ಪಡಿತರ ಅಕ್ಕಿ ಒಂದಷ್ಟು ಬಡ ಕುಟುಂಬಗಳ ಹೊಟ್ಟೆ ತುಂಬಿಸೋದು ಹೌದು. ಆದ್ರೆ ಪಡಿತರ ಪಾಲಿಗೆ ಸಿಗುವ ಅಕ್ಕಿಯ ಗುಣಮಟ್ಟದ ಬಗ್ಗೆ ಒಂದಲ್ಲ ಒಂದು ದೂರುಗಳು ಬರುತ್ತಲೇ ಇರುತ್ತವೆ. ಇದೀಗ ಸರ್ಕಾರದ ಅನ್ನಭಾಗ್ಯ ಯೋಜನೆಯಡಿಯಲ್ಲಿ ನೀಡುವ ಅಕ್ಕಿಯಲ್ಲಿ ಯೂರಿಯಾ ಪತ್ತೆಯಾಗಿರುವ ಘಟನೆ ತಾಲ್ಲೂಕಿನ ಅಮೃತೂರಿನ ರೇಣುಕಾ ನ್ಯಾಯಬೆಲೆ ಅಂಗಡಿಯಲ್ಲಿ ಬೆಳಕಿಗೆ ಬಂದಿದೆ.
ಪಡಿತರದಾರರು ಅಕ್ಕಿಯನ್ನು ಮನೆಗೆ ತೆಗೆದುಕೊಂಡು ಹೋಗಿ ನಂತರ ಅನ್ನ ಮಾಡಲು ಅಕ್ಕಿ ತೊಳೆಯಲು ಹೋದಾಗ ಯೂರಿಯಾ ಇರುವುದು ಪತ್ತೆಯಾಗಿದೆ. ಪಡಿತರದಾರರು ತಕ್ಷಣ ಈ ವಿಚಾರವನ್ನು ನ್ಯಾಯ ಬೆಲೆ ಅಂಗಡಿ ಮಾಲೀಕರ ಗಮನಕ್ಕೆ ತಂದಿದ್ದಾರೆ.
ಎಚ್ಚೆತ್ತುಕೊಂಡ ನ್ಯಾಯ ಬೆಲೆ ಅಂಗಡಿ ಮಾಲೀಕರು ಅಕ್ಕಿ ವಿತರಣೆಯನ್ನು ಸ್ಥಗಿತಗೊಸಿ ಕುಣಿಗಲ್ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.
ಗ್ರಾಮೀಣ ಮತ್ತು ಸಣ್ಣ ನಗರ ಪ್ರದೇಶಗಳಲ್ಲಿ ಹಲಸಿನ ಮೌಲ್ಯ ವರ್ಧನೆ ಘಟಕಗಳು ಕಾರ್ಯನಿರ್ವಹಿಸುತ್ತಿವೆ.…
ರಾಸಾಯನಿಕಗಳ ಬಳಕೆಯಿಂದ ಮಣ್ಣಿನ ಫಲವತ್ತತೆ ಕುಗ್ಗುತ್ತಿದ್ದು, ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ನೈಸರ್ಗಿಕ…
ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ಅಡಿಯಲ್ಲಿ 2 ಸಾವಿರದ 170 ತಂಡಗಳನ್ನು ರಚಿಸಲಾಗಿತ್ತು.…
ಕಳೆದ ಮಾರ್ಚ್ 21 ರಿಂದ 28 ರವರೆಗೆ ನಡೆದ ಜಲ ಸಂರಕ್ಷಣೆ ಅಭಿಯಾನ…
ವಿದ್ಯುತ್ ಉತ್ಪಾದನೆಯಲ್ಲಿ ದೇಶದಲ್ಲಿ ರಾಜ್ಯದ ಕೊಡುಗೆ ಅಪಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.…
ಮಲೆನಾಡು ಕರಾವಳಿಯ ಪ್ರದೇಶದ ಸರ್ಕಾರಿ ಶಾಲೆಗೆ ಹೋಗುವ ಅನೇಕ ಮಕ್ಕಳು ಹಳ್ಳ-ಹೊಳೆ ದಾಟಬೇಕು,…