#DeveGowda | ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶ್ಲೋಕ, ಪ್ರಾರ್ಥನೆಗಳನ್ನು ಓದಿದ ಮಾಜಿ ಪ್ರಧಾನಿ ಎಚ್‌ ಡಿ ದೇವೇ ಗೌಡ | ದೇವೇ ಗೌಡರ ಜೀವನೋತ್ಸಾಹದ ಮಾದರಿ |

October 9, 2023
9:57 AM
ಮಾಜಿ ಪ್ರಧಾನಿ ಎಚ್‌ ಡಿ ದೇವೇ ಗೌಡ ಅವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಈ ಸಂದರ್ಭ ಬೆಳಗ್ಗೆ ಬಿಡುವು ಸಿಕ್ಕಾಗ ಸುಬ್ರಹ್ಮಣ್ಯ ಶ್ಲೋಕ, ಪ್ರಾರ್ಥನೆಯ ಪುಸ್ತಕ ಓದಿದರು. ಈ ಬಗ್ಗೆ ಜೆಡಿಎಸ್‌ ಮುಖಂಡ ಎಂ ಬಿ ಸದಾಶಿವ ಅವರು ತಮ್ಮ ಪೇಸ್‌ಬುಕ್‌ ವಾಲಲ್ಲಿ ಬರೆದಿದ್ದಾರೆ. ಇದರಲ್ಲಿ ದೇವೇ ಗೌಡರ ಜೀವನೋತ್ಸಾಹದ ಬಗ್ಗೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಪ್ರಧಾನಿ ಎಚ್‌ ಡಿ ದೇವೇ ಗೌಡ ಭೇಟಿ ನೀಡಿ ದೇವರ ದರ್ಶನ ಪಡೆದರು. ಕುಕ್ಕೆ ಕ್ಷೇತ್ರಕ್ಕೆ ಪ್ರತೀ ವರ್ಷ ಭೇಟಿ ನೀಡುವ ದೇವೇ ಗೌಡರು ಈ ಬಾರಿಯೂ ಕ್ಷೇತ್ರ ದರ್ಶನ ಮಾಡಿದ್ದಾರೆ. ಈ ಬಾರಿ ಬಿಡುವಿನ ನಡುವೆ ಸುಬ್ರಹ್ಮಣ್ಯ ಶ್ಲೋಕ, ಪ್ರಾರ್ಥನೆಗಳ ಪುಸ್ತಕವನ್ನು ಓದುತ್ತಾ ಕುಳಿತಿದ್ದರು.

Advertisement
Advertisement

ಭಾನುವಾರ ಸಂಜೆ‌ ಹೆಲಿಕ್ಟಾಪರ್ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ತಲುಪಬೇಕಿದ್ದ ದೇವೇ ಗೌಡರು ಪ್ರತಿಕೂಲ ಹವಾಮಾನದ  ಕಾರಣದಿಂದ ಹೆಲಿಕಾಪ್ಟರ್‌ ಬಾರದೆ ವಿಮಾನ ಮೂಲಕ ಮಂಗಳೂರು ಬಂದು ಅಲ್ಲಿಂದ ವಾಹನದಲ್ಲಿ  ಕುಕ್ಕೆಗೆ ತಡರಾತ್ರಿ ತಲಪಿದರು.

Advertisement

ದೇವೇ ಗೌಡರಿಗೆ ಆಶ್ಲೇಷ ನಕ್ಷತ್ರದಂದು ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಆಗಬೇಕಿತ್ತು, ಪೂಜೆ ಸಲ್ಲಿಸಬೇಕಿತ್ತು. ಸುಬ್ರಹ್ಮಣ್ಯ ದೇವರಿಗೆ ಆಶ್ಲೇಷ ನಕ್ಷತ್ರ ವಿಶೇಷವಾದ ದಿನವಾಗಿದೆ. ದೇವೇ ಗೌಡರು ಪ್ರತೀ ಬಾರಿ ವಿಶೇಷ ಪೂಜೆ, ಸೇವೆ ಸಲ್ಲಿಸಲು ಬಂದಿರುವುದು ಕೂಡಾ ಆಶ್ಲೇಷ ನಕ್ಷತ್ರದಂದೇ. ಈ ಬಾರಿ ಪತ್ನಿ ಚೆನ್ನಮ್ಮ ಸಹಿತ ಆಗಮಿಸಿದ ದೇವೇ ಗೌಡರು ಸಹಾಯಕರ ಮೂಲಕ ಕ್ಷೇತ್ರಕ್ಕೆ ಸುತ್ತು ಹಾಕಿ ಪೂಜೆ ಸಲ್ಲಿಸಿದರು.

