ದೇವಚಳ್ಳ ಗ್ರಾಮದ ಹೊನ್ನೆಮೂಲೆ ಮಾವಿನಗೊಡ್ಲು ರಸ್ತೆಯಲ್ಲಿ ನೂತನ ಕಾಂಕ್ರೀಟೀಕರಣಗೊಂಡ ಕಾಮಗಾರಿಯು ಉದ್ಘಾಟನೆಗೊಂಡಿತು. ಗ್ರಾ ಪಂ ಸದಸ್ಯ ಶೈಲೇಶ್ ಅಂಬೆಕಲ್ಲು ಮತ್ತು ಊರಿನವರ ಉಪಸ್ಥಿತಿಯಲ್ಲಿ ಬಳಕೆಗೆ ಅನುವು ಮಾಡಲಾಯಿತು.
ಸ್ಥಳೀಯರಾದ ಹೊನ್ನಪ್ಪ ಗೌಡ ಹೊನ್ನೆಮೂಲೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕೆ ಚಾಲನೆ ನೀಡಿದರು, ಶೇಷಮ್ಮ ಹೊನ್ನೆಮೂಲೆ ರಿಬ್ಬನ್ ತುಂಡರಿಸಿದರು. ಲಿಂಗಪ್ಪ ಗೌಡ ಮಾವಿನಗೊಡ್ಲು ತೆಂಗಿನಕಾಯಿ ಒಡೆಯವ ಮೂಲಕ ರಸ್ತೆಯನ್ನು ಸಾರ್ವಜನಿಕ ಸೇವೆಗೆ ಅನುವು ಮಾಡಿಕೊಡಲಾಯಿತು.
ಗ್ರಾ ಪಂ ಸದಸ್ಯ ಶೈಲೇಶ್ ಅಂಬೆಕಲ್ಲು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಲೋಹಿತ್ ಮಾವಿನಗೊಡ್ಲು ಸ್ವಾಗತಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಊರಿನ ಹಿರಿಯರಾದ ನಾರಾಯಣ ಗೌಡ ಮಾವಿನಗೊಡ್ಲು, ಬಾಲಕೃಷ್ಣ ಹೊನ್ನೆಮೂಲೆ, ಗಂಗಾಧರ ಮಾವಿನಗೊಡ್ಲು, ರಾಧಾಕೃಷ್ಣ ಮಾವಿನಗೊಡ್ಲು, ಉಮೇಶ್ ಹೊನ್ನೆಮೂಲೆ, ಹಾಗೂ ಹೊನ್ನೆಮೂಲೆ ಮಾವಿನಗೊಡ್ಲು ಪರಿಸರದ ರಸ್ತೆಯ ಫಲಾನುಭವಿಗಳೆಲ್ಲರೂ ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…