಬೇಕಿದೆ. ಒಂದು ವೇಳೆ ಹಾನಿಕಾರಕ ಅಂಶಗಳು ಪತ್ತೆಯಾದರೆ ಯಾವ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂಬುದು ಸದ್ಯದ ಕುತೂಹಲವಾಗಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

59 minutes ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

10 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

10 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

12 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

15 hours ago