ದೇವೇ ಗೌಡರ ಜೀವನೋತ್ಸಾಹ ಎಲ್ಲರಿಗೂ ಮೆಚ್ಚುಗೆಯಾಗುವಂತಹದ್ದು.90 ವರ್ಷದ ದೇವೇ ಗೌಡರು ಈಗಲೂ ಧ್ಯಾನದಂತಹ ಕೆಲಸಕ್ಕೂ ಸಮಯ ಮೀಸಲಿಡುತ್ತಾರೆ. ಭಾನುವಾರ ರಾತ್ರಿ 10 ಘಂಟೆ ರಾತ್ರಿ ಮಂಗಳೂರು ತಲುಪಿ ಅಲ್ಲಿಂದ 1.30 ಕ್ಕೆ ಕುಕ್ಕೆ ಗೆ ಬಂದರು.6 ಘಂಟೆಗೆ ಮತ್ತೆ ಸ್ನಾನ ಮುಗಿಸಿ ದೇವಸ್ಥಾನಕ್ಕೆ ಪೂಜೆಗೆ ಹೊರಟು ಕಾರಿನಲ್ಲಿ ಕುಳಿತು ಚೆನ್ನಮ್ಮ ಅವರನ್ನು ಕಾಯುತ್ತಿದ್ದರು. ಈ 10 ನಿಮಿಷದ ಕಾಲವನ್ನು ವ್ಯರ್ಥ ಮಾಡದೆ ತನ್ನ ಬಳಿಯೇ ಇದ್ದ ಸುಬ್ರಹ್ಮಣ್ಯ ಶ್ಲೋಕ, ಪ್ರಾರ್ಥನೆಗಳ ಪುಸ್ತಕವನ್ನು ವಾಚಿಸಿದರು. ಈ ಬಗ್ಗೆ ಜೆಡಿಎಸ್‌ ಮುಖಂಡ ಎಂ ಬಿ ಸದಾಶಿವ ಅವರು ತಮ್ಮ ಪೇಸ್‌ಬುಕ್‌ ವಾಲಲ್ಲಿ ಬರೆದುಕೊಂಡಿದ್ದಾರೆ.

Advertisement

ಮಾಜಿ ಪ್ರಧಾನಿ ಎಚ್‌ ಡಿ ದೇವೇ ಗೌಡರು ಏಕಾಏಕಿ ಈ ಪುಸ್ತಕವನ್ನು ತೆರೆದು ಓದಲು ಸಾಧ್ಯವಿಲ್ಲ, ಈ ಹಿಂದೆಯೂ ಅವರು ಶ್ಲೋಕ, ಪ್ರಾರ್ಥನೆಯ ಪುಸ್ತಕಗಳನ್ನು ಓದಿರುತ್ತಾರೆ. ವ್ಯಕ್ತಿಯ ಬದುಕಿನ ಯಶಸ್ಸಿನ ಹಿಂದೆ, ಜೀವನೋತ್ಸಾಹದ ಹಿಂದೆ ಇಂತಹ ಸಂಗತಿಗಳೂ ಕಾರಣವಾಗುತ್ತದೆ.

Advertisement

ಜೆಡಿಎಸ್‌ ಮುಖಂಡ ಎಂ ಬಿ ಸದಾಶಿವ ಅವರು ಈ ಬಗ್ಗೆ ಪೇಸ್‌ಬುಕ್‌ ವಾಲಲ್ಲಿ  ಬರೆದುಕೊಂಡಿದ್ದಾರೆ. ಅನೇಕರು ದೇವೇ ಗೌಡರ ಜೀವನೋತ್ಸಾಹದ ಬಗ್ಗೆ, ಅವರ ಧಾರ್ಮಿಕ ನಂಬಿಕೆಗಳ ಬಗ್ಗೆ ಕಮೆಂಟ್‌ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಟರ್ಕಿ ದೇಶದ ಸಜ್ಜೆ ಬೆಳೆದ ರೈತ | ಪ್ರಯೋಗದಲ್ಲಿ ಯಶಸ್ಸು ಕಂಡ ರೈತ |
September 28, 2024
8:39 PM
by: ದ ರೂರಲ್ ಮಿರರ್.ಕಾಂ
ಲಂಚ ಕೇಳಿದರೆ ನನ್ನ ವಿಳಾಸಕ್ಕೆ ಪತ್ರ ಬರೆಯಿರಿ |ಉಪಮುಖ್ಯಮಂತ್ರಿ ಡಿ .ಕೆ. ಶಿವಕುಮಾರ್
September 28, 2024
7:52 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಆಮದು ಚರ್ಚೆಯಾಗುತ್ತಿದ್ದಂತೆಯೇ ಬರ್ಮಾ ಅಡಿಕೆ ಕಳ್ಳಸಾಗಾಣಿಕೆ ಪತ್ತೆ | ಅಸ್ಸಾಂ ಗಡಿಯಲ್ಲಿ 2 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ |
September 28, 2024
7:27 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28.09.2024 | ರಾಜ್ಯದಾದ್ಯಂತ ಗುಡುಗು ಸಹಿತ ಮಳೆ ಸಾಧ್ಯತೆ
September 28, 2024
12:16 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror