Advertisement
ಸುದ್ದಿಗಳು

ಗ್ರಾಮೀಣ ರಸ್ತೆ ಅವ್ಯವಸ್ಥೆ | ರಸ್ತೆ ದುರಸ್ತಿಗೆ ಆಗ್ರಹ | ಗ್ರಾಮಸ್ಥರಿಂದ ಪ್ರತಿಭಟನೆ | ಸುಳ್ಯದಲ್ಲಿ ಇನ್ನೊಂದು ಮತದಾನ ಬಹಿಷ್ಕಾರದ ಎಚ್ಚರಿಕೆ…! |

Share

ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಟಪ್ಪಾಲುಕಟ್ಟೆ ಪೂದೆ ದೇವರಕಾನ ಮುರುಳ್ಯ  ಸಂಪರ್ಕಿಸುವ  ಅನೇಕ  ಸಮಯಗಳಿಂದ  ಹದಗೆಟ್ಟಿದ್ದು ವಾಹನಸಂಚಾರಕ್ಕೆ ತೀರಾ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ರಸ್ತೆ ದುರಸ್ತಿ ಮಾಡಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಈ ಸಂದರ್ಭ ರಸ್ತೆ ದುರಸ್ತಿಯಾಗದೇ ಇದ್ದರೆ ಮುಂದಿನ ಚುನಾವಣೆ ಬಹಿಷ್ಕಾರ ಮಾಡುವುದಾಗಿ ಎಚ್ಚರಿಸಿದರು.

ಸುಳ್ಯ ತಾಲೂಕಿನಲ್ಲಿ ರಸ್ತೆ ದುರಸ್ತಿಗೆ ಆಗ್ರಹಿಸಿ ವಿವಿದಡೆ ಹೋರಾಟಗಳು ನಡೆಯುತ್ತಲೇ ಇದೆ. ಇದೀಗ ಟಪ್ಪಾಲುಕಟ್ಟೆ ಪೂದೆ ದೇವರಕಾನ ಮುರುಳ್ಯ ರಸ್ತೆಯ ಅಭಿವೃದ್ಧಿಯೂ ಸೇರಿಕೊಂಡಿದೆ. ದುರಸ್ಥಿಪಡಿಸಬೇಕೆಂದು ಆಗ್ರಹಿಸಿ  ಗ್ರಾಮಸ್ಥರು  ಪ್ರತಿಭಟನೆ ನಡೆಸಿದರು. ದೇವರಕಾನ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಡಾ.ರಾಮಚಂದ್ರ ಭಟ್ ಮಾತನಾಡಿ ಹಲವು ವರ್ಷಗಳ ಹಿಂದೆ ಡಾಮರೀಕರಣವಾದ ರಸ್ತೆಯಲ್ಲಿ ಜಲ್ಲಿ ಡಾಮರು ಎದ್ದು ಹೋಗಿ ಈಗ ವಾಹನ ಸಂಚಾರಕ್ಕೆ ತೊಂದರೆಯಾಗಿದೆ ನಡೆದಾಡಲು ಕೂಡ ಆಗುವುದಿಲ್ಲ.ಕೆಲವು ವರ್ಷಗಳಿಂದ ಸಂಬಂಧಪಟ್ಟ ಇಲಾಖೆಗಳಿಗೆ ತಿಳಿಸಿಯಾಗಿದೆ. ಆದರೆ ಯಾವುದೇ ಪ್ರಯೋಜನವಾಗಲಿಲ್ಲ ಎಂದು ಅಸಮಾಧಾನ ತೋಡಿಕೊಂಡರು.

ಪೂದೆ ದೇವಸ್ಥಾನದ ಅಧ್ಯಕ್ಷ ಪದ್ಮನಾಭ ಪೂದೆ ಮಾತನಾಡಿ, ಅವಳಿ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಕಾರ್ಯ ಕಾಮಗಾರಿ ಕೂಡ ಭರದಿಂದ ಸಾಗುತ್ತಿದ್ದು ರಸ್ತೆ ಸರಿ ಇಲ್ಲದೆ ದೇವಸ್ಥಾನಕ್ಕೆ ಜಲ್ಲಿಮರಳು ಸೇರಿದಂತೆ ವಸ್ತು ಸಾಗಾಟಕ್ಕೆ ಕಷ್ಟವಾಗಿದೆ ಎಂದರು.

ಗ್ರಾಮಸ್ಥರು ಪ್ರತಿಭಟನಾ ಸಭೆಯಲ್ಲಿ ಮಾತನಾಡಿ ಈ ರಸ್ತೆ ಬಾಳಿಲ ಮತ್ತು ಮುರುಳ್ಯ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟಿದ್ದು ಎರಡು ಪಂಚಾಯತ್ ನವರು ಸೇರಿ ನಮ್ಮ ರಸ್ತೆಯನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭ ನೂರಾರು ನಾಗರಿಕರು ಸೇರಿದ್ದು ಕೂಡಲೇ ರಸ್ತೆ ದುರಸ್ಥಿಪಡಿಸದಿದ್ದಲ್ಲಿ ಮುಂದಿನ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲಾಗುವುದು ಎಂದು ಎಚ್ಚರಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

3 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

3 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

11 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

16 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

17 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago