Advertisement
ಪ್ರಮುಖ

#DeveGowda | ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶ್ಲೋಕ, ಪ್ರಾರ್ಥನೆಗಳನ್ನು ಓದಿದ ಮಾಜಿ ಪ್ರಧಾನಿ ಎಚ್‌ ಡಿ ದೇವೇ ಗೌಡ | ದೇವೇ ಗೌಡರ ಜೀವನೋತ್ಸಾಹದ ಮಾದರಿ |

Share

ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಪ್ರಧಾನಿ ಎಚ್‌ ಡಿ ದೇವೇ ಗೌಡ ಭೇಟಿ ನೀಡಿ ದೇವರ ದರ್ಶನ ಪಡೆದರು. ಕುಕ್ಕೆ ಕ್ಷೇತ್ರಕ್ಕೆ ಪ್ರತೀ ವರ್ಷ ಭೇಟಿ ನೀಡುವ ದೇವೇ ಗೌಡರು ಈ ಬಾರಿಯೂ ಕ್ಷೇತ್ರ ದರ್ಶನ ಮಾಡಿದ್ದಾರೆ. ಈ ಬಾರಿ ಬಿಡುವಿನ ನಡುವೆ ಸುಬ್ರಹ್ಮಣ್ಯ ಶ್ಲೋಕ, ಪ್ರಾರ್ಥನೆಗಳ ಪುಸ್ತಕವನ್ನು ಓದುತ್ತಾ ಕುಳಿತಿದ್ದರು.

ಭಾನುವಾರ ಸಂಜೆ‌ ಹೆಲಿಕ್ಟಾಪರ್ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ತಲುಪಬೇಕಿದ್ದ ದೇವೇ ಗೌಡರು ಪ್ರತಿಕೂಲ ಹವಾಮಾನದ  ಕಾರಣದಿಂದ ಹೆಲಿಕಾಪ್ಟರ್‌ ಬಾರದೆ ವಿಮಾನ ಮೂಲಕ ಮಂಗಳೂರು ಬಂದು ಅಲ್ಲಿಂದ ವಾಹನದಲ್ಲಿ  ಕುಕ್ಕೆಗೆ ತಡರಾತ್ರಿ ತಲಪಿದರು.

ದೇವೇ ಗೌಡರಿಗೆ ಆಶ್ಲೇಷ ನಕ್ಷತ್ರದಂದು ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಆಗಬೇಕಿತ್ತು, ಪೂಜೆ ಸಲ್ಲಿಸಬೇಕಿತ್ತು. ಸುಬ್ರಹ್ಮಣ್ಯ ದೇವರಿಗೆ ಆಶ್ಲೇಷ ನಕ್ಷತ್ರ ವಿಶೇಷವಾದ ದಿನವಾಗಿದೆ. ದೇವೇ ಗೌಡರು ಪ್ರತೀ ಬಾರಿ ವಿಶೇಷ ಪೂಜೆ, ಸೇವೆ ಸಲ್ಲಿಸಲು ಬಂದಿರುವುದು ಕೂಡಾ ಆಶ್ಲೇಷ ನಕ್ಷತ್ರದಂದೇ. ಈ ಬಾರಿ ಪತ್ನಿ ಚೆನ್ನಮ್ಮ ಸಹಿತ ಆಗಮಿಸಿದ ದೇವೇ ಗೌಡರು ಸಹಾಯಕರ ಮೂಲಕ ಕ್ಷೇತ್ರಕ್ಕೆ ಸುತ್ತು ಹಾಕಿ ಪೂಜೆ ಸಲ್ಲಿಸಿದರು.

ದೇವೇ ಗೌಡರ ಜೀವನೋತ್ಸಾಹ ಎಲ್ಲರಿಗೂ ಮೆಚ್ಚುಗೆಯಾಗುವಂತಹದ್ದು.90 ವರ್ಷದ ದೇವೇ ಗೌಡರು ಈಗಲೂ ಧ್ಯಾನದಂತಹ ಕೆಲಸಕ್ಕೂ ಸಮಯ ಮೀಸಲಿಡುತ್ತಾರೆ. ಭಾನುವಾರ ರಾತ್ರಿ 10 ಘಂಟೆ ರಾತ್ರಿ ಮಂಗಳೂರು ತಲುಪಿ ಅಲ್ಲಿಂದ 1.30 ಕ್ಕೆ ಕುಕ್ಕೆ ಗೆ ಬಂದರು.6 ಘಂಟೆಗೆ ಮತ್ತೆ ಸ್ನಾನ ಮುಗಿಸಿ ದೇವಸ್ಥಾನಕ್ಕೆ ಪೂಜೆಗೆ ಹೊರಟು ಕಾರಿನಲ್ಲಿ ಕುಳಿತು ಚೆನ್ನಮ್ಮ ಅವರನ್ನು ಕಾಯುತ್ತಿದ್ದರು. ಈ 10 ನಿಮಿಷದ ಕಾಲವನ್ನು ವ್ಯರ್ಥ ಮಾಡದೆ ತನ್ನ ಬಳಿಯೇ ಇದ್ದ ಸುಬ್ರಹ್ಮಣ್ಯ ಶ್ಲೋಕ, ಪ್ರಾರ್ಥನೆಗಳ ಪುಸ್ತಕವನ್ನು ವಾಚಿಸಿದರು. ಈ ಬಗ್ಗೆ ಜೆಡಿಎಸ್‌ ಮುಖಂಡ ಎಂ ಬಿ ಸದಾಶಿವ ಅವರು ತಮ್ಮ ಪೇಸ್‌ಬುಕ್‌ ವಾಲಲ್ಲಿ ಬರೆದುಕೊಂಡಿದ್ದಾರೆ.

ಮಾಜಿ ಪ್ರಧಾನಿ ಎಚ್‌ ಡಿ ದೇವೇ ಗೌಡರು ಏಕಾಏಕಿ ಈ ಪುಸ್ತಕವನ್ನು ತೆರೆದು ಓದಲು ಸಾಧ್ಯವಿಲ್ಲ, ಈ ಹಿಂದೆಯೂ ಅವರು ಶ್ಲೋಕ, ಪ್ರಾರ್ಥನೆಯ ಪುಸ್ತಕಗಳನ್ನು ಓದಿರುತ್ತಾರೆ. ವ್ಯಕ್ತಿಯ ಬದುಕಿನ ಯಶಸ್ಸಿನ ಹಿಂದೆ, ಜೀವನೋತ್ಸಾಹದ ಹಿಂದೆ ಇಂತಹ ಸಂಗತಿಗಳೂ ಕಾರಣವಾಗುತ್ತದೆ.

ಜೆಡಿಎಸ್‌ ಮುಖಂಡ ಎಂ ಬಿ ಸದಾಶಿವ ಅವರು ಈ ಬಗ್ಗೆ ಪೇಸ್‌ಬುಕ್‌ ವಾಲಲ್ಲಿ  ಬರೆದುಕೊಂಡಿದ್ದಾರೆ. ಅನೇಕರು ದೇವೇ ಗೌಡರ ಜೀವನೋತ್ಸಾಹದ ಬಗ್ಗೆ, ಅವರ ಧಾರ್ಮಿಕ ನಂಬಿಕೆಗಳ ಬಗ್ಗೆ ಕಮೆಂಟ್‌ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

1 day ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

1 day ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago