Advertisement
MIRROR FOCUS

ಆಹಾರದಲ್ಲಿ ಹಾನಿಕಾರಕ ಅಂಶಗಳ ಪತ್ತೆ ಹಿನ್ನೆಲೆ | ಗೋಬಿ, ಕಬಾಬ್, ಪಾನಿಪುರಿ, ಟೀ ಟೆಸ್ಟ್‌ ಆಯ್ತು | ಬೆಂಗಳೂರಿನ 300ಕ್ಕೂ ಹೆಚ್ಚು ಕಡೆ ತರಕಾರಿ ಗುಣಮಟ್ಟ ಪರೀಕ್ಷೆ |

Share
ಯಾವುದೇ ಪದಾರ್ಥ ತಿಂದರೂ ಈಗ ವಿಷಕಾರಕ ಅಂಶಗಳು(Poision) ಅದರಲ್ಲಿ ಪತ್ತೆಯಾಗುತ್ತಿದೆ. ಅದರಲ್ಲೂ ಹೊಟೇಲ್‌(Hotel), ಬೀದಿಬದಿ(Street), ಸ್ಟಾಲ್‌ ಗಳಲ್ಲಿ(Stall) ಆಹಾರ(Food) ತಿಂದರಂತೂ ನಮ್ಮ ಹೊಟ್ಟೆಯೊಳಗೆ ವಿಷ ಸೇರುವುದು ಖಚಿತ. ಅದೇ ರೀತಿ ನಾವು ತಿನ್ನುವ ಹಣ್ಣು(Fruits), ತರಕಾರಿಗಳು(Vegetable) ಇದಕ್ಕೆ ಹೊರತಾಗಿಲ್ಲ. ಗೋಬಿ(Gobi), ಕಬಾಬ್(Kabab), ಪಾನಿಪುರಿಯಲ್ಲಿ(Panipuri), ಚಹಾ(Tea) ಹಾನಿಕಾರಕ ಅಂಶಗಳ ಪತ್ತೆ ಬಳಿಕ ಈಗ ತರಕಾರಿ ಸರದಿ ಎದುರಾಗಿದೆ. ಬೆಂಗಳೂರಿನ (Bengaluru) 300ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಆಹಾರ ಇಲಾಖೆ (Food Safety Department) ವಿವಿಧ ತರಕಾರಿಗಳ ಕ್ವಾಲಿಟಿ ಟೆಸ್ಟ್ (Quality Test) ಮಾಡುತ್ತಿದೆ. ತರಕಾರಿಗಳಲ್ಲಿನ ಹಾನಿಕಾರಕ ಅಂಶಗಳನ್ನು ಪತ್ತೆಹಚ್ಚಲು ಆಹಾರ ಸುರಕ್ಷತಾ ಇಲಾಖೆ ಮುಂದಾಗಿದೆ.

ಕೆಲ ತಿಂಗಳ ಹಿಂದೆ ಗೋಬಿ, ಕಬಾಬ್‌ಗೆ ಬಳಸುವ ಕಲರ್‌ಗಳಲ್ಲಿ ಕ್ಯಾನ್ಸರ್‌ಕಾರಕ ಅಂಶಗಳು ಇವೆ ಎಂದು ಆಹಾರ ಮತ್ತು ಸುರಕ್ಷತಾ ಇಲಾಖೆ ಕಲರ್ ಬಳಕೆಗೆ ನಿಷೇಧ ಹೇರಿ ಆದೇಶ ಹೊರಡಿಸಿತ್ತು. ಇತ್ತೀಚಿಗೆ ಪಾನಿಪುರಿಯಲ್ಲೂ ಹಾನಿಕಾರಕ ಅಂಶ ಇರೋದನ್ನು ಆಹಾರ ಇಲಾಖೆ ಅಧಿಕಾರಿಗಳು ಪತ್ತೆ ಮಾಡಿದ್ದರು. ಇದೀಗ ತರಕಾರಿಗಳ ಗುಣಮಟ್ಟ ಪರಿಶೀಲಿಸಲು ಆಹಾರ ಸುರಕ್ಷತಾ ಇಲಾಖೆ ಮುಂದಾಗಿದೆ. ತರಕಾರಿಗಳನ್ನು ಟೆಸ್ಟ್ ಮಾಡುವ ಉದ್ದೇಶದಿಂದ ಬೆಂಗಳೂರಿನ 300ಕ್ಕೂ ಹೆಚ್ಚು ಪ್ರದೇಶಗಳಿಂದ ತರಕಾರಿಗಳನ್ನು ಸಂಗ್ರಹ ಮಾಡಿದ್ದಾರೆ.

ತರಕಾರಿಯಲ್ಲಿರುವ ಹಾನಿಕಾರಕ ಅಂಶಗಳು:

  • ತರಕಾರಿ ಗಿಡಗಳಿಗೆ ಔಷಧಿ ಸಿಂಪಡಣೆ
  • ಔಷಧಿ ಸಿಂಪಡಣೆ ಮಾಡುವುದರಿಂದ ಸುರಕ್ಷತೆ ಇಲ್ಲ
  • ಕಬ್ಬಿಣದ ಅಂಶಗಳು ಪತ್ತೆ
  • ಔಷಧಿ ಸಿಂಪಡಣೆ ಮಾಡಿರುವ ತರಕಾರಿ ತಿಂದರೆ ಆರೋಗ್ಯದ ಮೇಲೆ ಪರಿಣಾಮ
  • ಸುರಕ್ಷತೆ ಇಲ್ಲದೇ ಇರುವ ಆಹಾರ ಸ್ಲೋಪಾಯಿಸನ್‌ಗೆ ಸಮ

ಒಟ್ಟಾರೆ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ರಾಜ್ಯ ಆಹಾರ ಮತ್ತು ಸುರಕ್ಷತಾ ಇಲಾಖೆ ಕ್ವಾಲಿಟಿ ಚೆಕ್ ಮಾಡುತ್ತಿದ್ದು ಯಾವೆಲ್ಲಾ ಹಾನಿಕಾರಕ ಅಂಶ ಇವೆ ಎಂದು ಇನ್ನಷ್ಟೇ ಬೆಳಕಿಗೆ ಬರಬೇಕಿದೆ. ಒಂದು ವೇಳೆ ಹಾನಿಕಾರಕ ಅಂಶಗಳು ಪತ್ತೆಯಾದರೆ ಯಾವ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂಬುದು ಸದ್ಯದ ಕುತೂಹಲವಾಗಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಧ್ಯಪ್ರಾಚ್ಯ ಸಂಘರ್ಷ ಪರಿಣಾಮ – ಗೋಮಯ ಗೊಬ್ಬರದತ್ತ ಭಾರತದ ರೈತರು – ರಾಸಾಯನಿಕ ಗೊಬ್ಬರ ಕೊರತೆ ಭೀತಿ..!

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಜಾಗತಿಕ ಗೊಬ್ಬರ ಸರಬರಾಜು ವ್ಯವಸ್ಥೆಯಲ್ಲಿ ಅನಿಶ್ಚಿತತೆ ಉಂಟಾಗಿದ್ದು, ಭಾರತದಲ್ಲಿ…

5 hours ago

ಕೇರಳದಲ್ಲಿ ಕೊಬ್ಬರಿ ಬೆಲೆ MSP ಗಿಂತಲೂ ಕಡಿಮೆ – ₹130 ಕನಿಷ್ಠ ಬೆಂಬಲ ಬೆಲೆಗೆ ರೈತರ ಆಗ್ರಹ

ಕೇರಳದಲ್ಲಿ ಕೊಬ್ಬರಿ ದರ MSP ಗಿಂತ ಕೆಳಗೆ ಇಳಿದಿದ್ದು, ರೈತರು ಪ್ರತಿ ಕೆ.ಜಿಗೆ…

6 hours ago

ಎಲ್‌ ನಿನೋ ಈಗ ಮತ್ತಷ್ಟು ನಿಗೂಢ…! ಹವಾಮಾನ ಬದಲಾವಣೆ ಮಳೆ ಮುನ್ಸೂಚನೆಗಳನ್ನೇ ಗೊಂದಲಗೊಳಿಸುತ್ತಿದೆಯೇ..?

ಹವಾಮಾನ ಬದಲಾವಣೆಯಿಂದ ಎಲ್‌ ನಿನೋ ಮತ್ತು ಲಾ ನಿನಾ ಘಟನೆಗಳ ವರ್ತನೆ ಬದಲಾಗುತ್ತಿದ್ದು,…

9 hours ago

ಪ್ರತಿ ಜಿಲ್ಲೆಯಲ್ಲಿ ಒಂದು ಗೋಆಧಾರಿತ ಉದ್ಯಮ – ಉತ್ತರ ಪ್ರದೇಶದ ಹೊಸ ಮಾದರಿ ದೇಶದ ಗಮನ ಸೆಳೆಯುತ್ತಿದೆ

ಉತ್ತರ ಪ್ರದೇಶ ಸರ್ಕಾರ ಪ್ರತಿ ಜಿಲ್ಲೆಯಲ್ಲಿ ಒಂದು ಪ್ರಮುಖ ಗೋಆಧಾರಿತ ಉದ್ಯಮ ಅಭಿವೃದ್ಧಿಪಡಿಸಲು…

9 hours ago

ಅತಿವೃಷ್ಟಿ, ಬರ, ಹೀಟ್‌ ವೇವ್‌ಗಳಿಗೆ ಯಾರು ಕಾರಣ? ಐಐಟಿ ದೆಹಲಿ ಅಧ್ಯಯನದಿಂದ ಕುತೂಹಲಕಾರಿ ಮಾಹಿತಿ!

ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…

1 day ago

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

2 days ago