Advertisement
ಪ್ರಮುಖ

#DeveGowda | ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶ್ಲೋಕ, ಪ್ರಾರ್ಥನೆಗಳನ್ನು ಓದಿದ ಮಾಜಿ ಪ್ರಧಾನಿ ಎಚ್‌ ಡಿ ದೇವೇ ಗೌಡ | ದೇವೇ ಗೌಡರ ಜೀವನೋತ್ಸಾಹದ ಮಾದರಿ |

Share

ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಪ್ರಧಾನಿ ಎಚ್‌ ಡಿ ದೇವೇ ಗೌಡ ಭೇಟಿ ನೀಡಿ ದೇವರ ದರ್ಶನ ಪಡೆದರು. ಕುಕ್ಕೆ ಕ್ಷೇತ್ರಕ್ಕೆ ಪ್ರತೀ ವರ್ಷ ಭೇಟಿ ನೀಡುವ ದೇವೇ ಗೌಡರು ಈ ಬಾರಿಯೂ ಕ್ಷೇತ್ರ ದರ್ಶನ ಮಾಡಿದ್ದಾರೆ. ಈ ಬಾರಿ ಬಿಡುವಿನ ನಡುವೆ ಸುಬ್ರಹ್ಮಣ್ಯ ಶ್ಲೋಕ, ಪ್ರಾರ್ಥನೆಗಳ ಪುಸ್ತಕವನ್ನು ಓದುತ್ತಾ ಕುಳಿತಿದ್ದರು.

Advertisement
Advertisement

ಭಾನುವಾರ ಸಂಜೆ‌ ಹೆಲಿಕ್ಟಾಪರ್ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ತಲುಪಬೇಕಿದ್ದ ದೇವೇ ಗೌಡರು ಪ್ರತಿಕೂಲ ಹವಾಮಾನದ  ಕಾರಣದಿಂದ ಹೆಲಿಕಾಪ್ಟರ್‌ ಬಾರದೆ ವಿಮಾನ ಮೂಲಕ ಮಂಗಳೂರು ಬಂದು ಅಲ್ಲಿಂದ ವಾಹನದಲ್ಲಿ  ಕುಕ್ಕೆಗೆ ತಡರಾತ್ರಿ ತಲಪಿದರು.

Advertisement

ದೇವೇ ಗೌಡರಿಗೆ ಆಶ್ಲೇಷ ನಕ್ಷತ್ರದಂದು ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಆಗಬೇಕಿತ್ತು, ಪೂಜೆ ಸಲ್ಲಿಸಬೇಕಿತ್ತು. ಸುಬ್ರಹ್ಮಣ್ಯ ದೇವರಿಗೆ ಆಶ್ಲೇಷ ನಕ್ಷತ್ರ ವಿಶೇಷವಾದ ದಿನವಾಗಿದೆ. ದೇವೇ ಗೌಡರು ಪ್ರತೀ ಬಾರಿ ವಿಶೇಷ ಪೂಜೆ, ಸೇವೆ ಸಲ್ಲಿಸಲು ಬಂದಿರುವುದು ಕೂಡಾ ಆಶ್ಲೇಷ ನಕ್ಷತ್ರದಂದೇ. ಈ ಬಾರಿ ಪತ್ನಿ ಚೆನ್ನಮ್ಮ ಸಹಿತ ಆಗಮಿಸಿದ ದೇವೇ ಗೌಡರು ಸಹಾಯಕರ ಮೂಲಕ ಕ್ಷೇತ್ರಕ್ಕೆ ಸುತ್ತು ಹಾಕಿ ಪೂಜೆ ಸಲ್ಲಿಸಿದರು.

ದೇವೇ ಗೌಡರ ಜೀವನೋತ್ಸಾಹ ಎಲ್ಲರಿಗೂ ಮೆಚ್ಚುಗೆಯಾಗುವಂತಹದ್ದು.90 ವರ್ಷದ ದೇವೇ ಗೌಡರು ಈಗಲೂ ಧ್ಯಾನದಂತಹ ಕೆಲಸಕ್ಕೂ ಸಮಯ ಮೀಸಲಿಡುತ್ತಾರೆ. ಭಾನುವಾರ ರಾತ್ರಿ 10 ಘಂಟೆ ರಾತ್ರಿ ಮಂಗಳೂರು ತಲುಪಿ ಅಲ್ಲಿಂದ 1.30 ಕ್ಕೆ ಕುಕ್ಕೆ ಗೆ ಬಂದರು.6 ಘಂಟೆಗೆ ಮತ್ತೆ ಸ್ನಾನ ಮುಗಿಸಿ ದೇವಸ್ಥಾನಕ್ಕೆ ಪೂಜೆಗೆ ಹೊರಟು ಕಾರಿನಲ್ಲಿ ಕುಳಿತು ಚೆನ್ನಮ್ಮ ಅವರನ್ನು ಕಾಯುತ್ತಿದ್ದರು. ಈ 10 ನಿಮಿಷದ ಕಾಲವನ್ನು ವ್ಯರ್ಥ ಮಾಡದೆ ತನ್ನ ಬಳಿಯೇ ಇದ್ದ ಸುಬ್ರಹ್ಮಣ್ಯ ಶ್ಲೋಕ, ಪ್ರಾರ್ಥನೆಗಳ ಪುಸ್ತಕವನ್ನು ವಾಚಿಸಿದರು. ಈ ಬಗ್ಗೆ ಜೆಡಿಎಸ್‌ ಮುಖಂಡ ಎಂ ಬಿ ಸದಾಶಿವ ಅವರು ತಮ್ಮ ಪೇಸ್‌ಬುಕ್‌ ವಾಲಲ್ಲಿ ಬರೆದುಕೊಂಡಿದ್ದಾರೆ.

Advertisement

ಮಾಜಿ ಪ್ರಧಾನಿ ಎಚ್‌ ಡಿ ದೇವೇ ಗೌಡರು ಏಕಾಏಕಿ ಈ ಪುಸ್ತಕವನ್ನು ತೆರೆದು ಓದಲು ಸಾಧ್ಯವಿಲ್ಲ, ಈ ಹಿಂದೆಯೂ ಅವರು ಶ್ಲೋಕ, ಪ್ರಾರ್ಥನೆಯ ಪುಸ್ತಕಗಳನ್ನು ಓದಿರುತ್ತಾರೆ. ವ್ಯಕ್ತಿಯ ಬದುಕಿನ ಯಶಸ್ಸಿನ ಹಿಂದೆ, ಜೀವನೋತ್ಸಾಹದ ಹಿಂದೆ ಇಂತಹ ಸಂಗತಿಗಳೂ ಕಾರಣವಾಗುತ್ತದೆ.

Advertisement

ಜೆಡಿಎಸ್‌ ಮುಖಂಡ ಎಂ ಬಿ ಸದಾಶಿವ ಅವರು ಈ ಬಗ್ಗೆ ಪೇಸ್‌ಬುಕ್‌ ವಾಲಲ್ಲಿ  ಬರೆದುಕೊಂಡಿದ್ದಾರೆ. ಅನೇಕರು ದೇವೇ ಗೌಡರ ಜೀವನೋತ್ಸಾಹದ ಬಗ್ಗೆ, ಅವರ ಧಾರ್ಮಿಕ ನಂಬಿಕೆಗಳ ಬಗ್ಗೆ ಕಮೆಂಟ್‌ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather |12-05-2024 | ಹಲವು ಕಡೆ ಮಳೆಯ ನಿರೀಕ್ಷೆ ಇದೆ |

ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

12 hours ago

ಪುತ್ತೂರಿನಲ್ಲಿ ಹಲಸು ಹಣ್ಣು ಮೇಳದ ಏಳನೇ ಆವೃತ್ತಿ : ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ

ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ,…

13 hours ago

ರಾಜ್ಯದ ಹಲವು ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆ : ರೈತರ ಮೊಗದಲ್ಲಿ ಸಂತಸ : ಕೆಲವೆಡೆ ಹಾನಿ

ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ…

13 hours ago

ಇಂದು ದೇಶ್ಯಾದ್ಯಂತ ಕಾಮೆಡ್-ಕೆ ಪರೀಕ್ಷೆ : ವಿದ್ಯಾರ್ಥಿಗಳ ಭವಿಷ್ಯದ ಮೆಟ್ಟಿಲು

ವಿದ್ಯಾರ್ಥಿಗಳ(Students) ಭವಿಷ್ಯದ ಪ್ರಶ್ನೆ. ಇದು ಅವರ ಪ್ರಮುಖ ಘಟ್ಟ. ಪಿಯುಸಿ(PUC) ಮುಗಿದ ಕೂಡಲೇ…

13 hours ago

25 ವರ್ಷಗಳ ಹಿಂದೆ ಹೋದ ದೃಷ್ಟಿ ವಾಪಸು ಬಂತು

ಚಿಕ್ಕ ವಯಸ್ಸಿನ ಕುಕನೂರಿನ ಶಿವಾನಂದ ಕ್ರಿಕೆಟ್ ಫೀಲ್ಡಿಂಗ್ ಮಾಡುತ್ತಿದ್ದ. ಚಂಡು ಕಳ್ಳಿಯ ಪೊದೆಯಲ್ಲಿ…

1 day ago